ಬ್ರೇಕಿಂಗ್ ನ್ಯೂಸ್
09-02-23 12:31 pm Source: news18 ಕ್ರೀಡೆ
2023ರ ಮಹಿಳಾ ಟಿ20 ವಿಶ್ವಕಪ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಕಳಪೆ ಪ್ರದರ್ಶನ ನೀಡಿದ್ದು ಗೊತ್ತೇ ಇದೆ. ಆಸ್ಟ್ರೇಲಿಯಾ ಕೈಯಲ್ಲಿ ಕೇವಲ 85 ರನ್ಗಳಿಗೆ ಕುಸಿದು ನಿರಾಸೆ ಮೂಡಿಸಿತು. ಆದರೆ, ಬಾಂಗ್ಲಾದೇಶ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿದೆ. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಅವರು ಕೇವಲ 56 ಎಸೆತಗಳಲ್ಲಿ ಅಜೇಯ 91 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 9 ಸಿಕ್ಸರ್ಗಳು ಬಂದಿದ್ದವು. ಇದೇ ವೇಳೆ ಬಾಂಗ್ಲಾದೇಶದ ಹಿರಿಯ ಬೌಲರ್ ಜಹನಾರಾ ಅವರಿಗೆ 4 ಓವರ್ಗಳಲ್ಲಿ 54 ರನ್ ನೀಡಿದರು. ರಿಚಾ ಘೋಷ್ ಇತ್ತೀಚೆಗೆ ಟಿ20 ಮಾದರಿಯಲ್ಲಿ ಸೂಪರ್ ಫಾರ್ಮ್ನಲ್ಲಿದ್ದಾರೆ. ಅದರಲ್ಲೂ ಟಿ20 ಮಾದರಿಯಲ್ಲಿ ಫಿನಿಶರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ರಿಚಾ ಘೋಷ್ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಫಿನಿಶರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದರು.


ಇದೀಗ ಅಭಿಮಾನಿಗಳು ಅವರಿಗೆ ಲೇಡಿ ಧೋನಿ ಎಂಬ ಟ್ಯಾಗ್ ನೀಡಿದ್ದಾರೆ. ಈ ಪಂದ್ಯದಲ್ಲಿ ರಿಚಾ ಘೋಷ್ ಅವರೊಂದಿಗೆ ಜೆಮಿಮಾ ರಾಡ್ರಿಗಸ್ 27 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಮೂಲಕ 41 ರನ್ಗಳಿಸಿದರು. ಇದರಿಂದಾಗಿ ಭಾರತ 20 ಓವರ್ಗಳಲ್ಲಿ 5 ವಿಕೆಟ್ಗೆ 183 ರನ್ ಗಳಿಸಿತು. ಬಳಿಕ ಬಾಂಗ್ಲಾದೇಶ 20 ಓವರ್ಗಳಲ್ಲಿ 8 ವಿಕೆಟ್ಗೆ 131 ರನ್ಗಳಿಸುವ ಮೂಲಕ ಸೋಲನ್ನಪ್ಪಿತು. ಭಾರತದ ಬೌಲರ್ಗಳ ಪೈಕಿ ದೇವಿಕಾ ವೈದ್ಯ ಎರಡು ವಿಕೆಟ್ ಪಡೆದರು. ಈ ಟೂರ್ನಿಯಲ್ಲಿ ಭಾರತ ನೆಚ್ಚಿನ ತಂಡಗಳಲ್ಲಿ ಒಂದಾಗಿ ಕಣಕ್ಕಿಳಿಯುತ್ತಿದೆ.


ಆಸ್ಟ್ರೇಲಿಯಾದಲ್ಲಿ ನಡೆದ 2020ರ ಟಿ20 ವಿಶ್ವಕಪ್ನ ಫೈನಲ್ನಲ್ಲಿ ಟೀಂ ಇಂಡಿಯಾ ಸೋತಿತ್ತು. ನಂತರ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ರನ್ನರ್ ಅಪ್ ಆಗಿತ್ತು. ಹೀಗಾಗಿ ಈ ಬಾಋಇಯಾದರೂ ವಿಶ್ವಕಪ್ ಗೆಲ್ಲಬೇಕೆಂಬ ಹಠದಲ್ಲಿ ಟೀಂ ಇಂಡಿಯಾ ಕಣಕ್ಕಿಳಿದಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ತನ್ನ ಬಹುಕಾಲದ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಫೆ.12ರಂದು ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ ನಡೆಯಲಿದೆ. 6.30ಕ್ಕೆ ಆರಂಭವಾಗಲಿದೆ.
Womens T20 World Cup 2023 India Win against Bangladesh in Warm up Match.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm