ಬ್ರೇಕಿಂಗ್ ನ್ಯೂಸ್
11-02-23 01:38 pm Source: news18 ಕ್ರೀಡೆ
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಮೂರನೇ ದಿನದಾಟ ವೇಳೆಗೆ ಭಾರತ 400 ರನ್ಗೆ ಆಲ್ಔಟ್ ಆಗಿದೆ. ಮೇಲ್ನೋಟಕ್ಕೆ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದಂತಿದೆ.
ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 321 ರನ್ ಕಲೆಹಾಕಿ 144 ರನ್ಗಳ ಮುನ್ನಡೆಯಲ್ಲಿತ್ತು. ರೋಹಿತ್ ಶರ್ಮಾ (Rohit Sharma) ಶತಕ ತಂಡದ ಮೊತ್ತ ಹೆಚ್ಚಲು ಸಹಾಯ ಮಾಡಿತ್ತು ಆದರೆ, ಇದಕ್ಕೂ ಮುನ್ನ ಹಿಟ್ಮ್ಯಾನ್ ಔಟ್ ಆಗುವುದರಿಂದ ಸ್ವಲ್ಪದರಲ್ಲೇ ಪಾರಾದರು. ಇದಕ್ಕೆ ಕಾರಣವಾಗಿದ್ದು ವಿರಾಟ್ ಕೊಹ್ಲಿ (Virat Kohli). ಇದೀಗ ವಿರಾಟ್ ಕೊಹ್ಲಿ ರೋಹಿತ್ ಶರ್ಮಾಗೆ ಸಾರಿ ಕೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


48ನೇ ಓವರ್ನ ನೇಥನ್ ಲ್ಯಾನ್ ಬೌಲಿಂಗ್ನಲ್ಲಿ ವಿರಾಟ್ ಕೊಹ್ಲಿ ಮಿಡ್ ವಿಕೆಟ್ ಕಡೆ ಹೊಡೆದು ಓಡಲು ಮುಂದಾದರು. ನಾನ್ ಸ್ಟ್ರೈಕರ್ನಲ್ಲಿದ್ದ ರೋಹಿತ್ ಶರ್ಮಾಗೆ ಓಡಿ ಬರುವಂತೆ ಕೊಹ್ಲಿ ಕರೆ ನೀಡಿದರು. ಒಂದು ರನ್ ಕಲೆಹಾಕಲೂ ಅಲ್ಲಿ ಸಮಯವಿರಲಿಲ್ಲ. ಅತ್ತ ಕೊಹ್ಲಿ ಮಾತಿನಂತೆ ರೋಹಿತ್ ಅರ್ಧದ ವರೆಗೆ ಓಡಿ ಬಂದರು. ಚೆಂಡು ಅಲ್ಲೆ ಸರ್ಕಲ್ನಲ್ಲಿ ಇದ್ದಿರುವುದನ್ನು ಗಮನಿಸಿದ ಕೊಹ್ಲಿ ತಕ್ಷಣ ತನ್ನ ನಿರ್ಧಾರವನ್ನು ಬದಲಾಯಿಸಿ ನೋ ಎಂದು ಕಿರುಚಿದರು.


ವಿಕೆಟ್ ಬಿಟ್ಟು ರನ್ಗೆಂದು ಅರ್ಧ ದಾರಿಯ ವರೆಗೆ ಬಂದಿದ್ದ ರೋಹಿತ್ ಕೂಡಲೇ ಹಿಂತಿರುಗಿ ನಾನ್ ಸ್ಟ್ರೈಕರ್ ಕಡೆ ತಿರುಗಿ ಓಡಿದರು. ರೋಹಿತ್ ಶರ್ಮಾ ಡೈವ್ ಹೊಡೆದು ಸ್ಕ್ರೀಜ್ ಮುಟ್ಟಿದರು. ಕೊಹ್ಲಿ ತಕ್ಷಣವೇ ರೋಹಿತ್ ಬಳಿ ಕೈಸನ್ನೆ ಮೂಲಕ ಕ್ಷಮೆ ಕೇಳಿಕೊಂಡಿದ್ದಾರೆ. (ಸಾಂದರ್ಬಿಕ ಚಿತ್ರ)
Cricket india vs Australia Virat Kohli says Sorry after Mixup with Rohit Sharma.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm