ಬ್ರೇಕಿಂಗ್ ನ್ಯೂಸ್
30-01-23 02:26 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಪಾರ ಅಭಿಮಾನಿಗಳನ್ನು ಹೊಂದಿದೆ. ಈಗಾಗಲೇ ಐಪಿಎಲ್ 2023ಗೆ ಆರ್ಸಿಬಿ ಅಂತಿಮ ತಂಡವನ್ನು ಸಿದ್ಧಗೊಳಿಸಿದೆ. ಆದರೆ ಈ ಬಾರಿ ತಂಡದ ಸ್ಟಾರ್ ಆಲ್ ರೌಂಡರ್ ಆದ ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ ಆರ್ಂಭಕ್ಕೂ ಮುನ್ನವೇ ಅಪಘಾತಕ್ಕೀಡಾಗಿದ್ದರು. ಬರ್ತಡೇ ಪಾರ್ಟಿ ವೇಳೆ ಮ್ಯಾಕ್ಸ್ವೆಲ್ ಕಾಲುಜಾರಿ ಬಿದ್ದು ಎಡ ಫೈಬುಲಾ ಮುರಿತಕ್ಕೆ ಒಳಗಾಗಿದ್ದರು.
ಹೀಗಾಗಿ ಮ್ಯಾಕ್ಸ್ವೆಲ್ ಆಸೀಸ್ ಪರ ಅನೇಕ ಸರಣಿಗಳಿಂದ ದೂರ ಉಳಿದಿದ್ದರು. ಅದಕ್ಕಾಗಿ ಶಸ್ತ್ರ ಚಿಕಿತ್ಸೆಗೂ ಅವರು ಒಳಗಾಗಿದ್ದರು. ಆದರೆ ಇದೀಗ ಆರ್ಸಿಬಿ ಅಭಿಮಾನಿಗಳಿಗೆ ಒಂದು ಸಮತಸದ ಸುದ್ದಿ ಕೇಳಿಬಂದಿದೆ. ಐಪಿಎಲ್ ಆರಂಭಕ್ಕೂ ಮುನ್ನವೇ ತಂಡಕ್ಕೆ ಸ್ಟಾರ್ ಆಲ್ರೌಂಡರ್ ಕಂಬ್ಯಾಕ್ ಮಾಡುವುದು ಖಚಿತವಾಗಿದೆ.
ಹೌದು, ಆರ್ಸಿಬಿ ತಂಡದ ಸ್ಟಾರ್ ಪ್ಲೇಯರ್ ಮ್ಯಾಕ್ಸ್ವೆಲ್ ಕೆಲವೇ ವಾರಗಳಲ್ಲಿ ರಾಷ್ಟ್ರೀಯ ತಂಡ ಸೇರಿಕೊಳ್ಳಲಿದ್ದಾರೆ ಎಂದು ಆಸ್ಟ್ರೇಲಿಯಾ ಪತ್ರಿಕೆಗಳು ವರದಿ ಮಾಡಿದೆ. ಇದರಿಂದಾಗಿ ಮ್ಯಾಕ್ಸ್ವೆಲ್ ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಮ್ಯಾಕ್ಸ್ವೆಲ್ ಅವರು ಆಸ್ಟ್ರೇಲಿಯಾ ತಂಡದ ಪರ ಇನ್ನೇನು ಕೆಲವೇ ದಿನಗಳಲ್ಲಿ ಆಡುವ ಜೊತೆಗೆ ಐಪಿಎಲ್ 2023 ವೇಳೆ ಆರ್ಸಿಬಿ ತಂಡ ಸೇರಿಕೊಳ್ಳುವುದು ಖಚಿತವಾಗಿದೆ.
ಹೀಗಾಗಿ ಮ್ಯಾಕ್ಸ್ವೆಲ್ ಮೆಲ್ಬೋರ್ನ್ ನಲ್ಲಿ ನಡೆಯಲಿರುವ ಕ್ವೀನ್ಸ್ಲ್ಯಾಂಡ್ ವಿರುದ್ಧದ ಶೆಫೀಲ್ಡ್ ಶೀಲ್ಡ್ ಪಂದ್ಯದಲ್ಲಿ ವಿಕ್ಟೋರಿಯಾ ಪರವಾಗಿ ಕಣಕ್ಕಿಳಿಯಲಿದ್ದಾರಂತೆ. ಈ ಸುದ್ದಿ ಸಹ ಆರ್ಸಿಬಿ ಅಭಿಮಾಣಿಗಳ ಸಂತಸಕ್ಕೆ ಕಾರಣವಾಗಿದೆ. ಐಪಿಎಲ್ 2023ರ ಮಿನಿ ಹರಾಜು ಮುಗಿದಿದೆ. ಎಲ್ಲಾ ತಂಡಗಳು ಮುಂದಿನ ಸೀಸನ್ಗೆ ತಮ್ಮ ತಂಡವನ್ನು ಬಲಿಷ್ಠವಾಗಿ ಕಟ್ಟಿದೆ. ಐಪಿಎಲ್ 2023ರ 16ನೇ ಸೀಸನ್ಗೆ ಆರ್ಸಿಬಿ ತಂಡ 25 ಆಟಗಾರರ ಬಲಿಷ್ಠ ತಂಡವನ್ನು ಕಟ್ಟಿದೆ. ಹರಾಜಿಗೂ ಮುನ್ನ ತಂಡ 5 ಜನ ಆಟಗಾರರನ್ನು ಬಿಡುಗಡೆ ಮಾಡಿತ್ತು. ಆದರೆ ಈ ಹರಾಜಿನಲ್ಲಿ 7 ಆಟಗಾರರನ್ನು ತಂಡ ಖರೀದಿಸಿದೆ.
2023ಕ್ಕೆ RCB ಸಂಪೂರ್ಣ ತಂಡ: ಫಾಫ್ ಡು ಪ್ಲೆಸಿಸ್ (ಸಿ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್ ಹ್ಯಾಜಲ್ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ , ವಿಲ್ ಜಾಕ್ಸ್ , ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್.
IPL 2023 Glenn Maxwell will Join the RCB Team Soon.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 05:20 pm
Bangalore Correspondent
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm