ಬ್ರೇಕಿಂಗ್ ನ್ಯೂಸ್
02-02-23 02:15 pm Source: news18 ಕ್ರೀಡೆ
ಹಾರ್ದಿಕ್ ಪಾಂಡ್ಯ ಟಿ20 ಸರಣಿಯ ಟ್ರೋಫಿಯನ್ನು ಹಸ್ತಾಂತರಿಸಿದ ನಂತರ, ಅವರು ಆ ಕಪ್ ಅನ್ನು ಪೃಥ್ವಿ ಶಾಗೆ ನೀಡಿದರು. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಈ ವೀಡಿಯೊವನ್ನು ಅಪ್ಲೋಡ್ ಮಾಡಿದೆ. ಹಾರ್ದಿಕ್ ಪಾಂಡ್ಯ ಅವರ ನಡೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಬಹಳ ಸಮಯದ ನಂತರ ಪೃಥ್ವಿ ಟಿ20 ತಂಡದಲ್ಲಿ ಸ್ಥಾನ ಪಡೆದರೂ ಸಹ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲು ಸಾಧ್ಯವಾಗಲಿಲ್ಲ.
ಈ ಮೂಲಕ ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ಹೌದು, ರೋಹಿತ್ ಕಿವೀಸ್ ವಿರುದ್ಧದ ಏಕದಿನ ಸರಣಿ ಗೆಲುವಿನ ನಂತರ ವಿಕೆಟ್ ಕೀಪರ್ ಕೆಎಸ್ ಭರತ್ ಗೆ ಟ್ರೋಫಿ ಎತ್ತುವ ಅವಕಾಶ ನೀಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇಷ ಎಂದರೆ ಭರತ್ ಆ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿರಲಿಲ್ಲ.
ಪೃಥ್ವಿ ಶಾ 2021ರಲ್ಲಿ ಕೊನೆಯ T20:
ಬಲಗೈ ಬ್ಯಾಟ್ಸ್ಮನ್ ಪೃಥ್ವಿ ಶಾ ಜುಲೈ 2021 ರಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಕೊನೆಯ T20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಪ್ರಸ್ತುತ ಕಿವೀಸ್ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಗಿಲ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನ ವಿಶೇಷವಾಗಿರಲಿಲ್ಲ. ಹೀಗಿರುವಾಗ ಮೂರನೇ ಟಿ20ಯಲ್ಲಿ ಪೃಥ್ವಿ ಶಾಗೆ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅದು ಸಾಧ್ಯವಾಗಲಿಲ್ಲ. ನಿರ್ಣಾಯಕ ಟಿ20ಯಲ್ಲಿ ಆರಂಭಿಕ ಜೋಡಿ ಗಿಲ್ ಮತ್ತು ಇಶಾನ್ ಮೇಲೆ ಟೀಂ ಮ್ಯಾನೇಜ್ಮೆಂಟ್ ವಿಶ್ವಾಸ ವ್ಯಕ್ತಪಡಿಸಿದೆ. ಗಿಲ್ ಶತಕ ಗಳಿಸಿದರೆ, ಇಶಾನ್ ಕಿಶನ್ ಮತ್ತೊಮ್ಮೆ ವಿಫಲರಾದರು.
ಪೃಥ್ವಿ ಟ್ರಿಪಲ್ ಸೆಂಚುರಿ:
ಪೃಥ್ವಿ ಶಾ ರಣಜಿ ಟ್ರೋಫಿ ಪಂದ್ಯದಲ್ಲಿ ಅಸ್ಸಾಂ ವಿರುದ್ಧ 379 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಟೀಂ ಇಂಡಿಯಾದಲ್ಲಿ ಪುನರಾಗಮನ ಮಾಡುವಲ್ಲಿ ಯಶಸ್ವಿಯಾಗಿದ್ದರು. ಪಂದ್ಯದ ಕುರಿತು ನೋಡುವುದಾದರೆ, ಮೊದಲು ಬ್ಯಾಟಿಂಗ್ ಮಾಡಿದ ಭಾರತವು ಶುಭಮನ್ ಗಿಲ್ ಅವರ ಅಜೇಯ 126 ರನ್ಗಳ ಆಧಾರದ ಮೇಲೆ 234 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕಿವೀಸ್ ತಂಡ 66 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಹಾರ್ದಿಕ್ ಪಾಂಡ್ಯ ತಂಡ ಕಿವೀಸ್ವಿರುದ್ಧ 2-1 ಅಂತರದಿಂದ ಸರಣಿ ಜಯಿಸಿದೆ.
Hardik Pandya is Appreciated by everyone by Handing over the Trophy to Prithvi Shah.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 05:20 pm
Bangalore Correspondent
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm