ಬ್ರೇಕಿಂಗ್ ನ್ಯೂಸ್
11-10-22 02:16 pm Source: Vijayakarnataka ಕ್ರೀಡೆ
ಪರ್ತ್: ಆಸ್ಟ್ರೇಲಿಯಾ ಆತಿಥ್ಯದಲ್ಲಿ ಅಕ್ಟೋಬರ್ 16 ರಿಂದ ಆರಂಭವಾಗುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮೊದಲೇ ಭಾರತ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಎದುರಾಗಿದೆ. ಕೀ ವೇಗಿ ಜಸ್ಪ್ರೀತ್ ಬುಮ್ರಾ, ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದಿಂದಾಗಿ ಮಹತ್ವದ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.
ಮತ್ತೊಂದೆಡೆ ಸ್ಟ್ಯಾಂಡ್ ಬೈನಲ್ಲಿದ್ದ ದೀಪಕ್ ಚಹರ್ ಕೂಡ ಟೂರ್ನಿಯಿಂದ ಹೊರ ನಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ಬಿಸಿಸಿಐ ಯಾರಿಗೆ ಅವಕಾಶ ನೀಡಬಹುದೆಂದು ಕಾದು ನೋಡಬೇಕಾಗಿದೆ. ಅಂದಹಾಗೆ ರವೀಂದ್ರ ಜಡೇಜಾ ಸ್ಥಾನಕ್ಕೆ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನು ತುಂಬಲಾಗಿದೆ.
ಇತ್ತೀಚೆಗೆ ದೈನಿಕ್ ಜಾಗರಣ್ ಸಂದರ್ಶನದಲ್ಲಿ ಯುಜ್ವೇಂದ್ರ ಚಹಲ್ ಭಾರತ ತಂಡ ಎದುರಿಸುತ್ತಿರುವ ಗಾಯದ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಇದರ ಜೊತೆಗೆ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಸ್ಥಾನವನ್ನು ತುಂಬಬಲ್ಲ ಸಾಮರ್ಥ್ಯವಿರುವ ಆಟಗಾರನನ್ನು ಹೆಸರಿಸಿದ್ದಾರೆ.
"ರವೀಂದ್ರ ಜಡೇಜಾ ವಿಶ್ವ ದರ್ಜೆಯ ಬೌಲರ್ ಹಾಗೂ ಇದರ ಜೊತೆಗೆ ಅವರ ಬ್ಯಾಟಿಂಗ್ ಕೂಡ ಅದ್ಭುತವಾಗಿದೆ. ಅಂದಹಾಗೆ ಗಾಯಗಳು ಆಟದ ಒಂದು ಭಾಗವಾಗಿದೆ. ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅಕ್ಷರ್ ಪಟೇಲ್ ಬೌಲ್ ಮಾಡುತ್ತಿರುವ ಹಾದಿ ನೋಡುತ್ತಿದ್ದರೆ, ಜಡೇಜಾ ಅವರ ಸ್ಥಾನಕ್ಕೆ ಸೂಕ್ತ ಆಟಗಾರ ಲಭಿಸಿದ್ದಾನೆಂದು ನಾನು ಭಾವಿಸುತ್ತೇನೆ. ಅದರಂತೆ ಅಕ್ಷರ್ ಕಳೆದ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ," ಎಂದು ಯುಜ್ವೇಂದ್ರ ಚಹಲ್ ತಿಳಿಸಿದ್ದಾರೆ.
ಯುಜ್ವೇಂದ್ರ ಚಹಲ್ ಹೇಳಿದಂತೆ ರವೀಂದ್ರ ಜಡೇಜಾ ಅವರ ಸ್ಥಾನವನ್ನು ತುಂಬಬಲ್ಲ ಸಾಮರ್ಥ್ಯ ಅಕ್ಷರ್ ಪಟೇಲ್ಗೆ ಇದೆ. ಬೌಲಿಂಗ್ ಜೊತೆಗೆ ಕೆಳ ಮಧ್ಯಮ ಕ್ರಮಾಂಕದಲ್ಲಿ ಅವರು ಅತ್ಯುತ್ತಮವಾಗಿ ಬ್ಯಾಟ್ ಮಾಡಬಲ್ಲರು. ದಕ್ಷಿಣ ಆಫ್ರಿಕಾ ವಿರುದ್ಧ ಕಳೆದ ಟಿ20 ಸರಣಿಯ ಭಾರತ ತಂಡದಲ್ಲಿಯೂ ಅಕ್ಷರ್ ಪಟೇಲ್ ಆಡಿದ್ದರು. ಈ ಸರಣಿಯಲ್ಲಿ ಭಾರತ 2-1 ಗೆದ್ದಿತ್ತು. ಈ ಸರಣಿಯಲ್ಲಿ ಅವರು ಒಟ್ಟು 9 ಓವರ್ಗಳನ್ನು ಬೌಲ್ ಮಾಡಿ ಎರಡು ವಿಕೆಟ್ ಪಡೆದಿದ್ದರು ಹಾಗೂ 9.11 ಎಕಾನಮಿಯಲ್ಲಿ ರನ್ಗಳನ್ನು ಬಿಟ್ಟುಕೊಟ್ಟಿದ್ದರು.
ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ: ಟಿ20 ವಿಶ್ವಕಪ್ ಟೂರ್ನಿಯ ಸಲುವಾಗಿ ಆಸ್ಟ್ರೇಲಿಯಾದಲ್ಲಿ ಬೀಡು ಬಿಟ್ಟಿರುವ ಭಾರತ ತಂಡ ಸೋಮವಾರ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ದ ಅಭ್ಯಾಸ ಪಂದ್ಯವಾಡಿತ್ತು ಹಾಗೂ 13 ರನ್ಗಳಿಂದ ಜಯ ಗಳಿಸಿತ್ತು. ಈ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟ್ ಮಾಡಿದ್ದ ಸೂರ್ಯಕುಮಾರ್ ಯಾದವ್ 52 ರನ್ ಗಳಿಸಿದರೆ, ಬೌಲಿಂಗ್ನಲ್ಲಿ ಮಿಂಚಿದ ಅರ್ಷದೀಪ್ ಸಿಂಗ್ ಕೇವಲ 6 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದ್ದರು.
ಅಕ್ಟೋಬರ್ 16 ರಿಂದ 2022ರ ಟಿ20 ವಿಶ್ವಕಪ್ ಟೂರ್ನಿಯ ಮೊದಲು ಸುತ್ತು ಆರಂಭವಾಗಲಿದೆ. ಭಾರತ ತಂಡ ಅಕ್ಟೋಬರ್ 23 ರಂದು ಪಾಕಿಸ್ತಾನ ವಿರುದ್ಧ ಸೂಪರ್ 12ರ ಪಂದ್ಯದಲ್ಲಿ ಸೆಣಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ.
ಟಿ20 ವಿಶ್ವಕಪ್ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
T20 World Cup 2022 Ravindra Jadeja Is A World Class Bowler Yuzvendra Chahal Names India Star To Fill All Rounders Boots At T20 Wc.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm