ಬ್ರೇಕಿಂಗ್ ನ್ಯೂಸ್
25-10-22 03:22 pm Source: Vijayakarnataka ಕ್ರೀಡೆ
ಪಾಕಿಸ್ತಾನ ವಿರುದ್ದ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-12ರ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಮೂಲಕ ಭಾರತ ತಂಡದ 4 ವಿಕೆಟ್ ರೋಚಕ ಗೆಲುವಿಗೆ ನೆರವಾಗಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಪಾಕ್ ಮಾಜಿ ವೇಗಿ ವಖಾರ್ ಯೂನಿಸ್ ಗುಣಗಾನ ಮಾಡಿದ್ದಾರೆ.
ಟಾಸ್ ಗೆದ್ದು ಪಾಕಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿದ ಬಳಿಕ ಪವರ್ಪ್ಲೇ ಓವರ್ಗಳಲ್ಲಿ ಅರ್ಷದೀಪ್ ಸಿಂಗ್ ಮಾರಕ ದಾಳಿ ನಡೆಸಿದ್ದರು. ಆದರೆ, ಮಧ್ಯ ಕ್ರಮಾಂಕದ ಓವರ್ಗಳಲ್ಲಿ ಹಾರ್ದಿಕ್ ಪಾಂಡ್ಯ ಶಿಸ್ತುಬದ್ದವಾಗಿ ಬೌಲ್ ಮಾಡಿದ್ದರು. ಆ ಮೂಲಕ ತಮ್ಮ ಪಾಲಿನ 4 ಓವರ್ಗಳಿಗೆ 30 ರನ್ ನೀಡಿ ಪ್ರಮುಖ 3 ವಿಕೆಟ್ಗಳನ್ನು ಕಬಳಿಸಿದ್ದರು. ಆ ಮೂಲಕ ಪಾಕಿಸ್ತಾನ ತಂಡವನ್ನು 159 ರನ್ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಬಳಿಕ 160 ರನ್ ಗುರಿ ಹಿಂಬಾಲಿಸಿದ ಭಾರತ ತಂಡ ಕೇವಲ 31 ರನ್ಗಳಿಗೆ ಪ್ರಮುಖ 4 ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ವಿರಾಟ್ ಕೊಹ್ಲಿ(82* ರನ್) ಜೊತೆ ಐದನೇ ವಿಕೆಟ್ಗೆ 113 ರನ್ ನಿರ್ಣಾಯಕ ಜೊತೆಯಾಟವಾಡಿದ ಹಾರ್ದಿಕ್ ಪಾಂಡ್ಯ, 37 ಎಸೆತಗಳಲ್ಲಿ 40 ರನ್ ಸಿಡಿಸಿದರು. ಆ ಮೂಲಕ ಟೀಮ್ ಇಂಡಿಯಾದ 4 ವಿಕೆಟ್ ರೋಚಕ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ತಮ್ಮದೇ ಆದ ಪಾತ್ರವನ್ನು ನಿರ್ವಹಿಸಿದರು.

ಎ ಸ್ಪೋರ್ಟ್ಸ್ ವಾಹಿನಿಯಲ್ಲಿ ವಸೀಮ್ ಅಕ್ರಮ್ ಹಾಗು ಮಿಸ್ಬಾ ಉಲ್ ಹಕ್ ಅವರ ಜೊತೆ ಚರ್ಚೆಯಲ್ಲಿ ಭಾಗವಹಿಸಿದ ವಖಾರ್ ಯೂನಿಸ್, ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಗುಣಗಾನ ಮಾಡಿದರು. ಅಷ್ಟೇ ಅಲ್ಲದೆ ಅವರು ಭಾರತ ತಂಡದ ಮುಂದಿನ ನಾಯಕ ಎಂದು ಭವಿಷ್ಯ ನುಡಿದರು.
![]()
"2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲ ಬಾರಿ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. ಅದೇ ರೀತಿ ಅವರು ತಂಡವನ್ನು ಹೇಗೆ ಮುನ್ನಡೆಸಿದ್ದರು ಎಂಬುದನ್ನು ಒಮ್ಮೆ ನೋಡಿ. ಅವರು ಗುಜರಾತ್ ಟೈಟನ್ಸ್ ತಂಡಕ್ಕೆ ಚೊಚ್ಚಲ ಪ್ರಶಸ್ತಿ ಗೆದ್ದು ಕೊಟ್ಟಿದ್ದರು. ಒತ್ತಡವನ್ನು ಹೇಗೆ ನಿರ್ವಹಿಸಬೇಕೆಂಬುದನ್ನು ಅವರು ಇಲ್ಲಿ ತಿಳಿದಿದ್ದರು," ಎಂದರು."ಅವರು ವಿಶೇಷವಾಗಿ ಫಿನಿಷರ್ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು. ಹೆಚ್ಚಿನ ವಿಶ್ವಾಸ ಹೊಂದಿರುವ ಹಾಗೂ ಮಾನಸಿಕವಾಗಿ ಶಕ್ತಿಯುತವಾಗಿರುವ ಆಟಗಾರನಿಗೆ ತಂಡದಲ್ಲಿ ಈ ಪಾತ್ರವನ್ನು ನೀಡಬಹುದು. ಪಂದ್ಯದಲ್ಲಿ ಸನ್ನಿವೇಶ ಹಾಗೂ ಬೇಡಿಕೆಗೆ ತಕ್ಕಂತೆ ಆಡಬೇಕು. ಈ ಪಾತ್ರವನ್ನು ಯಶಸ್ವಿಯಾಗಿ ಹಾರ್ದಿಕ್ ಪಾಂಡ್ಯ ನಿರ್ವಹಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಭಾರತ ತಂಡದ ಮುಂದಿನ ನಾಯಕರಾದರೂ ನನಗೆ ಅಚ್ಚರಿಯಿಲ್ಲ," ಎಂದು ವಖಾರ್ ಯೂನಿಸ್ ತಿಳಿಸಿದರು.
ವಖಾರ್ ಯೂನಿಸ್ ಬಳಿಕ ಮಾತನಾಡಿದ ವಸೀಮ್ ಅಕ್ರಮ್, "ಮೊದಲನೇ ಬಾರಿ ತಂಡವನ್ನು ಮುನ್ನಡೆಸಿ ಐಪಿಎಲ್ ಗೆದ್ದ ಮೊದಲ ನಾಯಕ ಹಾರ್ದಿಕ್ ಪಾಂಡ್ಯ. ಇದೀಗ ರಾಷ್ಟ್ರೀಯ ತಂಡದಲ್ಲಿ ಅಗತ್ಯ ಸಂದರ್ಭಗಳಲ್ಲಿ ನಾಯಕನಿಗೆ ಸಲಹೆಗಳನ್ನು ನೀಡುತ್ತಿದ್ದಾರೆ. ತಾವು ಕೂಡ ಕಲಿಯುವ ಜೊತೆಗೆ ಮೈದಾನದಲ್ಲಿ ಶಾಂತ ಭಾವನೆಯಿಂದ ವರ್ತಿಸುತ್ತಾರೆ," ಎಂದು ಹೇಳಿದರು.
T20 World Cup 2022 I Wont Be Surprised If Hardik Pandya Is The Next Indian Captain,Says Waqar Younis.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm