ಬ್ರೇಕಿಂಗ್ ನ್ಯೂಸ್
23-09-22 02:03 pm Source: Vijayakarnataka ಕ್ರೀಡೆ
ಚೆನ್ನೈ: ಆಲ್ರೌಂಡ್ ಆಟವಾಡಿದ ಸಂಜು ಸ್ಯಾಮ್ಸನ್ ಸಾರಥ್ಯದ ಭಾರತ 'ಎ' ತಂಡ ನಿರೀಕ್ಷೆಯಂತೆ ಪ್ರವಾಸಿ ನ್ಯೂಜಿಲೆಂಡ್ 'ಎ' ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಗಳಿಸಿದೆ. ಶಾರ್ದುಲ್ ಠಾಕೂರ್ (32ಕ್ಕೆ 4) ಭರ್ಜರಿ ಬೌಲಿಂಗ್ ದಾಳಿ ಸಂಘಟಿಸುವ ಮೂಲಕ ಗೆಲುವಿನ ರೂವಾರಿಯಾದರು.
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 'ಎ' ತಂಡ ಆತಿಥೇಯರ ಶಿಸ್ತಿನ ದಾಳಿಯೆದುರು ತಬ್ಬಿಬ್ಬಾಯಿತು. ಶಾರ್ದುಲ್ ಠಾಕೂರ್ ಮತ್ತು ಯುವ ವೇಗದ ಬೌಲರ್ (30ಕ್ಕೆ 3) ಭರ್ಜರಿ ಬೌಲಿಂಗ್ ದಾಳಿ ಸಂಘಟಿಸಿದ ಪರಿಣಾಮ ಕಿವೀಸ್ ಪಡೆ 51 ರನ್ ಗಳಿಸುವ ಹೊತ್ತಿಗೆ 6 ವಿಕೆಟ್ಗಳನ್ನು ಕಳೆದುಕೊಂಡಿತ್ತು.

ಆದರೆ, ಕೆಳ ಮಧ್ಯಮ ಕ್ರಮಾಂಕದಲ್ಲಿ ಅಮೊಘ ಆಟವಾಡಿದ ಆಲ್ರೌಂಡರ್ ಮೈಕಲ್ ರಿಪನ್ 104 ಎಸೆತಗಳಲ್ಲಿ 61 ರನ್ಗಳ ಅಮೂಲ್ಯ ಕೊಡುಗೆ ಕೊಟ್ಟು ತಂಡದ ಮೊತ್ತವನ್ನು 150ರ ಗಡಿ ದಾಟುವಂತೆ ಮಾಡಿದರು. ಜೋ ವಾಕರ್, 49 ಎಸೆತಗಳಲ್ಲಿ 36 ರನ್ ಗಳಿಸಿದರೂ ಕಿವೀಸ್, 40.2 ಓವರ್ಗಳಲ್ಲಿ 167 ರನ್ಗಳಿಗೆ ಆಲ್ಔಟ್ ಆಯಿತು. ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ (22ಕ್ಕೆ 1) ಕೂಡ ಒಂದು ವಿಕೆಟ್ ಪಡೆದರು.
ಸುಲಭವಾಗಿ ಗುರಿ ಬೆನ್ನತ್ತಿದ ಭಾರತ
ಗುರಿ ಬೆನ್ನತ್ತಿದ ಭಾರತ ತಂಡ ಆರಂಭದಲ್ಲೇ ಸ್ಟಾರ್ ಓಪನರ್ ಪೃಥ್ವಿ ಶಾ (17) ಅವರ ವಿಕೆಟ್ ಕಳೆದುಕೊಂಡಿತು. ಆದರೆ, ಋತುರಾಜ್ ಗಾಯಕ್ವಾಡ್ (41), ರಾಹುಲ್ ತ್ರಿಪಾಠಿ (31), ಸಂಜು ಸ್ಯಾಮ್ಸನ್ (ಅಜೇಯ 29) ಮತ್ತು ರಜತ್ ಪಾಟಿದಾರ್ (41 ಎಸೆತಗಳಲ್ಲಿ ಅಜೇಯ 45 ರನ್) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ 31.5 ಓವರ್ಗಳಲ್ಲಿ 3 ವಿಕೆಟ್ಗೆ 170 ರನ್ಗಳಿಸಿ ಸುಲಭದ ಜಯ ದಕ್ಕಿಸಿಕೊಂಡಿತು. ನ್ಯೂಜಿಲೆಂಡ್ ಪರ ವ್ಯಾನ್ ಬೆಕ್, ಮೈಕಲ್ ರಿಪನ್ ಮತ್ತು ಮ್ಯಾಥ್ಯೂ ಫಿಷರ್ ತಲಾ ವಿಕೆಟ್ ಪಡೆಯುವ ಮೂಲಕ ಭಾರತೀಯ ಬ್ಯಾಟರ್ಗಳನ್ನು ಕಟ್ಟುಹಾಕುವ ಪ್ರಯತ್ನ ಮಾಡಿದರು. ಆದರೆ ಫಲ ಸಿಗಲಿಲ್ಲ.
ಸಂಕ್ಷಿಪ್ತ ಸ್ಕೋರ್
ನ್ಯೂಜಿಲೆಂಡ್ 'ಎ' ತಂಡ: 40.2 ಓವರ್ಗಳಲ್ಲಿ 167 ರನ್ಗಳಿಗೆ ಆಲ್ಔಟ್ (ಮೈಕಲ್ ರಿಪನ್ 61, ಜೋ ವಾಕರ್ 36; ಶಾರ್ದುಲ್ ಠಾಕೂರ್ 32ಕ್ಕೆ 4, ಕುಲ್ದೀಪ್ ಸೇನ್ 30ಕ್ಕೆ 3).
ಭಾರತ 'ಎ' ತಂಡ 31.5 ಓವರ್ಗಳಲ್ಲಿ 3 ವಿಕೆಟ್ಗೆ 170 ರನ್ (ಋತುರಾಜ್ ಗಾಯಕ್ವಾಡ್ 41, ರಾಹುಲ್ ತ್ರಿಪಾಠಿ 31, ಸಂಜು ಸ್ಯಾಮ್ಸನ್ ಅಜೇಯ 28, ರಜತ್ ಪಾಟಿದಾರ್ ಅಜೇಯ 45; ಲೋಗನ್ ವ್ಯಾನ್ ಬೀಕ್ 38ಕ್ಕೆ 1, ಮ್ಯಾಥ್ಯೂ ಫಿಷರ್ 32ಕ್ಕೆ 1, ಮೈಕಲ್ ರಿಪನ್ 28ಕ್ಕೆ 1).
Ind Vs Nz Shardul Thakur Shine As India A Beat New Zealand A In 1st Odi.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am