ಬ್ರೇಕಿಂಗ್ ನ್ಯೂಸ್
11-01-23 12:36 pm Source: news18 ಕ್ರೀಡೆ
ಭಾರತ ಮತ್ತು ಶ್ರೀಲಂಕಾ (IND vs SL ODI) ನಡುವಿನ ಪ್ರಸ್ತಾವಿತ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಜಮ್ಮು ಬೌಲರ್ ಮತ್ತೊಂದು ದಾಖಲೆ ಬರೆದಿದ್ದಾರೆ.
ಭಾರತ ಮತ್ತು ಶ್ರೀಲಂಕಾ (IND vs SL ODI) ನಡುವಿನ ಪ್ರಸ್ತಾವಿತ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಭಾರತ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತ-ಶ್ರೀಲಂಕಾ ನಡುವಿನ 3 ಪಂದ್ಯಗಳ 2ನೇ ಪಂದ್ಯವು ಜನವರಿ 12ರಂದು ನಡೆಯಲಿದೆ. ಈ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.

ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗಿ ಉಮ್ರಾನ್ ಮಲಿಕ್ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. 14ನೇ ಓವರ್ನ 4ನೇ ಎಸೆತದಲ್ಲಿ ಮಲಿಕ್ ಈ ದಾಖಲೆ ಸೃಷ್ಟಿಸಿದ್ದು, ವಿಶ್ವ ಕ್ರಿಕೆಟ್ ಇವರ ವೇಗಕ್ಕೆ ಅಚ್ಚರಿ ವ್ಯಕ್ತಪಡಿಸಿದೆ.
ಟೀಂ ಇಂಡಿಯಾದ ಪರ ಇದೀಗ ಉಮ್ರಾನ್ ಮಲಿಕ್ ಅತ್ಯಂತ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಬುಮ್ರಾ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದರು. ಆದರೆ ಇದೀಗ ಈ ದಾಖಲೆಯನ್ನು ಮಲಿಕ್ ಮುರಿದಿದ್ದಾರೆ.

ಶ್ರೀಲಂಕಾದೊಂದಿಗಿನ ಮೊದಲ ಟಿ20 ಪಂದ್ಯದಲ್ಲಿ ಉಮ್ರಾನ್ ಗಂಟೆಗೆ 155 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಶ್ರೀಲಂಕಾ ನಾಯಕ ದಸುನ್ ಶನಕಾ ಅವರ ವಿಕೆಟ್ ಪಡೆದಿದ್ದರು. ಇದರೊಂದಿಗೆ ಉಮ್ರಾನ್ ಭಾರತದ ಪರ ವೇಗದ ಬೌಲರ್ ಎನಿಸಿಕೊಂಡಿದ್ದರು.
23 ವರ್ಷದ ಯುವ ಉಮ್ರಾನ್ ಮಲಿಕ್ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 156 kmph ಬೌಲಿಂಗ್ ಮಾಡುವ ಮೂಲಕ ತಮ್ಮದೇ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಂತ ವೇಘದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಂದ್ಯದ 14ನೇ ಓವರ್ನಲ್ಲಿ ಉಮ್ರಾನ್ ಮಲಿಕ್ ಈ ದಾಖಲೆ ಬರೆದಿದ್ದು, ಮೊದಲ ಎಸೆತವನ್ನು 147 kmph ವೇಗದಲ್ಲಿ ಎಸೆದರೆ, 2ನೇ ಎಸೆತ 151 kmph, 3ನೇ ಎಸೆತ 151 kmph, 4ನೇ ಎಸೆತ 156 kmph ವೇಗ, 5ನೇ ಎಸೆತ 146 kmph ವೇಗ ಮತ್ತು ಕೊನೆಯ ಎಸೆತವನ್ನು 145 kmph ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಇನ್ನು ವಿಶ್ವ ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ ಬೌಲಿಂಗ್ ಮಾಡಿದ ದಾಖಲೆ ಪಾಕಿಸ್ತಾನದ ಮಾಜಿ ವೇಗಿ ಅಖ್ತರ್ ಹೆಸರಿನಲ್ಲಿದೆ. ಅವರು 161 ಕಿ.ಮಿ ವೇಗದಲ್ಲಿ ಬೌಲಿಂಗ್ ಮಾಡಿದಾಖಲೆ ನಿರ್ಮಿಸಿದ್ದರು. ಆದರೆ ಉಮ್ರಾನ್ ಈ ದಾಖಲೆ ಮುರಿಯಬೇಕು ಎಂಬ ಆಸೆಯನ್ನು ಹೊಂದಿದ್ದಾರೆ.
IND vs SL1st odi umran malik has bowled at a speed of 156 kmph.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm