ಬ್ರೇಕಿಂಗ್ ನ್ಯೂಸ್
06-01-23 01:16 pm Source: news18 ಕ್ರೀಡೆ
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ರೋಚಕ ಸೋಲನ್ನು ಅನುಭವಿಸಿತು. ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 190 ರನ್ ಗಳಿಸುವ ಮೂಲಕ 16 ರನ್ಗಳಿಂದ ಸೋಲನ್ನಪ್ಪಿತು.
ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದ್ದು, ಕೊನೆಯ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಿದೆ. ಆದರೆ ಈ ಪಂದ್ಯದಲ್ಲಿ ಮುಖ್ಯವಾಗಿ ಅರ್ಷದೀಪ್ ಸಿಂಗ್ ಮೇಲೆ ಅಬೀಮಾನಿಗಳು ಬೇಸರಗೊಂಡರು.
T20 ಕ್ರಿಕೆಟ್ನಲ್ಲಿ, ಅರ್ಶ್ದೀಪ್ ಸಿಂಗ್ 41 ದಿನಗಳ ನಂತರ ಮರಳಿದರು. ಆದರೆ ಈ ಪಂದ್ಯವೇ ಅವರ ವೃತ್ತಿಜೀವನದ ಅತ್ಯಂತ ಕೆಟ್ಟ ಪಂದ್ಯವಾಯಿತು. ಅವರು ಈ ಪಂದ್ಯದಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಬರೆದಿದ್ದಾರೆ.
ಅರ್ಷದೀಪ್ ಸಿಂಗ್ ಪಂದ್ಯದ ಎರಡನೇ ಓವರ್ನಲ್ಲಿ ಐದು ಎಸೆತಗಳನ್ನು ಸುರಕ್ಷಿತವಾಗಿ ಬೌಲ್ ಮಾಡಿದರು, ಆದರೆ ಅವರು ಕೊನೆಯ ಬೌಲ್ ಎಸೆಯಲು ಇನ್ನೂ ಹೆಚ್ಚನ 3 ಬೌಲ್ ಅನ್ನು ತೆಗೆದುಕೊಂಡರು. ಅಲ್ಲದೇ ಈ ಓವರ್ನಲ್ಲಿ ಬರೋಬ್ಬರಿ 9 ಎಸೆತ ಎಸೆದು 19 ರನ್ ನೀಡಿದರು.
ಅರ್ಷದೀಪ್ ಕೇವಲ 21 ಟಿ20 ಪಂದ್ಯಗಳನ್ನಾಡಿದ್ದು, 14 ನೋಬಾಲ್ ಎಸೆದಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 5 ನೋಬಾಲ್ಗಳನ್ನು ಎಸೆದ ನಂತರ, ಅವರು T20 ಸ್ವರೂಪದಲ್ಲಿ ವಿಶ್ವದ ಅತಿ ಹೆಚ್ಚು ನೋಬಾಲ್ ಎಸೆದ ಬೌಲರ್ ಎಂಬ ಬೇಡದ ದಾಖಲೆಯನ್ನು ಮಾಡಿದರು.
ಟಿ20ಯಲ್ಲಿ ಒಟ್ಟು 11 ನೋಬಾಲ್ ಎಸೆದಿರುವ ಪಾಕಿಸ್ತಾನದ ಹಸನ್ ಅಲಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು, ನೋ ಬಾಲ್ನಿಂದಾಗಿ ಭಾರತ ಭಾರೀ ನಷ್ಟ ಅನುಭವಿಸಿದೆ. ಒಟ್ಟು 7 ನೋಬಾಲ್ ಗಳನ್ನು ಟೀಂ ಇಂಡಿಯಾ ಎಸೆದಿತ್ತು. ಪ್ರವಾಸಿ ತಂಡದ ಬ್ಯಾಟ್ಸ್ಮನ್ಗಳು ಇದರ ಸಂಪೂರ್ಣ ಲಾಭ ಪಡೆದರು.
ಇನ್ನು, ಸರಣಿ 1-1ರಿಂದ ಸಮಬಲವಾಗಿದ್ದು, ನಾಳೆ ಅಂದರೆ ಡಿಸೆಂಬರ್ 7ರಂದು ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿಯನ್ನು ಗೆಲ್ಲಲಿದೆ.
IND vs SL 2nd T20i team india bowler arshdeep singh no balls in one over
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm