ಬ್ರೇಕಿಂಗ್ ನ್ಯೂಸ್
18-01-23 01:55 pm Source: news18 ಕ್ರೀಡೆ
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಭಾರತ ಮತ್ತು ಕಿವೀಸ್ ನಡುವಿನ ಮೊದಲ ಏಕದಿನ ಪಂದ್ಯ ಇಂದು ಉಪ್ಪಲ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಪಂದ್ಯಕ್ಕಾಗಿ ಉಭಯ ತಂಡಗಳು ಹೈದರಾಬಾದ್ ತಲುಪಿವೆ. ಕಿವೀಸ್ ಆಟಗಾರರು ಮೂರು ದಿನ ಮುಂಚಿತವಾಗಿ ಹೈದರಾಬಾದ್ ತಲುಪಿದ್ದರು. ಸೋಮವಾರ ಸಂಜೆಯೇ ಭಾರತದ ಆಟಗಾರರು ಮುತ್ತಿನ ನಗರಿಗೆ ಆಗಮಿಸಿದ್ದಾರೆ.
4 ವರ್ಷಗಳ ಸುದೀರ್ಘ ಅಂತರದ ಬಳಿಕ ಉಪ್ಪಲ್ ಕ್ರೀಡಾಂಗಣದಲ್ಲಿ ಮತ್ತೊಂದು ಏಕದಿನ ಪಂದ್ಯ ನಡೆಯಲಿದೆ. 2019ರಲ್ಲಿ ಇಲ್ಲಿ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಆ ನಂತರ ಮತ್ತೆ ಏಕದಿನ ಮಾದರಿಯಲ್ಲಿ ಪಂದ್ಯಗಳು ನಡೆದಿರಲಿಲ್ಲ.

ಉಪ್ಪಲ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಎಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದಿದೆ? ಅದರಲ್ಲಿ ಎಷ್ಟು ಪಂದ್ಯಗಳನ್ನು ಗೆದ್ದಿದೆ ಎಂಬ ಅಂಕಿಅಂಶಗಳನ್ನು ನೋಡುವದಾದರೆ, ಇಲ್ಲಿ ಭಾರತ ಇಲ್ಲಿಯವರೆಗೆ ಈ ಮೈದಾನದಲ್ಲಿ 6 ಏಕದಿನ ಪಂದ್ಯಗಳನ್ನು ಆಡಿದೆ. ಆರರಲ್ಲಿ ಮೂರರಲ್ಲಿ ಸೋಲನ್ನು ಅನುಭವಿಸಿತ್ತು.
2005 ರಲ್ಲಿ ಉಪ್ಪಲ್ ಸ್ಟೇಡಿಯಂ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಪಂದ್ಯವನ್ನು ಆಯೋಜಿಸಿತ್ತು. ಭಾರತ 5 ವಿಕೆಟ್ಗಳಿಂದ ಸೋತಿತ್ತು. ಅದರ ನಂತರ 2007 ಮತ್ತು 2009ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ODIಗಳನ್ನು ಆಡಿದ್ದರು. ಈ ಎರಡರಲ್ಲೂ ಆಸೀಸ್ ಗೆಲುವು ಸಾಧಿಸಿತ್ತು.

ಆದರೆ 2011 ರಿಂದ ಇಲ್ಲಿ ಆಡಿದ ಎಲ್ಲಾ ಮೂರು ಏಕದಿನ ಪಂದ್ಯಗಳನ್ನು ಭಾರತ ಗೆದ್ದಿದೆ. 2011ರಲ್ಲಿ ಇಂಗ್ಲೆಂಡ್ ವಿರುದ್ಧ. 2014ರಲ್ಲಿ ಶ್ರೀಲಂಕಾ ವಿರುದ್ಧ ಮತ್ತು 2019ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ದಾಖಲಿಸಿದೆ. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯವನ್ನೂ ಭಾರತ ಗೆದ್ದಿತ್ತು.

ಉಪ್ಪಲ್ ಕ್ರೀಡಾಂಗಣದಲ್ಲಿ ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾದ ದಾಖಲೆ 50-50 ಆಗಿದೆ. ಅಲ್ಲದೇ ಇದೀಗ ನ್ಯೂಜಿಲ್ಯಾಂಡ್ ತಂಡ ಸಹ ಅದ್ಭುತ ಫಾರ್ಮ್ನಲ್ಲಿದೆ. ಪಾಕಿಸ್ತಾನವನ್ನು ತವರಿನಲ್ಲಿ 2-1ರ ಅಂತರದಲ್ಲಿ ಕಿವೀಸ್ ಸೋಲಿಸಿ ಸರಣಿ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯವು ಹೆಚ್ಚು ರೋಚಕವಾಗಿರುವ ಸಾಧ್ಯತೆ ಇದೆ.
ಈಗಾಗಲೇ ಪಂದ್ಯದ ಸಂಪೂರ್ಣ ಟಿಕೆಟ್ಗಳು ಮಾರಾಟವಾಗಿದ್ದು, ಇಂದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.
IND vs NZ1st odi live scores update team india records at Rajiv Gandhi international cricket stadium Hyderabad.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm