ಬ್ರೇಕಿಂಗ್ ನ್ಯೂಸ್
26-08-22 02:44 pm Source: Vijayakarnataka ಕ್ರೀಡೆ
ಬೆಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್ ಆತಿಥ್ಯದಲ್ಲಿ 15ನೇ ಆವೃತ್ತಿಯ ಏಷ್ಯಾ ಕಪ್ ಟೂರ್ನಿ ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ನಡೆಯಲಿದೆ. ಏಳು ಬಾರಿ ಚಾಂಪಿಯನ್ಸ್ ಟೀಮ್ ಇಂಡಿಯಾ, ಈ ಬಾರಿಯೂ ಟ್ರೋಫಿ ಗೆಲ್ಲುವ ಫೇವರಿಟ್ ತಂಡವಾಗಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫಘಾನಿಸ್ತಾನ, ಬಾಂಗ್ಲಾದೇಶ ಮತ್ತು ಹಾಂಕಾಂಗ್ ತಂಡಗಳು ಟೂರ್ನಿಯಲ್ಲಿ ಪೈಪೋಟಿ ನಡೆಸಲಿವೆ. ಲೀಗ್ ಹಂತದಲ್ಲಿ 6 ತಂಡಗಳನ್ನು ಎರಡು ಗುಂಪನ್ನಾಗಿಸಲಾಗಿದೆ. 'ಎ;' ಗುಂಪಿನಲ್ಲಿ ಭಾರತ, ಪಾಕಿಸ್ತಾನ ಮತ್ತು ಹಾಂಕಾಂಗ್ ತಂಡಗಳು ಪೈಪೋಟಿ ನಡೆಸಲಿವೆ. 'ಬಿ' ಗುಂಪಿನಲ್ಲಿ ಅಫಘಾನಿಸ್ತಾ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳಿವೆ. ಅಗ್ರ ಎರಡು ತಂಡಗಳು ಸೂಪರ್ 4 ಹಂತಕ್ಕೆ ತೇರ್ಗಡೆಯಾಗಲಿವೆ.
ಟೂರ್ನಿ ಆಗಸ್ಟ್ 27ರಂದು ಶ್ರೀಲಂಕಾ ಮತ್ತು ಅಫಘಾನಿಸ್ತಾನ ನಡುವಣ ಉದ್ಘಾಟನಾ ಪಂದ್ಯದೊಂದಿಗೆ ಶುರುವಾಗಲಿದೆ. ಆದರೂ, ಇಡೀ ಕ್ರಿಕೆಟ್ ಜಗತ್ತಿನ ಕಣ್ಣು ಆಗಸ್ಟ್ 28ರಂದು ನಡೆಯಲಿರುವ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಕಾದಾಟದ ಮೇಲೆ ನೆಲೆಸಿದೆ.

ಈ ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಮಾತನಾಡಿರುವ ಪಾಕಿಸ್ತಾನ ತಂಡದ ಮಾಜಿ ಲೆಗ್ ಸ್ಪಿನ್ನರ್ ದಾನಿಶ್ ಕನೇರಿಯಾ, ಟೀಮ್ ಇಂಡಿಯಾ ತನ್ನ ತಂಡ ಆಯ್ಕೆ ಸಂದರ್ಭದಲ್ಲಿ ಗಾಯದ ಸಮಸ್ಯೆಯಿಂದ ಈಗಷ್ಟೇ ಚೇತರಿಸಿರುವ ಕೆ.ಎಲ್ ರಾಹುಲ್ ಅವರ ಬದಲು ಇನ್ಫಾರ್ಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಿಕೊಳ್ಳಬೇಕಿತ್ತು ಎಂದಿದ್ದಾರೆ.

"ಏಷ್ಯಾ ಕಪ್ ಟೂರ್ನಿಗೆ ಖಂಡಿತಾ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಿಕೊಳ್ಳಬೇಕಿತ್ತು. ಗಾಯದಿಂದ ಚೇತರಿಸಿರುವ ಕೆ.ಎಲ್ ರಾಹುಲ್ ಅವರಿಗೆ ಆಸ್ಟ್ರೇಲಿಯಾದ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಕಡೆಗೆ ಗಮನ ನೀಡಲು ಸಮಯಾವಕಾಶ ಕೊಡಬೇಕಿತ್ತು," ಎಂದು ಕ್ರಿಕೆಟ್ ನೆಕ್ಸ್ಟ್ ಕಾರ್ಯಕ್ರಮದಲ್ಲಿ ಕನೇರಿಯಾ ಹೇಳಿದ್ದಾರೆ.

"ಕೆ.ಎಲ್ ರಾಹುಲ್ ಈಗಷ್ಟೇ ಗಾಯದ ಸಮಸ್ಯೆಯಿಂದ ಚೇತರಿಸಿದ್ದಾರೆ. ಜಿಂಬಾಭ್ವೆ ಪ್ರವಾಸ ಮುಗಿಸಿ ಬಂದಿದ್ದಾರೆ. ಈಗ ಏಷ್ಯಾ ಕಪ್ ಆಡಲು ಮುಂದಾಗುತ್ತಿದ್ದಾರೆ. ಅವರ ಬದಲು ಉತ್ತಮ ಲಯದಲ್ಲಿರುವ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತು. ಆತ ಅದ್ಭುತ ಆಟವಾಡುತ್ತಿದ್ದಾನೆ. ಸಂಜುಗೆ ಭಾರತ ತಂಡದಲ್ಲಿ ಸತತ ಅವಕಾಶಗಳನ್ನು ಕೊಡಬೇಕಿದೆ. ಆತನಿಗೆ ಸ್ಥಿರ ಅವಕಾಶಗಳು ಸಿಗುತ್ತಿಲ್ಲ. ರಾಹುಲ್ ದ್ರಾವಿಡ್ ಅವರಿಗೆ ಸಂಜು ಬಗ್ಗೆ ಚೆನ್ನಾಗಿ ತಿಳಿದಿದೆ. ಅವರ ಪ್ರತಿಭೆ ಏನೆಂಬ ಅರಿವಿದೆ. ಹೀಗಾಗಿ ಸಂಜುಗೆ ಏಷ್ಯಾ ಕಪ್ ಆಡುವ ಅವಕಾಶ ಕೊಡಬೇಕಿತ್ತು," ಎಂದಿದ್ದಾರೆ.
ಏಷ್ಯಾ ಕಪ್ 2022 ಟೂರ್ನಿಯ ವೇಳಾಪಟ್ಟಿ ಹೀಗಿದೆ
Asia Cup 2022 Team India Should Have Selected Sanju Samson In Place Of Kl Rahul Says Danish Kaneria.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am