ಬ್ರೇಕಿಂಗ್ ನ್ಯೂಸ್
05-09-22 01:28 pm Source: Vijayakarnataka ಕ್ರೀಡೆ
ದುಬೈ: ಹಾಟ್ ಸ್ಟಾರ್ನ ಲೈವ್ ವೀಕ್ಷಣೆಯಲ್ಲಿ ಬರೋಬ್ಬರಿ 1.4 ದಶಲಕ್ಷ ಮಂದಿಯಿಂದ ವೀಕ್ಷಣೆಗೆ ಒಳಪಟ್ಟಿದ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ ನಡುವಣ ಏಷ್ಯಾ ಕಪ್ 2022 ಟೂರ್ನಿಯ ಸೂಪರ್-4 ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಅಚ್ಚರಿಯ ಸೋಲುಂಡಿತು. ಅಂದಹಾಗೆ ಟೂರ್ನಿಯ 'ಎ' ಗುಂಪಿನ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳಿಂದ ಪಾಕ್ ಎದುರು ಜಯ ದಾಖಲಿಸಿತ್ತು. ಈ ಸೋಲಿಗೆ ಪಾಕ್ ಪಡೆ ಇದೀಗ ಸೇಡು ತೀರಿಸಿಕೊಂಡಿದೆ.
ಸೂಪರ್-4 ಹಂತದಲ್ಲಿ ಟೀಮ್ ಇಂಡಿಯಾದ ಸೋಲು ಫೈನಲ್ ಹಾದಿಯನ್ನು ಕಠಿಣವನ್ನಾಗಿಸಿದೆ. ಏಕೆಂದರೆ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಉತ್ತಮ ಲಯದಲ್ಲಿರುವ ಶ್ರೀಲಂಕಾ ಮತ್ತು ಅಫಘಾನಿಸ್ತಾನ ಎದುರು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಅತ್ತ ಪಾಕಿಸ್ತಾನ ತಂಡ ಇನ್ನೊಂದು ಪಂದ್ಯ ಗೆದ್ದರೂ ಫೈನಲ್ನಲ್ಲಿ ತನ್ನ ಸ್ಥಾನ ಭದ್ರ ಪಡಿಸಿಕೊಳ್ಳಲಿದೆ.

ಸೆಪ್ಟೆಂಬರ್ 6ರಂದು ಭಾರತ ತಂಡ ಐದು ಬಾರಿಯ ಚಾಂಪಿಯನ್ಸ್ ಶ್ರೀಲಂಕಾ ಎದುರು ಪೈಪೋಟಿ ನಡೆಸಲಿದೆ. ಲೀಗ್ ಹಂತದ ಕೊನೇ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು 2 ವಿಕೆಟ್ಗಳ ರೋಚಕ ಜಯ ದಾಖಲಿಸಿ ಸೂಪರ್-4 ಹಂತಕ್ಕೆ ಕಾಲಿಟ್ಟಿರುವ ಶ್ರೀಲಂಕಾ ತಂಡ ಆತ್ಮವಿಶ್ವಾಸದ ಅಲೆಯಲ್ಲಿದೆ. ಹೀಗಾಗಿ ದ್ವೀಪರಾಷ್ಟ್ರದ ಎದುರು ಭಾರತ ತಂಡ ಜಯ ದಕ್ಕಿಸಕೊಳ್ಳಲು ತನ್ನ ಶ್ರೇಷ್ಠ ಆಟ ಹೊರತರಬೇಕಾದ ಅನಿವಾರ್ಯತೆ ಇದೆ. ಅಂದಹಾಗೆ ಸೂಪರ್-4 ಹಂತದ ಮೊದಲ ಹಣಾಹಣಿಯಲ್ಲಿ ಶ್ರೀಲಂಕಾ ತಂಡ ಅಫಘಾನಿಸ್ತಾನ ಎದುರು ಗೆದ್ದಿದ್ದು, ಇನ್ನೊಂದು ಪಂದ್ಯ ಗೆದ್ದರೂ ಫೈನಲ್ ತಲುಪುವ ಅತ್ಯುತ್ತಮ ಅವಕಾಶ ಹೊಂದಿದೆ.
ಅತ್ತ ಪಾಕಿಸ್ತಾನ ತಂಡ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಅಫಘಾನಿಸ್ತಾನ (ಸೆಪ್ಟೆಂಬರ್ 7) ಮತ್ತು ಶ್ರೀಲಂಕಾ (ಸೆಪ್ಟೆಂಬರ್ 9) ಎದುರು ಪೈಪೋಟಿ ನಡೆಸಲಿದ್ದು, ಎರಡರಲ್ಲಿ ಕನಿಷ್ಠ ಒಂದು ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಟೀಮ್ ಇಂಡಿಯಾಗೆ ತನ್ನ ಮುಂದಿನ ಎರಡೂ ಪಂದ್ಯಗಳಲ್ಲಿ ಶ್ರೀಲಂಕಾ ಮತ್ತು ಅಫಘಾನಿಸ್ತಾನ ಎದುರು ಬೃಹತ್ ಗೆಲುವು ದಾಖಲಿಸುವ ಅನಿವಾರ್ಯತೆ ಎದುರಾಗಿದೆ.
ಭಾರತ ತಂಡ ಅಫಘಾನಿಸ್ತಾನ ಮತ್ತು ಶ್ರೀಲಂಕಾ ಎದುರು ಗೆದ್ದರೆ ಒಟ್ಟು 4 ಅಂಕಗಳನ್ನು ಗಳಿಸಲಿದೆ. ಅತ್ತ, ಪಾಕಿಸ್ತಾನ ತಂಡಕ್ಕೆ ಕನಿಷ್ಠ ಒಂದು ಜಯ ಸಿಕ್ಕರೂ 4 ಅಂಕ ಗಳಿಸಲಿದೆ. ಸದ್ಯಕ್ಕೆ 2 ಪಂದ್ಯಗಳನ್ನು ಅತ್ಯುತ್ತಮವಾಗಿ ಗೆಲ್ಲುವ, ಅಂದರೆ ಉತ್ತಮ ರನ್ರೇಟ್ನೊಂದಿಗೆ ಗೆಲ್ಲುವ ತಂಡಕ್ಕೆ ಫೈನಲ್ ಟಿಕೆಟ್ ಸಿಗಲಿದೆ. ಭಾರತ ತಂಡ ಇನ್ನೊಂದು ಪಂದ್ಯ ಸೋತರೂ ಸ್ಪರ್ಧೆಯಿಂದ ಹೊರ ಬೀಳಲಿದೆ.
ಏಷ್ಯಾ ಕಪ್ 2022 ಟೂರ್ನಿಯ ಸೂಪರ್-4 ಹಂತದ ವೇಳಾಪಟ್ಟಿ/ಫಲಿತಾಂಶ
ಸೆಪ್ಟೆಂಬರ್ 03 (ಶನಿವಾರ): ಸೂಪರ್ 4 ಹಂತದ ಪಂದ್ಯ ಅಫಘಾನಿಸ್ತಾನ vs ಶ್ರೀಲಂಕಾ (ಶಾರ್ಜಾ)
(ಶ್ರೀಲಂಕಾ ತಂಡಕ್ಕೆ 4 ವಿಕೆಟ್ಗಳ ಜಯ)
ಸೆಪ್ಟೆಂಬರ್ 04 (ಭಾನುವಾರ): ಸೂಪರ್ 4 ಹಂತದ ಪಂದ್ಯ ಭಾರತ vs ಪಾಕಿಸ್ತಾನ (ದುಬೈ)
(ಭಾರತಕ್ಕೆ 5 ವಿಕೆಟ್ಗಳ ಸೋಲು)
Team India Can Still Make It To The Final Of Asia Cup 2022, Here Is All You Need To Know About
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm