ಬ್ರೇಕಿಂಗ್ ನ್ಯೂಸ್
06-08-22 01:51 pm Source: Vijayakarnataka ಕ್ರೀಡೆ
ಮುಂಬರುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅತ್ಯುತ್ತಮ ಆರಂಭಿಕ ಜೋಡಿಯನ್ನು ಗುರುತಿಸಲು ಪ್ರಯತ್ನಿಸುತ್ತಿರುವ ಟೀಮ್ ಇಂಡಿಯಾಗೆ ಮಾಜಿ ಕ್ರಿಕೆಟಿಗ ದೀಪ್ದಾಸ್ಗುಪ್ತಾ, ಮೂರನೇ ಆಯ್ಕೆಯ ಆರಂಭಿಕ ಬ್ಯಾಟ್ಸ್ಮನ್ ಆಗಿ ಪೃಥ್ವಿ ಶಾ ಅವರನ್ನು ಆಯ್ಕೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.
ಗಾಯಕ್ಕೆ ತುತ್ತಾಗಿರುವ ಕಾರಣ ಕೆ.ಎಲ್ ರಾಹುಲ್ ಅವರು ಕಳೆದ ಫೆಬ್ರವರಿಯಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ ಅವರ ಜೊತೆ ಸಾಕಷ್ಟು ಆಟಗಾರರಿಗೆ ಇನಿಂಗ್ಸ್ ಆರಂಭಿಸಲು ಅವಕಾಶ ಕಲ್ಪಿಸಲಾಗಿತ್ತು.
ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆ ರಿಷಭ್ ಪಂತ್ ಇನಿಂಗ್ಸ್ ಆರಂಭಿಸಿದ್ದರು. ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಪ್ರಯತ್ನಿಸಲಾಗಿದೆ. ಆದರೆ, ಟೀಮ್ ಮ್ಯಾನೇಜ್ಮಂಟ್ನ ಈ ಪ್ರಯೋಗ ಹೇಳಿಕೊಳ್ಳುವಂತೆ ವರ್ಕ್ಔಟ್ ಆಗಿಲ್ಲ ಆದರೆ, ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ 44 ಎಸೆತಗಳಲ್ಲಿ 76 ರನ್ ಗಳಿಸಿದ್ದು, ಸಮಾಧಾನದ ವಿಷಯ.
ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆ ರಿಷಭ್ ಪಂತ್ ಇನಿಂಗ್ಸ್ ಆರಂಭಿಸಿದ್ದರು. ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಪ್ರಯತ್ನಿಸಲಾಗಿದೆ. ಆದರೆ, ಟೀಮ್ ಮ್ಯಾನೇಜ್ಮಂಟ್ನ ಈ ಪ್ರಯೋಗ ಹೇಳಿಕೊಳ್ಳುವಂತೆ ವರ್ಕ್ಔಟ್ ಆಗಿಲ್ಲ ಆದರೆ, ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ 44 ಎಸೆತಗಳಲ್ಲಿ 76 ರನ್ ಗಳಿಸಿದ್ದು, ಸಮಾಧಾನದ ವಿಷಯ.
ಕಳೆದ 2021ರ ಜುಲೈನಲ್ಲಿ ಶ್ರೀಲಂಕಾ ವಿರುದ್ಧ ಪೃಥ್ವಿ ಶಾ ಕೊನೆಯ ಬಾರಿ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅವರು ಅತ್ಯುತ್ತಮವಾಗಿ ಆಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ 10 ಇನಿಂಗ್ಸ್ಗಳಲ್ಲಿ ಅವರು 152.97ರ ಸ್ಟ್ರೈಕ್ ರೇಟ್ನಲ್ಲಿ 283 ರನ್ ಗಳಿಸಿದ್ದರು.
ಮೂರನೇ ಆರಂಭಿಕ ಸ್ಥಾನಕ್ಕೆ ಮುಂಬೈ ಇಂಡಿಯನ್ಸ್ ಆರಂಭಿಕ ಇಶಾನ್ ಕಿಶನ್ ಅವರನ್ನು ಬೇಕಾದರೂ ಪ್ರಯತ್ನಿಸಬಹುದು. ಆದರೆ, ಎಡಗೈ ಬ್ಯಾಟ್ಸ್ಮನ್ ಇತ್ತೀಚೆಗೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆಂದು ಅವರು ಹೇಳಿದ್ದಾರೆ.
"ಇಶಾನ್ ಕಿಶನ್ ಅವರ ಅಂತಾರಾಷ್ಟ್ರೀಯ ದಾಖಲೆಗಳನ್ನು ನೀವು ನೋಡಬಹುದು. ಅವರು ಅತ್ಯುತ್ತಮವಾಗಿ ಆಡಿದ್ದಾರೆ. ವೃತ್ತಿ ಜೀವನವನ್ನು ಅತ್ಯುತ್ತಮವಾಗಿ ಆರಂಭಿಸಿದ್ದರು. ಆದರೆ, ಅವರು ಇತ್ತೀಚೆಗೆ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಡಿಸುವುದು ಅನುಮಾನ," ಎಂದಿದ್ದಾರೆ.
But He Can Give You A Brisk Start Deep Dasgupta Backs Prithvi Shaw As Indias Third Choice Opener For T20 World Cup.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm