ಬ್ರೇಕಿಂಗ್ ನ್ಯೂಸ್
10-02-23 01:28 pm Source: news18 ಕ್ರೀಡೆ
ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (IND vs AUS) ಅದ್ಭುತ ಶತಕ ಬಾರಿಸುವ ಮೂಲಕ ಭಾರತ ತಂಡದ ಸ್ಕೋರ್ ಹೆಚ್ಚಿಸುವಲ್ಲಿ ನೆರವಾಗಿದ್ದಾರೆ. ರೋಹಿತ್ ನಾಯಕನಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಆಡುತ್ತಿದ್ದು, ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕ ಸಿಡಿಸಿದ್ದಾರೆ. ಸುದೀರ್ಘ ಅವಧಿಯ ಬಳಿಕ ರೋಹಿತ್ ಶತಕ ಸಿಡಿಸಿದ್ದಾರೆ.
ರೋಹಿತ್ ಈ ಹಿಂದೆ 2021ರ ಸೆಪ್ಟೆಂಬರ್ನಲ್ಲಿ ಓವಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಶತಕ ದಾಖಲಿಸಿದ್ದರು. ರೋಹಿತ್ 171 ಎಸೆತಗಳಲ್ಲಿ ಶತಕ ಪೂರೈಸಿದರು. ಅವರು ತಮ್ಮ ಶತಕದಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್ಗಳನ್ನು ಬಾರಿಸಿದರು. ಇನ್ನು, ರೋಹಿತ್ ಮೊದಲ ವಿಕೆಟ್ಗೆ ಕೆಎಲ್ ರಾಹುಲ್ ಜೊತೆ 76 ರನ್ ಜೊತೆಯಾಟ ನಡೆಸಿದರು. ಬಳಿಕ ಆರ್ ಅಶ್ವಿನ್ ಜೊತೆ ಎರಡನೇ ವಿಕೆಟ್ ಗೆ 42 ರನ್ ಸೇರಿಸಿದರು.


ಕೆಎಲ್ ರಾಹುಲ್ 71 ಎಸೆತಗಳಲ್ಲಿ 20 ರನ್ ಗಳಿಸಿದರೆ, ಆರ್ ಅಶ್ವಿನ್ 23 ರನ್ ಗಳಿಸಿ ಔಟಾದರು. ಚೇತೇಶ್ವರ ಪೂಜಾರ ಸಹ ಕೇವಲ 7 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ವಿರಾಟ್ ಕೊಹ್ಲಿ ಕೂಡ ನಿರಾಸೆ ಮೂಡಿಸಿದ್ದಾರೆ. ಕೊಹ್ಲಿ 26 ಎಸೆತಗಳಲ್ಲಿ 12 ರನ್ ಕೊಡುಗೆ ನೀಡಿದರು. ರೋಹಿತ್ ಶರ್ಮಾ ಟೆಸ್ಟ್ ಮಾದರಿಯಲ್ಲಿ ಕಳೇದ ಕೆಲ ವರ್ಷಗಳಿಂದ ಶತಕ ಗಳಿಸಲು ಪರದಾಡುತ್ತಿದ್ದರು. ಹೀಗಾಗಿ ಆಸೀಸ್ ವಿರುದ್ಧದ ಸರಣಿಯಲ್ಲಿ ಅವರ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯನ್ನು ಇಟ್ಟಿದ್ದರು. ಅದರಂತೆ ಇಂದು ಭರ್ಜರಿ ಶತಕ ಸಿಡಿಸಿ ಮಿಂಚಿದರು.

![,[object Object], ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.](https://images.news18.com/kannada/uploads/2023/02/FolrKPnaAAEX9F1-167601440216x9.jpg?im=Resize,width=904,aspect=fit,type=normal)
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
IND vs AUS 1st 2nd Day Rohit Sharma hits 9th Test Century against Australia Nagpur Test.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm