ಬ್ರೇಕಿಂಗ್ ನ್ಯೂಸ್
02-02-23 02:15 pm Source: news18 ಕ್ರೀಡೆ
ಹಾರ್ದಿಕ್ ಪಾಂಡ್ಯ ಟಿ20 ಸರಣಿಯ ಟ್ರೋಫಿಯನ್ನು ಹಸ್ತಾಂತರಿಸಿದ ನಂತರ, ಅವರು ಆ ಕಪ್ ಅನ್ನು ಪೃಥ್ವಿ ಶಾಗೆ ನೀಡಿದರು. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಈ ವೀಡಿಯೊವನ್ನು ಅಪ್ಲೋಡ್ ಮಾಡಿದೆ. ಹಾರ್ದಿಕ್ ಪಾಂಡ್ಯ ಅವರ ನಡೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಬಹಳ ಸಮಯದ ನಂತರ ಪೃಥ್ವಿ ಟಿ20 ತಂಡದಲ್ಲಿ ಸ್ಥಾನ ಪಡೆದರೂ ಸಹ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲು ಸಾಧ್ಯವಾಗಲಿಲ್ಲ.
ಈ ಮೂಲಕ ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ಹೌದು, ರೋಹಿತ್ ಕಿವೀಸ್ ವಿರುದ್ಧದ ಏಕದಿನ ಸರಣಿ ಗೆಲುವಿನ ನಂತರ ವಿಕೆಟ್ ಕೀಪರ್ ಕೆಎಸ್ ಭರತ್ ಗೆ ಟ್ರೋಫಿ ಎತ್ತುವ ಅವಕಾಶ ನೀಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇಷ ಎಂದರೆ ಭರತ್ ಆ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿರಲಿಲ್ಲ.

ಪೃಥ್ವಿ ಶಾ 2021ರಲ್ಲಿ ಕೊನೆಯ T20:
ಬಲಗೈ ಬ್ಯಾಟ್ಸ್ಮನ್ ಪೃಥ್ವಿ ಶಾ ಜುಲೈ 2021 ರಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಕೊನೆಯ T20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಪ್ರಸ್ತುತ ಕಿವೀಸ್ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಗಿಲ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನ ವಿಶೇಷವಾಗಿರಲಿಲ್ಲ. ಹೀಗಿರುವಾಗ ಮೂರನೇ ಟಿ20ಯಲ್ಲಿ ಪೃಥ್ವಿ ಶಾಗೆ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅದು ಸಾಧ್ಯವಾಗಲಿಲ್ಲ. ನಿರ್ಣಾಯಕ ಟಿ20ಯಲ್ಲಿ ಆರಂಭಿಕ ಜೋಡಿ ಗಿಲ್ ಮತ್ತು ಇಶಾನ್ ಮೇಲೆ ಟೀಂ ಮ್ಯಾನೇಜ್ಮೆಂಟ್ ವಿಶ್ವಾಸ ವ್ಯಕ್ತಪಡಿಸಿದೆ. ಗಿಲ್ ಶತಕ ಗಳಿಸಿದರೆ, ಇಶಾನ್ ಕಿಶನ್ ಮತ್ತೊಮ್ಮೆ ವಿಫಲರಾದರು.
ಪೃಥ್ವಿ ಟ್ರಿಪಲ್ ಸೆಂಚುರಿ:
ಪೃಥ್ವಿ ಶಾ ರಣಜಿ ಟ್ರೋಫಿ ಪಂದ್ಯದಲ್ಲಿ ಅಸ್ಸಾಂ ವಿರುದ್ಧ 379 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಟೀಂ ಇಂಡಿಯಾದಲ್ಲಿ ಪುನರಾಗಮನ ಮಾಡುವಲ್ಲಿ ಯಶಸ್ವಿಯಾಗಿದ್ದರು. ಪಂದ್ಯದ ಕುರಿತು ನೋಡುವುದಾದರೆ, ಮೊದಲು ಬ್ಯಾಟಿಂಗ್ ಮಾಡಿದ ಭಾರತವು ಶುಭಮನ್ ಗಿಲ್ ಅವರ ಅಜೇಯ 126 ರನ್ಗಳ ಆಧಾರದ ಮೇಲೆ 234 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕಿವೀಸ್ ತಂಡ 66 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಹಾರ್ದಿಕ್ ಪಾಂಡ್ಯ ತಂಡ ಕಿವೀಸ್ವಿರುದ್ಧ 2-1 ಅಂತರದಿಂದ ಸರಣಿ ಜಯಿಸಿದೆ.
Hardik Pandya is Appreciated by everyone by Handing over the Trophy to Prithvi Shah.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm