ಬ್ರೇಕಿಂಗ್ ನ್ಯೂಸ್
06-01-23 01:16 pm Source: news18 ಕ್ರೀಡೆ
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ರೋಚಕ ಸೋಲನ್ನು ಅನುಭವಿಸಿತು. ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 190 ರನ್ ಗಳಿಸುವ ಮೂಲಕ 16 ರನ್ಗಳಿಂದ ಸೋಲನ್ನಪ್ಪಿತು.

ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದ್ದು, ಕೊನೆಯ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಿದೆ. ಆದರೆ ಈ ಪಂದ್ಯದಲ್ಲಿ ಮುಖ್ಯವಾಗಿ ಅರ್ಷದೀಪ್ ಸಿಂಗ್ ಮೇಲೆ ಅಬೀಮಾನಿಗಳು ಬೇಸರಗೊಂಡರು.

T20 ಕ್ರಿಕೆಟ್ನಲ್ಲಿ, ಅರ್ಶ್ದೀಪ್ ಸಿಂಗ್ 41 ದಿನಗಳ ನಂತರ ಮರಳಿದರು. ಆದರೆ ಈ ಪಂದ್ಯವೇ ಅವರ ವೃತ್ತಿಜೀವನದ ಅತ್ಯಂತ ಕೆಟ್ಟ ಪಂದ್ಯವಾಯಿತು. ಅವರು ಈ ಪಂದ್ಯದಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಬರೆದಿದ್ದಾರೆ.

ಅರ್ಷದೀಪ್ ಸಿಂಗ್ ಪಂದ್ಯದ ಎರಡನೇ ಓವರ್ನಲ್ಲಿ ಐದು ಎಸೆತಗಳನ್ನು ಸುರಕ್ಷಿತವಾಗಿ ಬೌಲ್ ಮಾಡಿದರು, ಆದರೆ ಅವರು ಕೊನೆಯ ಬೌಲ್ ಎಸೆಯಲು ಇನ್ನೂ ಹೆಚ್ಚನ 3 ಬೌಲ್ ಅನ್ನು ತೆಗೆದುಕೊಂಡರು. ಅಲ್ಲದೇ ಈ ಓವರ್ನಲ್ಲಿ ಬರೋಬ್ಬರಿ 9 ಎಸೆತ ಎಸೆದು 19 ರನ್ ನೀಡಿದರು.

ಅರ್ಷದೀಪ್ ಕೇವಲ 21 ಟಿ20 ಪಂದ್ಯಗಳನ್ನಾಡಿದ್ದು, 14 ನೋಬಾಲ್ ಎಸೆದಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 5 ನೋಬಾಲ್ಗಳನ್ನು ಎಸೆದ ನಂತರ, ಅವರು T20 ಸ್ವರೂಪದಲ್ಲಿ ವಿಶ್ವದ ಅತಿ ಹೆಚ್ಚು ನೋಬಾಲ್ ಎಸೆದ ಬೌಲರ್ ಎಂಬ ಬೇಡದ ದಾಖಲೆಯನ್ನು ಮಾಡಿದರು.

ಟಿ20ಯಲ್ಲಿ ಒಟ್ಟು 11 ನೋಬಾಲ್ ಎಸೆದಿರುವ ಪಾಕಿಸ್ತಾನದ ಹಸನ್ ಅಲಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು, ನೋ ಬಾಲ್ನಿಂದಾಗಿ ಭಾರತ ಭಾರೀ ನಷ್ಟ ಅನುಭವಿಸಿದೆ. ಒಟ್ಟು 7 ನೋಬಾಲ್ ಗಳನ್ನು ಟೀಂ ಇಂಡಿಯಾ ಎಸೆದಿತ್ತು. ಪ್ರವಾಸಿ ತಂಡದ ಬ್ಯಾಟ್ಸ್ಮನ್ಗಳು ಇದರ ಸಂಪೂರ್ಣ ಲಾಭ ಪಡೆದರು.

ಇನ್ನು, ಸರಣಿ 1-1ರಿಂದ ಸಮಬಲವಾಗಿದ್ದು, ನಾಳೆ ಅಂದರೆ ಡಿಸೆಂಬರ್ 7ರಂದು ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿಯನ್ನು ಗೆಲ್ಲಲಿದೆ.
IND vs SL 2nd T20i team india bowler arshdeep singh no balls in one over
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am