ಬ್ರೇಕಿಂಗ್ ನ್ಯೂಸ್
23-02-23 02:05 pm Source: news18 ಕ್ರೀಡೆ
ಮೊದಲ ಸೀಸನ್ನಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಆಡಿದ ಗುಜರಾತ್ ಟೈಟಾನ್ಸ್ ಐಪಿಎಲ್ 2022ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಅದ್ಭುತ ಪ್ರದರ್ಶನ ನೀಡಿತು. ಐಪಿಎಲ್ 2023 ಪ್ರಾರಂಭವಾಗಲು ಇನ್ನು ಒಂದು ತಿಂಗಳು ಬಾಕಿ ಉಳಿದಿದೆ. ಮಾರ್ಚ್ 31 ರಿಂದ ಐಪಿಎಲ್ ಲೀಗ್ ಆರಂಭವಾಗಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಜೊತೆಗೆ ದಕ್ಷಿಣ ಆಫ್ರಿಕಾದ ಸ್ಟಾರ್ ಡೇವಿಡ್ ಮಿಲ್ಲರ್ ಕೂಡ ಕಾರಣ. ಫಿನಿಶರ್ ಆಗಿ ಅವರು ಅದ್ಭುತ ಪ್ರದರ್ಶನ ನೀಡಿದರು. ಇತ್ತೀಚೆಗೆ, ಮಿಲ್ಲರ್ ಪಾಕಿಸ್ತಾನ್ ಸೂಪರ್ ಲೀಗ್ 2023ರಲ್ಲಿ ಮುಲ್ತಾನ್ ಸುಲ್ತಾನ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ವೇಳೆ ಮುಲ್ತಾನ್ ಸುಲ್ತಾನ್ ತಂಡ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು 52 ರನ್ ಗಳಿಂದ ಸೋಲಿಸಿತು.


ಈ ಯಶಸ್ಸಿನಲ್ಲಿ ಮಿಲ್ಲರ್ ಪ್ರಮುಖ ಪಾತ್ರ ವಹಿಸಿದರು. ಅವರು ಕೇವಲ 25 ಎಸೆತಗಳಲ್ಲಿ 52 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ಗಳು ಸೇರಿದ್ದವು. ಮಿಲ್ಲರ್ ಅವರ ಕಿಲ್ಲರ್ ಇನ್ನಿಂಗ್ಸ್ನಿಂದ ಮುಲ್ತಾನ್ ತಂಡ 20 ಓವರ್ಗಳಲ್ಲಿ 4 ವಿಕೆಟ್ಗೆ 190 ರನ್ ಗಳಿಸಿತು. ಬಳಿಕ ಇಸ್ಲಾಮಾಬಾದ್ 17.5 ಓವರ್ಗಳಲ್ಲಿ 138 ರನ್ಗಳಿಗೆ ಆಲೌಟಾಯಿತು. ರುಸ್ಸಿ ವ್ಯಾನ್ ಡೆರ್ ಡ್ಯುಸೆನ್ 49 ರನ್ ಗಳಿಸಿದರು. ಮುಲ್ತಾನ್ ಬೌಲರ್ ಆಗಿ ಅಬ್ಬಾಸ್ 4 ವಿಕೆಟ್ ಪಡೆದರು.



ಸದ್ಯದಲ್ಲೇ ಆರಂಭವಾಗಲಿರುವ ಐಪಿಎಲ್ 16ನೇ ಸೀಸನ್ಗೂ ಮುನ್ನ ಮಿಲ್ಲರ್ ಅವರ ಈ ಭರ್ಜರಿ ಆಟ ಗುಜರಾತ್ ತಂಡಕ್ಕೆ ಹೊಸ ಚೈತನ್ಯವನ್ನು ಮೂಡಿಸಿದೆ. ಕಳೆದ ಐಪಿಎಲ್ನಿಂದಲೂ ಮಿಲ್ಲರ್ ಸೂಪರ್ ಫಾರ್ಮ್ನಲ್ಲಿದ್ದರು. ಹಾಲಿ ಚಾಂಪಿಯನ್ ಆಗಿ ಪ್ರವೇಶಿಸುತ್ತಿರುವ ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 31 ರಂದು ಅಹಮದಾಬಾದ್ ಮೈದಾನದಲ್ಲಿ ನಡೆಯಲಿದೆ.
IPL 2023 David Miller of Gujarat Titans batted Brilliantly in the PSL League.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm