ಬ್ರೇಕಿಂಗ್ ನ್ಯೂಸ್
10-02-23 01:28 pm Source: news18 ಕ್ರೀಡೆ
ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (IND vs AUS) ಅದ್ಭುತ ಶತಕ ಬಾರಿಸುವ ಮೂಲಕ ಭಾರತ ತಂಡದ ಸ್ಕೋರ್ ಹೆಚ್ಚಿಸುವಲ್ಲಿ ನೆರವಾಗಿದ್ದಾರೆ. ರೋಹಿತ್ ನಾಯಕನಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಆಡುತ್ತಿದ್ದು, ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕ ಸಿಡಿಸಿದ್ದಾರೆ. ಸುದೀರ್ಘ ಅವಧಿಯ ಬಳಿಕ ರೋಹಿತ್ ಶತಕ ಸಿಡಿಸಿದ್ದಾರೆ.
ರೋಹಿತ್ ಈ ಹಿಂದೆ 2021ರ ಸೆಪ್ಟೆಂಬರ್ನಲ್ಲಿ ಓವಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಶತಕ ದಾಖಲಿಸಿದ್ದರು. ರೋಹಿತ್ 171 ಎಸೆತಗಳಲ್ಲಿ ಶತಕ ಪೂರೈಸಿದರು. ಅವರು ತಮ್ಮ ಶತಕದಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್ಗಳನ್ನು ಬಾರಿಸಿದರು. ಇನ್ನು, ರೋಹಿತ್ ಮೊದಲ ವಿಕೆಟ್ಗೆ ಕೆಎಲ್ ರಾಹುಲ್ ಜೊತೆ 76 ರನ್ ಜೊತೆಯಾಟ ನಡೆಸಿದರು. ಬಳಿಕ ಆರ್ ಅಶ್ವಿನ್ ಜೊತೆ ಎರಡನೇ ವಿಕೆಟ್ ಗೆ 42 ರನ್ ಸೇರಿಸಿದರು.


ಕೆಎಲ್ ರಾಹುಲ್ 71 ಎಸೆತಗಳಲ್ಲಿ 20 ರನ್ ಗಳಿಸಿದರೆ, ಆರ್ ಅಶ್ವಿನ್ 23 ರನ್ ಗಳಿಸಿ ಔಟಾದರು. ಚೇತೇಶ್ವರ ಪೂಜಾರ ಸಹ ಕೇವಲ 7 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ವಿರಾಟ್ ಕೊಹ್ಲಿ ಕೂಡ ನಿರಾಸೆ ಮೂಡಿಸಿದ್ದಾರೆ. ಕೊಹ್ಲಿ 26 ಎಸೆತಗಳಲ್ಲಿ 12 ರನ್ ಕೊಡುಗೆ ನೀಡಿದರು. ರೋಹಿತ್ ಶರ್ಮಾ ಟೆಸ್ಟ್ ಮಾದರಿಯಲ್ಲಿ ಕಳೇದ ಕೆಲ ವರ್ಷಗಳಿಂದ ಶತಕ ಗಳಿಸಲು ಪರದಾಡುತ್ತಿದ್ದರು. ಹೀಗಾಗಿ ಆಸೀಸ್ ವಿರುದ್ಧದ ಸರಣಿಯಲ್ಲಿ ಅವರ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯನ್ನು ಇಟ್ಟಿದ್ದರು. ಅದರಂತೆ ಇಂದು ಭರ್ಜರಿ ಶತಕ ಸಿಡಿಸಿ ಮಿಂಚಿದರು.

![,[object Object], ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.](https://images.news18.com/kannada/uploads/2023/02/FolrKPnaAAEX9F1-167601440216x9.jpg?im=Resize,width=904,aspect=fit,type=normal)
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
IND vs AUS 1st 2nd Day Rohit Sharma hits 9th Test Century against Australia Nagpur Test.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm