Virat Kohli Might Retire From T20is After World Cup To Extend His Longevity In Other Formats Shoaib Akhtar.
">ಬ್ರೇಕಿಂಗ್ ನ್ಯೂಸ್
15-09-22 04:27 pm Source: Vijayakarnataka ಕ್ರೀಡೆ
ಬೆಂಗಳೂರು: ವಿರಾಟ್ ಕೊಹ್ಲಿ, ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳದಂತೆ ಆಗದೇ ಇರಲಿ. ಅವರು ಶ್ರೇಷ್ಠ ಲಯದಲ್ಲಿ ಇರುವಾಗಲೇ ನಿವೃತ್ತಿ ನೀಡಬೇಕು ಎಂದು ಕೆಲ ದಿನಗಳ ಹಿಂದಷ್ಟೇ ಹೇಳಿದ್ದ ಪಾಕಿಸ್ತಾನ ತಂಡದ ಮಾಜಿ ನಾಯಕ ಹಾಗೂ ಆಲ್ರೌಂಡರ್ ಶಾಹಿದ್ ಅಫ್ರಿದಿ ಹೇಳಿಕೆ ನೀಡಿ ಸಿಕ್ಕಾಪಟ್ಟೆ ಟ್ರೋಲಾಗಿದ್ದರು. ಇದೀಗ ಮಾಜಿ ವೇಗಿ ಶೊಯೇಬ್ ಅಖ್ತರ್ ಕೂಡ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಏಕೆಂದರೆ ಮುಂಬರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಬಳಿಕ ವಿರಾಟ್ ಕೊಹ್ಲಿ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವೃತ್ತಿಬದುಕಿಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಅಖ್ತರ್ ಭವಿಷ್ಯ ನುಡಿದಿದ್ದಾರೆ.
ಈ ವರ್ಷ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಆಯೋಜನೆ ಆಗಲಿದ್ದು, ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ಟೂರ್ನಿ ನಡೆಯಲಿದೆ. ಟೂರ್ನಿ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಸೆಪ್ಟೆಂಬರ್ 12ರಂದು (ಸೋಮವಾರ) ರೋಹಿತ್ ಶರ್ಮಾ ಸಾರಥ್ಯದ 15 ಆಟಗಾರರ ತಂಡ ಪ್ರಕಟ ಮಾಡಿತ್ತು.

"Virat Kohli may announce his retirement after the next T20 World Cup. Virat Kohli will bid adieu to the T20I cricket career in order to play more time in the remaining two formats of the game. If I had been in Kohli's place, I would have thought about it on a large scale and taken a decision," Akhtar said in an interview to India.com website.
ಇತ್ತೀಚೆಗೆ ಅಂತ್ಯಗೊಂಡ ಏಷ್ಯಾ ಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿದ ವಿರಾಟ್ ಕೊಹ್ಲಿ, ಆಡಿದ 5 ಪಂದ್ಯಗಳಲ್ಲಿ ಒಮ್ಮೆ ಡಕ್ಔಟ್ ಆದರೂ, ಒಟ್ಟಾರೆ 276 ರನ್ಗಳನ್ನು ಬಾರಿಸಿದ್ದರು. ಇದರಲ್ಲಿ 2 ಅರ್ಧಶತಕ ಮತ್ತೊಂದು ಅರ್ಧಶಕ ಸೇರಿವೆ. ಅಫಘಾನಿಸ್ತಾನ ಎದುರು ನಡೆದ ಸೂಪರ್ ಫೋರ್ ಪಂದ್ಯದಲ್ಲಿ ಅಜೇಯ 122 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಟಿ20-ಐ ಕೆರಿಯರ್ನಲ್ಲಿ ತಮ್ಮ ಮೊದಲ ಶತಕ ದಾಖಲಿಸಿದರು. ಈ ಮೂಲಕ 2019ರ ನವೆಂಬರ್ ಬಳಿಕ ಅನುಭವಿಸಿದ್ದ ಶತಕಗಳ ಬರಕ್ಕೆ ತೆರೆ ಎಳೆದಿದ್ದಾರೆ. ತಮ್ಮ 71ನೇ ಅಂತಾರಾಷ್ಟ್ರೀಯ ಶತಕ ದಕ್ಕಿಸಿಕೊಂಡು ಹಲವು ದಾಖಲೆಗಳನ್ನು ನುಚ್ಚು ನೂರು ಮಾಡಿದ್ದಾರೆ.

ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಕಾಯ್ದಿರಿಸಿದ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ದೀಪಕ್ ಚಹರ್, ರವಿ ಬಿಷ್ಣೋಯ್
ಟೂರ್ನಿ ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಲಿದ್ದು, ಭಾರತ ತಂಡ ಅಕ್ಟೋಬರ್ 10ಕ್ಕೆ ಕಾಂಗರೂ ನಾಡಿಗೆ ತೆರಳಲಿದೆ.
Virat Kohli Might Retire From T20is After World Cup To Extend His Longevity In Other Formats Shoaib Akhtar.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm