ಬ್ರೇಕಿಂಗ್ ನ್ಯೂಸ್
11-01-23 12:36 pm Source: news18 ಕ್ರೀಡೆ
ಭಾರತ ಮತ್ತು ಶ್ರೀಲಂಕಾ (IND vs SL ODI) ನಡುವಿನ ಪ್ರಸ್ತಾವಿತ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಜಮ್ಮು ಬೌಲರ್ ಮತ್ತೊಂದು ದಾಖಲೆ ಬರೆದಿದ್ದಾರೆ.
ಭಾರತ ಮತ್ತು ಶ್ರೀಲಂಕಾ (IND vs SL ODI) ನಡುವಿನ ಪ್ರಸ್ತಾವಿತ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಭಾರತ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತ-ಶ್ರೀಲಂಕಾ ನಡುವಿನ 3 ಪಂದ್ಯಗಳ 2ನೇ ಪಂದ್ಯವು ಜನವರಿ 12ರಂದು ನಡೆಯಲಿದೆ. ಈ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.
ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗಿ ಉಮ್ರಾನ್ ಮಲಿಕ್ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. 14ನೇ ಓವರ್ನ 4ನೇ ಎಸೆತದಲ್ಲಿ ಮಲಿಕ್ ಈ ದಾಖಲೆ ಸೃಷ್ಟಿಸಿದ್ದು, ವಿಶ್ವ ಕ್ರಿಕೆಟ್ ಇವರ ವೇಗಕ್ಕೆ ಅಚ್ಚರಿ ವ್ಯಕ್ತಪಡಿಸಿದೆ.
ಟೀಂ ಇಂಡಿಯಾದ ಪರ ಇದೀಗ ಉಮ್ರಾನ್ ಮಲಿಕ್ ಅತ್ಯಂತ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಬುಮ್ರಾ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದರು. ಆದರೆ ಇದೀಗ ಈ ದಾಖಲೆಯನ್ನು ಮಲಿಕ್ ಮುರಿದಿದ್ದಾರೆ.
ಶ್ರೀಲಂಕಾದೊಂದಿಗಿನ ಮೊದಲ ಟಿ20 ಪಂದ್ಯದಲ್ಲಿ ಉಮ್ರಾನ್ ಗಂಟೆಗೆ 155 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಶ್ರೀಲಂಕಾ ನಾಯಕ ದಸುನ್ ಶನಕಾ ಅವರ ವಿಕೆಟ್ ಪಡೆದಿದ್ದರು. ಇದರೊಂದಿಗೆ ಉಮ್ರಾನ್ ಭಾರತದ ಪರ ವೇಗದ ಬೌಲರ್ ಎನಿಸಿಕೊಂಡಿದ್ದರು.
23 ವರ್ಷದ ಯುವ ಉಮ್ರಾನ್ ಮಲಿಕ್ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 156 kmph ಬೌಲಿಂಗ್ ಮಾಡುವ ಮೂಲಕ ತಮ್ಮದೇ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಂತ ವೇಘದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪಂದ್ಯದ 14ನೇ ಓವರ್ನಲ್ಲಿ ಉಮ್ರಾನ್ ಮಲಿಕ್ ಈ ದಾಖಲೆ ಬರೆದಿದ್ದು, ಮೊದಲ ಎಸೆತವನ್ನು 147 kmph ವೇಗದಲ್ಲಿ ಎಸೆದರೆ, 2ನೇ ಎಸೆತ 151 kmph, 3ನೇ ಎಸೆತ 151 kmph, 4ನೇ ಎಸೆತ 156 kmph ವೇಗ, 5ನೇ ಎಸೆತ 146 kmph ವೇಗ ಮತ್ತು ಕೊನೆಯ ಎಸೆತವನ್ನು 145 kmph ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಇನ್ನು ವಿಶ್ವ ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ ಬೌಲಿಂಗ್ ಮಾಡಿದ ದಾಖಲೆ ಪಾಕಿಸ್ತಾನದ ಮಾಜಿ ವೇಗಿ ಅಖ್ತರ್ ಹೆಸರಿನಲ್ಲಿದೆ. ಅವರು 161 ಕಿ.ಮಿ ವೇಗದಲ್ಲಿ ಬೌಲಿಂಗ್ ಮಾಡಿದಾಖಲೆ ನಿರ್ಮಿಸಿದ್ದರು. ಆದರೆ ಉಮ್ರಾನ್ ಈ ದಾಖಲೆ ಮುರಿಯಬೇಕು ಎಂಬ ಆಸೆಯನ್ನು ಹೊಂದಿದ್ದಾರೆ.
IND vs SL1st odi umran malik has bowled at a speed of 156 kmph.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm