ಬ್ರೇಕಿಂಗ್ ನ್ಯೂಸ್
07-01-23 12:26 pm Source: news18 ಕ್ರೀಡೆ
ಪ್ರವಾಸಿ ಶ್ರೀಲಂಕಾ ತಂಡವು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (ಎಸ್ಸಿಎ ಸ್ಟೇಡಿಯಂ) ಮೊದಲ ಬಾರಿಗೆ ಟಿ20 ಪಂದ್ಯವನ್ನು ಆಡಲಿದೆ. ಆತಿಥೇಯ ಭಾರತ ಇಲ್ಲಿ 4 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3ರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿದೆ. ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಮೂರನೇ T20 ಪಂದ್ಯದಲ್ಲಿ ರಾಜ್ಕೋಟ್ನಲ್ಲಿ ಹವಾಮಾನವು ಉತ್ತಮವಾಗಿರುತ್ತದೆ ಎಂದು ತಿಳಿದುಬಂದಿದೆ. ದಿನದ ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 24 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಇಡೀ ದಿನ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಸಂಪೂರ್ಣ ಪಂದ್ಯ ವೀಕ್ಷಿಸುವ ಅವಕಾಶ ಸಿಗಲಿದೆ.
ರಾಜ್ಕೋಟ್ನ ಪಿಚ್ ರಿಪೋರ್ಟ್:

ರಾಜ್ಕೋಟ್ನ ಪಿಚ್ ಬ್ಯಾಟ್ಸ್ಮನ್ಗಳಿಗೆ ಹೆಚ್ಚು ಸಹಾಯಕವಾಗಿದೆ. ಫ್ಲಾಟ್ ವಿಕೆಟ್ನಲ್ಲಿ, ಬೌಲರ್ಗಳು ವಿಕೆಟ್ಗಳನ್ನು ಪಡೆಯಲು ಸಾಕಷ್ಟು ಕಠಿಣ ಪರಿಶ್ರಮವನ್ನು ಮಾಡಬೇಕಾಗುತ್ತದೆ. ಬ್ಯಾಟರ್ಗಳು ಸಣ್ಣ ಬೌಂಡರಿಗಳ ಲಾಭವನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ, ಈ ಪಿಚ್ನಲ್ಲಿ ಹೆಚ್ಚಿನ ಸ್ಕೋರಿಂಗ್ ಸ್ಪರ್ಧೆಯನ್ನು ಕಾಣಬಹುದು. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾ ಹೊರತುಪಡಿಸಿ, ಇಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಮಾಡಿದೆ. ಕಳೆದ ವರ್ಷ ಭಾರತ ವಿರುದ್ಧದ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ತಂಡ 87 ರನ್ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ನಾಳೆ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮ=ಆಯ್ಕೆ ಮಾಡುವ ಸಾಧ್ಯತೆ ಇದೆ.

ಭಾರತ ಮತ್ತು ಶ್ರೀಲಂಕಾ ಹೆಡ್ ಟು ಹೆಡ್:
ಭಾರತ ಮತ್ತು ಶ್ರೀಲಂಕಾ ನಡುವೆ ಈವರೆಗೆ ಒಟ್ಟು 28 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಟೀಂ ಇಂಡಿಯಾ 18 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 9 ಪಂದ್ಯಗಳನ್ನು ಗೆದ್ದಿದೆ. ಈ ಸಂದರ್ಭದಲ್ಲಿ ಒಂದು ಪಂದ್ಯ ರದ್ದಾಗಿತ್ತು. ಶ್ರೀಲಂಕಾ ವಿರುದ್ಧದ ಟಿ20ಯಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 7 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 2 ಪಂದ್ಯಗಳನ್ನು ಗೆದ್ದಿದೆ. ಚೇಸಿಂಗ್ ಸಮಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ 10 ಪಂದ್ಯಗಳನ್ನು ಗೆದ್ದಿದ್ದರೆ, ಪ್ರವಾಸಿ ತಂಡದ ಖಾತೆಯಲ್ಲಿ 7 ಗೆಲುವುಗಳಿವೆ.
ಭಾರತ ಸಂಭಾವ್ಯ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ.
ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ.
India vs Sri Lanka 3rd T20 pitch report and weather forecast updates.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm