ಬ್ರೇಕಿಂಗ್ ನ್ಯೂಸ್
23-02-23 02:05 pm Source: news18 ಕ್ರೀಡೆ
ಮೊದಲ ಸೀಸನ್ನಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಆಡಿದ ಗುಜರಾತ್ ಟೈಟಾನ್ಸ್ ಐಪಿಎಲ್ 2022ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಅದ್ಭುತ ಪ್ರದರ್ಶನ ನೀಡಿತು. ಐಪಿಎಲ್ 2023 ಪ್ರಾರಂಭವಾಗಲು ಇನ್ನು ಒಂದು ತಿಂಗಳು ಬಾಕಿ ಉಳಿದಿದೆ. ಮಾರ್ಚ್ 31 ರಿಂದ ಐಪಿಎಲ್ ಲೀಗ್ ಆರಂಭವಾಗಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಜೊತೆಗೆ ದಕ್ಷಿಣ ಆಫ್ರಿಕಾದ ಸ್ಟಾರ್ ಡೇವಿಡ್ ಮಿಲ್ಲರ್ ಕೂಡ ಕಾರಣ. ಫಿನಿಶರ್ ಆಗಿ ಅವರು ಅದ್ಭುತ ಪ್ರದರ್ಶನ ನೀಡಿದರು. ಇತ್ತೀಚೆಗೆ, ಮಿಲ್ಲರ್ ಪಾಕಿಸ್ತಾನ್ ಸೂಪರ್ ಲೀಗ್ 2023ರಲ್ಲಿ ಮುಲ್ತಾನ್ ಸುಲ್ತಾನ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ವೇಳೆ ಮುಲ್ತಾನ್ ಸುಲ್ತಾನ್ ತಂಡ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು 52 ರನ್ ಗಳಿಂದ ಸೋಲಿಸಿತು.


ಈ ಯಶಸ್ಸಿನಲ್ಲಿ ಮಿಲ್ಲರ್ ಪ್ರಮುಖ ಪಾತ್ರ ವಹಿಸಿದರು. ಅವರು ಕೇವಲ 25 ಎಸೆತಗಳಲ್ಲಿ 52 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ಗಳು ಸೇರಿದ್ದವು. ಮಿಲ್ಲರ್ ಅವರ ಕಿಲ್ಲರ್ ಇನ್ನಿಂಗ್ಸ್ನಿಂದ ಮುಲ್ತಾನ್ ತಂಡ 20 ಓವರ್ಗಳಲ್ಲಿ 4 ವಿಕೆಟ್ಗೆ 190 ರನ್ ಗಳಿಸಿತು. ಬಳಿಕ ಇಸ್ಲಾಮಾಬಾದ್ 17.5 ಓವರ್ಗಳಲ್ಲಿ 138 ರನ್ಗಳಿಗೆ ಆಲೌಟಾಯಿತು. ರುಸ್ಸಿ ವ್ಯಾನ್ ಡೆರ್ ಡ್ಯುಸೆನ್ 49 ರನ್ ಗಳಿಸಿದರು. ಮುಲ್ತಾನ್ ಬೌಲರ್ ಆಗಿ ಅಬ್ಬಾಸ್ 4 ವಿಕೆಟ್ ಪಡೆದರು.



ಸದ್ಯದಲ್ಲೇ ಆರಂಭವಾಗಲಿರುವ ಐಪಿಎಲ್ 16ನೇ ಸೀಸನ್ಗೂ ಮುನ್ನ ಮಿಲ್ಲರ್ ಅವರ ಈ ಭರ್ಜರಿ ಆಟ ಗುಜರಾತ್ ತಂಡಕ್ಕೆ ಹೊಸ ಚೈತನ್ಯವನ್ನು ಮೂಡಿಸಿದೆ. ಕಳೆದ ಐಪಿಎಲ್ನಿಂದಲೂ ಮಿಲ್ಲರ್ ಸೂಪರ್ ಫಾರ್ಮ್ನಲ್ಲಿದ್ದರು. ಹಾಲಿ ಚಾಂಪಿಯನ್ ಆಗಿ ಪ್ರವೇಶಿಸುತ್ತಿರುವ ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 31 ರಂದು ಅಹಮದಾಬಾದ್ ಮೈದಾನದಲ್ಲಿ ನಡೆಯಲಿದೆ.
IPL 2023 David Miller of Gujarat Titans batted Brilliantly in the PSL League.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm