ಬ್ರೇಕಿಂಗ್ ನ್ಯೂಸ್
16-09-22 01:40 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ತನ್ನ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟ ಮಾಡಿದೆ. ಗಾಯದ ಸಮಸ್ಯೆ ಕಾರಣ ಏಷ್ಯಾ ಕಪ್ 2022 ಟೂರ್ನಿಯಿಂದ ಹೊರಗುಳಿದಿದ್ದ ಸ್ಟಾರ್ ಎಡಗೈ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ, ಇದೀಗ ವಿಶ್ವಕಪ್ ಮೂಲಕ ಪಾಕ್ ತಂಡಕ್ಕೆ ಕಮ್ಬ್ಯಾಕ್ ಮಾಡುವುದನ್ನು ಎದುರು ನೋಡುತ್ತಿದ್ದಾರೆ. ಅಂದಹಾಗೆ ಕಳೆದ ಜುಲೈನಲ್ಲಿ ಅವರು ಮಂಡಿ ನೋವಿನ ಗಾಯದ ಸಮಸ್ಯೆಗೆ ತುತ್ತಾಗಿದ್ದರು.
ಇದೀಗ ತಮ್ಮ ಸ್ವಂತ ಖರ್ಚಿನಲ್ಲಿ ಇಂಗ್ಲೆಂಡ್ಗೆ ತೆರಳಿ ಚಿಕಿತ್ಸೆ ಪಡೆದಿರುವ ಶಾಹೀನ್ ಶಾ ಅಫ್ರಿದಿ, ಪುನಶ್ಚೇತನ ಶಿಬಿರದಲ್ಲಿದ್ದಾರೆ. ಈ ಕುರಿತಾಗಿ ಮಾತಿಗಿಳಿದ ಪಾಕಿಸ್ತಾನ ತಂಡದ ಮಾಜಿ ನಾಯಕ ಹಾಗೂ ನಿವೃತ ಆಲ್ರೌಂಡರ್ ಶಾಹಿದ್ ಅಫ್ರಿದಿ, ತಮ್ಮ ಹಿರಿಯ ಪುತ್ರಿಯನ್ನು ವಿವಾಹವಾಗಲಿರುವ ಶಾಹೀನ್ ಶಾ ಅಫ್ರಿದಿ ಅವರ ಗಾಯದ ಸಮಸ್ಯೆಗೆ ನೆರವಾಗಲು ಪಿಸಿಬಿ ಯಾವುದೇ ವೈದ್ಯಕೀಯ ವೆಚ್ಚ ಭರಿಸಿಲ್ಲ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸ್ಟಾರ್ ವೇಗಿ ತಮ್ಮ ಜೇಬಿನಿಂದ ದುಡ್ಡು ಖರ್ಚು ಮಾಡಿ ಚಿಕಿತ್ಸೆ ಪಡೆಯುವಂತ್ತಾಗಿದೆ ಎಂದು ಗುಡುಗಿದ್ದಾರೆ.
ಏಷ್ಯಾ ಕಪ್ ಅಲ್ಲದೆ ಈಗ ತಾಯ್ನಾಡಿನಲ್ಲಿ ಪ್ರವಾಸಿ ಇಂಗ್ಲೆಂಡ್ ವಿರುದ್ಧದ 7 ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಿಂದಲೂ ಶಾಹೀನ್ ಶಾ ಹೊರಗುಳಿಯುವಂತ್ತಾಗಿದೆ. ಆದರೆ, ಅಕ್ಟೋಬರ್ 16ರಂದು ಶುರುವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಹೊತ್ತಿಗೆ ಚೇತರಿಸುತ್ತಾರೆ ಎಂಬ ವಿಶ್ವಾಸದಿಂದ ಅವರನ್ನು ಪಿಸಿಬಿ ಪಾಕಿಸ್ತಾನದ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿದೆ. ಟೂರ್ನಿಯಲ್ಲಿ ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿ ಟೀಮ್ ಇಂಡಿಯಾ ಎದುರು ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನಾಡಲಿದೆ.
"ಶಾಹೀನ್ ಬಗ್ಗೆ ಮಾತನಾಡುವುದಾದರೆ ಆತ ಇಂಗ್ಲೆಂಡ್ಗೆ ತನ್ನ ಸ್ವಂತ ದುಡ್ಡಿನಿಂದ ತೆರಳಿದ್ದಾನೆ. ಏರ್ ಟಿಕೆಟ್, ತಂಗಲು ಹೋಟೆಲ್ ಎಲ್ಲದಕ್ಕೂ ತನ್ನ ಜೇಬಿನಿಂದಲೇ ಹಣ ನೀಡಿದ್ದಾನೆ. ಆತನಿಗೆ ವೈದ್ಯರ ವ್ಯವಸ್ಥೆಯನ್ನು ನಾನೇ ಮಾಡಿಕೊಡಬೇಕಾಯಿತು. ಆ ನಂತರ ಆತ ವೈದ್ಯರನ್ನು ಸಂಪರ್ಕಿಸಿದ್ದಾನೆ. ಪಿಸಿಬಿ ಇಲ್ಲಿ ಏನನ್ನೂ ಮಾಡುತ್ತಿಲ್ಲ. ಶಾಹೀನ್ ಶಾ ಎಲ್ಲವನ್ನೂ ತಮ್ಮ ಖರ್ಚಿನಲ್ಲೇ ಮಾಡುವಂತ್ತಾಗಿದೆ," ಎಂದು ಶಾಹಿದ್ ಅಫ್ರಿದಿ ಇತ್ತೀಚಿನ ಸಂದರ್ಶನದಲ್ಲಿ ಪಿಸಿಬಿ ವಿರುದ್ಧ ಗುಡುಗಿದ್ದರು.
Shaheen Shah Afridi Paying For Rehabilitation Out Of His Own Pocket Says Shahid Afridi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm