ಬ್ರೇಕಿಂಗ್ ನ್ಯೂಸ್
18-02-23 03:05 pm Source: news18 ಕ್ರೀಡೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 263 ರನ್ ಗಳಿಗೆ ಆಲೌಟಾಯಿತು. ಆ ಬಳಿಕ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಆಸೀಸ್ ವಿರುದ್ಧ ಹಿನ್ನಡೆ ಸಾಧಿಸಿದೆ. ಹೀಗಾಗಿ ಭಾರತ ಈ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಬೌಲರ್ಗಳ ದಾಳಿಗೆ ಕೊಂಚ ತತ್ತರಿಸಿದೆ.
ಆದರೆ ಈ ಟೆಸ್ಟ್ ಸರಣಿಯಲ್ಲಿ ಅಂಪೈರ್ಗಳು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಎರಡನೇ ಟೆಸ್ಟ್ಗೆ ಭಾರತದ ನಿತಿನ್ ಮೆನನ್ ಮತ್ತು ಇಂಗ್ಲೆಂಡ್ನ ಮೈಕೆಲ್ ಗಾಫ್ ಅಂಪೈರ್ಗಳಾಗಿದ್ದಾರೆ. ಮೈಕಲ್ ಗಾಫ್ ಮೊದಲ ದಿನದ ಆಟದಲ್ಲಿ ಎರಡು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡರು. ವಾರ್ನರ್ ಎಲ್ಬಿಗೆ ಔಟಾದರು. ಆದರೆ ರಿವ್ಯೂಗೆ ಹೋದ ವಾರ್ನರ್ ಔಟಾಗಿರಲಿಲ್ಲ.
ಭಾರತ ಬ್ಯಾಟಿಂಗ್ ಮಾಡುತ್ತಿರುವಾಗ, ರೋಹಿತ್ ಶರ್ಮಾ ವಿಷಯದಲ್ಲಿ ಮೈಕೆಲ್ ಮತ್ತೊಮ್ಮೆ ತಪ್ಪು ನಿರ್ಧಾರವನ್ನು ಘೋಷಿಸಿದರು. ಬ್ಯಾಟ್ ಗೆ ತಾಗಿ ಪ್ಯಾಡ್ ಗೆ ತಾಗಿದರೂ ಅಂಪೈರ್ ಎಲ್ ಬಿ ಡಿಕ್ಲೇರ್ ಮಾಡಿದರು. ರಿವ್ಯೂಗೆ ಹೋದ ರೋಹಿತ್ ಔಟಾಗಿರಲಿಲ್ಲ. 2ನೇ ದಿನ ನಿತಿನ್ ಮೆನನ್ ಹಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪೂಜಾರ ನಾಟೌಟ್ ಎಂದು ನೀಡಿದರು. ಆದರೆ ಆಸ್ಟ್ರೇಲಿಯಾ ರಿವ್ಯೂ ತೆಗೆದುಕೊಳ್ಳಲಿಲ್ಲ. ಆದರೆ ಎರಡನೇ ಬಾರಿಯೂ ಪೂಜಾರ ಪ್ರಕರಣದಲ್ಲಿ ಅಂಪೈರ್ ನಾಟೌಟ್ ನೀಡಿದರು. ಆದರೆ ಈ ಬಾರಿ ರಿವ್ಯೂಗೆ ತೆರಳಿದ ಆಸೀಸ್ ಯಶಸ್ವಿಯಾಯಿತು.
ಇದರ ಬಳಿಕ ವಿರಾಟ್ ಕೊಹ್ಲಿಯನ್ನು ಔಟ್ ಎಂದು ಘೋಷಿಸಿದ್ದಕ್ಕಾಗಿ ಆನ್ ಫೀಲ್ಡ್ ಅಂಪೈರ್ ನಿತಿನ್ ಮೆನನ್ ಮತ್ತು ಮೂರನೇ ಅಂಪೈರ್ ವಿರುದ್ಧ ಅಭಿಮಾನಿಗಳು ಕೋಪಗೊಂಡಿದ್ದಾರೆ. ಮ್ಯಾಥ್ಯೂ ಕುನೆಮನ್ ಬೌಲಿಂಗ್ ನಲ್ಲಿ ಕೊಹ್ಲಿ ಡಿಫೆನ್ಸ್ ಆಡಲು ಯತ್ನಿಸಿದರು. ಆದರೆ ಚೆಂಡು ಪ್ಯಾಡ್ಗೆ ಬಡಿಯಿತು. ಎಲ್ಬಿಗೆ ಮನವಿ ಮಾಡಿದರು. ಅಂಪೈರ್ ಔಟ್ ನೀಡಿದರು. ಆದರೆ ಕೊಹ್ಲಿ ರಿವ್ಯೂ ತೆಗೆದುಕೊಂಡರು. ಆಗ ಚೆಂಡು ಪ್ಯಾಡ್ ಮತ್ತು ಬ್ಯಾಟ್ಗೆ ಏಕಕಾಲದಲ್ಲಿ ಬಡಿದಿದ್ದು ಕಂಡುಬಂದಿತು.
ಮೊದಲ ಟೆಸ್ಟ್ನಲ್ಲೂ ಅಂಪೈರ್ಗಳು ಇದೇ ರೀತಿ ತಪ್ಪು ನಿರ್ಧಾರಗಳನ್ನು ನೀಡಿದ್ದರು. ಎರಡೂ ತಂಡಗಳು ಕೂಡ ರಿವ್ಯೂಗೆ ಹೋಗಿ ಯಶಸ್ವಿಯಾಗಿದ್ದವು. ಅಂತರಾಷ್ಟ್ರೀಯ ಪಂದ್ಯವೊಂದರಲ್ಲಿ ಅಂಪೈರ್ಗಳ ನಿರ್ಧಾರಗಳು ಅಚ್ಚರಿ ಮೂಡಿಸಿದೆ.
IND vs AUS 2nd test Virat Kohli Out due to Wrong Decision of umpires.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 05:20 pm
Bangalore Correspondent
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm