ಬ್ರೇಕಿಂಗ್ ನ್ಯೂಸ್
25-10-22 03:22 pm Source: Vijayakarnataka ಕ್ರೀಡೆ
ಪಾಕಿಸ್ತಾನ ವಿರುದ್ದ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-12ರ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಮೂಲಕ ಭಾರತ ತಂಡದ 4 ವಿಕೆಟ್ ರೋಚಕ ಗೆಲುವಿಗೆ ನೆರವಾಗಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಪಾಕ್ ಮಾಜಿ ವೇಗಿ ವಖಾರ್ ಯೂನಿಸ್ ಗುಣಗಾನ ಮಾಡಿದ್ದಾರೆ.
ಟಾಸ್ ಗೆದ್ದು ಪಾಕಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿದ ಬಳಿಕ ಪವರ್ಪ್ಲೇ ಓವರ್ಗಳಲ್ಲಿ ಅರ್ಷದೀಪ್ ಸಿಂಗ್ ಮಾರಕ ದಾಳಿ ನಡೆಸಿದ್ದರು. ಆದರೆ, ಮಧ್ಯ ಕ್ರಮಾಂಕದ ಓವರ್ಗಳಲ್ಲಿ ಹಾರ್ದಿಕ್ ಪಾಂಡ್ಯ ಶಿಸ್ತುಬದ್ದವಾಗಿ ಬೌಲ್ ಮಾಡಿದ್ದರು. ಆ ಮೂಲಕ ತಮ್ಮ ಪಾಲಿನ 4 ಓವರ್ಗಳಿಗೆ 30 ರನ್ ನೀಡಿ ಪ್ರಮುಖ 3 ವಿಕೆಟ್ಗಳನ್ನು ಕಬಳಿಸಿದ್ದರು. ಆ ಮೂಲಕ ಪಾಕಿಸ್ತಾನ ತಂಡವನ್ನು 159 ರನ್ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಬಳಿಕ 160 ರನ್ ಗುರಿ ಹಿಂಬಾಲಿಸಿದ ಭಾರತ ತಂಡ ಕೇವಲ 31 ರನ್ಗಳಿಗೆ ಪ್ರಮುಖ 4 ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ವಿರಾಟ್ ಕೊಹ್ಲಿ(82* ರನ್) ಜೊತೆ ಐದನೇ ವಿಕೆಟ್ಗೆ 113 ರನ್ ನಿರ್ಣಾಯಕ ಜೊತೆಯಾಟವಾಡಿದ ಹಾರ್ದಿಕ್ ಪಾಂಡ್ಯ, 37 ಎಸೆತಗಳಲ್ಲಿ 40 ರನ್ ಸಿಡಿಸಿದರು. ಆ ಮೂಲಕ ಟೀಮ್ ಇಂಡಿಯಾದ 4 ವಿಕೆಟ್ ರೋಚಕ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ತಮ್ಮದೇ ಆದ ಪಾತ್ರವನ್ನು ನಿರ್ವಹಿಸಿದರು.

ಎ ಸ್ಪೋರ್ಟ್ಸ್ ವಾಹಿನಿಯಲ್ಲಿ ವಸೀಮ್ ಅಕ್ರಮ್ ಹಾಗು ಮಿಸ್ಬಾ ಉಲ್ ಹಕ್ ಅವರ ಜೊತೆ ಚರ್ಚೆಯಲ್ಲಿ ಭಾಗವಹಿಸಿದ ವಖಾರ್ ಯೂನಿಸ್, ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಗುಣಗಾನ ಮಾಡಿದರು. ಅಷ್ಟೇ ಅಲ್ಲದೆ ಅವರು ಭಾರತ ತಂಡದ ಮುಂದಿನ ನಾಯಕ ಎಂದು ಭವಿಷ್ಯ ನುಡಿದರು.
![]()
"2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲ ಬಾರಿ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. ಅದೇ ರೀತಿ ಅವರು ತಂಡವನ್ನು ಹೇಗೆ ಮುನ್ನಡೆಸಿದ್ದರು ಎಂಬುದನ್ನು ಒಮ್ಮೆ ನೋಡಿ. ಅವರು ಗುಜರಾತ್ ಟೈಟನ್ಸ್ ತಂಡಕ್ಕೆ ಚೊಚ್ಚಲ ಪ್ರಶಸ್ತಿ ಗೆದ್ದು ಕೊಟ್ಟಿದ್ದರು. ಒತ್ತಡವನ್ನು ಹೇಗೆ ನಿರ್ವಹಿಸಬೇಕೆಂಬುದನ್ನು ಅವರು ಇಲ್ಲಿ ತಿಳಿದಿದ್ದರು," ಎಂದರು."ಅವರು ವಿಶೇಷವಾಗಿ ಫಿನಿಷರ್ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು. ಹೆಚ್ಚಿನ ವಿಶ್ವಾಸ ಹೊಂದಿರುವ ಹಾಗೂ ಮಾನಸಿಕವಾಗಿ ಶಕ್ತಿಯುತವಾಗಿರುವ ಆಟಗಾರನಿಗೆ ತಂಡದಲ್ಲಿ ಈ ಪಾತ್ರವನ್ನು ನೀಡಬಹುದು. ಪಂದ್ಯದಲ್ಲಿ ಸನ್ನಿವೇಶ ಹಾಗೂ ಬೇಡಿಕೆಗೆ ತಕ್ಕಂತೆ ಆಡಬೇಕು. ಈ ಪಾತ್ರವನ್ನು ಯಶಸ್ವಿಯಾಗಿ ಹಾರ್ದಿಕ್ ಪಾಂಡ್ಯ ನಿರ್ವಹಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಭಾರತ ತಂಡದ ಮುಂದಿನ ನಾಯಕರಾದರೂ ನನಗೆ ಅಚ್ಚರಿಯಿಲ್ಲ," ಎಂದು ವಖಾರ್ ಯೂನಿಸ್ ತಿಳಿಸಿದರು.
ವಖಾರ್ ಯೂನಿಸ್ ಬಳಿಕ ಮಾತನಾಡಿದ ವಸೀಮ್ ಅಕ್ರಮ್, "ಮೊದಲನೇ ಬಾರಿ ತಂಡವನ್ನು ಮುನ್ನಡೆಸಿ ಐಪಿಎಲ್ ಗೆದ್ದ ಮೊದಲ ನಾಯಕ ಹಾರ್ದಿಕ್ ಪಾಂಡ್ಯ. ಇದೀಗ ರಾಷ್ಟ್ರೀಯ ತಂಡದಲ್ಲಿ ಅಗತ್ಯ ಸಂದರ್ಭಗಳಲ್ಲಿ ನಾಯಕನಿಗೆ ಸಲಹೆಗಳನ್ನು ನೀಡುತ್ತಿದ್ದಾರೆ. ತಾವು ಕೂಡ ಕಲಿಯುವ ಜೊತೆಗೆ ಮೈದಾನದಲ್ಲಿ ಶಾಂತ ಭಾವನೆಯಿಂದ ವರ್ತಿಸುತ್ತಾರೆ," ಎಂದು ಹೇಳಿದರು.
T20 World Cup 2022 I Wont Be Surprised If Hardik Pandya Is The Next Indian Captain,Says Waqar Younis.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm