ಬ್ರೇಕಿಂಗ್ ನ್ಯೂಸ್
01-03-23 01:57 pm Source: news18 ಕ್ರೀಡೆ
ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಅವರ ಕಳಪೆ ಫಾರ್ಮ್ ಗೆ ಎಲ್ಲೆಡೆ ಟೀಕೆ ವ್ಯಕ್ತವಾಗುತ್ತಿದೆ. ಭಾರತದ ಮಾಜಿ ಬೌಲರ್ ವೆಂಕಟೇಶ್ ಪ್ರಸಾದ್ ಟ್ವಿಟ್ಟರ್ ನಲ್ಲಿ ರಾಹುಲ್ ಆಟದ ಬಗ್ಗೆ ನೇರವಾಗಿ ಮಾತನಾಡಿದ್ದರು. 40ಕ್ಕಿಂತ ಕಡಿಮೆ ಸರಾಸರಿ ಹೊಂದಿರುವ ಆಟಗಾರರು ಟೆಸ್ಟ್ ಮಾದರಿಯಲ್ಲಿ ಹೇಗೆ ಮುಂದುವರಿಯುತ್ತಾರೆ ಎಂದು ವೆಂಕಟೇಶ್ ಪ್ರಸಾದ್ ಕಟುವಾದ ಕಾಮೆಂಟ್ ಮಾಡಿದ್ದರು. ಕಳೆದ 12 ತಿಂಗಳಿಂದ ರಾಹುಲ್ ಅವರ ಟೆಸ್ಟ್ ಸರಾಸರಿ 14ಕ್ಕಿಂತ ಕಡಿಮೆ ಇದೆ.
ರಾಹುಲ್ ಅವರನ್ನು ತಂಡದಲ್ಲಿ ಮುಂದುವರಿಸಿದ್ದಕ್ಕೆ ಅಭಿಮಾನಿಗಳು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದಾರೆ. ಆದರೆ ಕೊಹ್ಲಿಯನ್ನು ಎಳೆದು ತರಲು ಯತ್ನಿಸಿದ್ದಾರೆ. ತಂಡದಲ್ಲಿ ವಿಫಲರಾಗುತ್ತಿರುವುದು ರಾಹುಲ್ ಒಬ್ಬರೇ ಅಲ್ಲ, ಇನ್ನು ಕೆಲವು ಆಟಗಾರರು ಕೂಡ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದು ಪೂಜಾರ ಮತ್ತು ಕೊಹ್ಲಿ ವಿರುದ್ಧ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.



ಇದಲ್ಲದೆ, ರಾಹುಲ್ ತಮ್ಮ ಬ್ಯಾಟಿಂಗ್ ಪ್ರತಿಭೆಯನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಈ ಹಿಂದೆ ಹಲವು ಬಾರಿ ತಂಡವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಆದರೆ ಆಟಗಾರರು ವಿಫಲರಾದಾಗ ಟೀಕೆ ಮಾಡುವುದು ಸಹಜ ಎಂದಿದ್ದಾರೆ. ರಾಹುಲ್ ಅವರ ಮೌಲ್ಯವನ್ನು ತಿಳಿದಿರುವ ಮ್ಯಾನೇಜ್ಮೆಂಟ್ ಅವರನ್ನು ಬೆಂಬಲಿಸುತ್ತದೆ ಎಂದು ಗಂಗೂಲಿ ಹೇಳಿದ್ದಾರೆ. ರಾಹುಲ್ ಶೀಘ್ರದಲ್ಲೇ ಫಾರ್ಮ್ಗೆ ಮರಳುತ್ತಾರೆ ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದರು.




ಗಂಗೂಲಿ ಅವರ ಇತ್ತೀಚಿನ ಕಾಮೆಂಟ್ಗಳಿಗೆ ಕೊಹ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಗಂಗೂಲಿ ಮತ್ತೊಮ್ಮೆ ಕೊಹ್ಲಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಮೂರನೇ ಟೆಸ್ಟ್ ಮಾರ್ಚ್ 1 ರಿಂದ 5ರ ವರೆಗೆ ಇಂದೋರ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದಲ್ಲಿ ಭಾರತ ತಂಡ ಅಗ್ರಸ್ಥಾನದ ಜೊತೆಗೆ ಸರಣಿ ಗೆಲ್ಲಲಿದೆ.
IND vs AUS 3rd test criticism comes when you fail says Sourav Ganguly.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm