ಬ್ರೇಕಿಂಗ್ ನ್ಯೂಸ್
01-03-23 01:57 pm Source: news18 ಕ್ರೀಡೆ
ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಅವರ ಕಳಪೆ ಫಾರ್ಮ್ ಗೆ ಎಲ್ಲೆಡೆ ಟೀಕೆ ವ್ಯಕ್ತವಾಗುತ್ತಿದೆ. ಭಾರತದ ಮಾಜಿ ಬೌಲರ್ ವೆಂಕಟೇಶ್ ಪ್ರಸಾದ್ ಟ್ವಿಟ್ಟರ್ ನಲ್ಲಿ ರಾಹುಲ್ ಆಟದ ಬಗ್ಗೆ ನೇರವಾಗಿ ಮಾತನಾಡಿದ್ದರು. 40ಕ್ಕಿಂತ ಕಡಿಮೆ ಸರಾಸರಿ ಹೊಂದಿರುವ ಆಟಗಾರರು ಟೆಸ್ಟ್ ಮಾದರಿಯಲ್ಲಿ ಹೇಗೆ ಮುಂದುವರಿಯುತ್ತಾರೆ ಎಂದು ವೆಂಕಟೇಶ್ ಪ್ರಸಾದ್ ಕಟುವಾದ ಕಾಮೆಂಟ್ ಮಾಡಿದ್ದರು. ಕಳೆದ 12 ತಿಂಗಳಿಂದ ರಾಹುಲ್ ಅವರ ಟೆಸ್ಟ್ ಸರಾಸರಿ 14ಕ್ಕಿಂತ ಕಡಿಮೆ ಇದೆ.
ರಾಹುಲ್ ಅವರನ್ನು ತಂಡದಲ್ಲಿ ಮುಂದುವರಿಸಿದ್ದಕ್ಕೆ ಅಭಿಮಾನಿಗಳು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದಾರೆ. ಆದರೆ ಕೊಹ್ಲಿಯನ್ನು ಎಳೆದು ತರಲು ಯತ್ನಿಸಿದ್ದಾರೆ. ತಂಡದಲ್ಲಿ ವಿಫಲರಾಗುತ್ತಿರುವುದು ರಾಹುಲ್ ಒಬ್ಬರೇ ಅಲ್ಲ, ಇನ್ನು ಕೆಲವು ಆಟಗಾರರು ಕೂಡ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದು ಪೂಜಾರ ಮತ್ತು ಕೊಹ್ಲಿ ವಿರುದ್ಧ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.



ಇದಲ್ಲದೆ, ರಾಹುಲ್ ತಮ್ಮ ಬ್ಯಾಟಿಂಗ್ ಪ್ರತಿಭೆಯನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಈ ಹಿಂದೆ ಹಲವು ಬಾರಿ ತಂಡವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಆದರೆ ಆಟಗಾರರು ವಿಫಲರಾದಾಗ ಟೀಕೆ ಮಾಡುವುದು ಸಹಜ ಎಂದಿದ್ದಾರೆ. ರಾಹುಲ್ ಅವರ ಮೌಲ್ಯವನ್ನು ತಿಳಿದಿರುವ ಮ್ಯಾನೇಜ್ಮೆಂಟ್ ಅವರನ್ನು ಬೆಂಬಲಿಸುತ್ತದೆ ಎಂದು ಗಂಗೂಲಿ ಹೇಳಿದ್ದಾರೆ. ರಾಹುಲ್ ಶೀಘ್ರದಲ್ಲೇ ಫಾರ್ಮ್ಗೆ ಮರಳುತ್ತಾರೆ ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದರು.




ಗಂಗೂಲಿ ಅವರ ಇತ್ತೀಚಿನ ಕಾಮೆಂಟ್ಗಳಿಗೆ ಕೊಹ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಗಂಗೂಲಿ ಮತ್ತೊಮ್ಮೆ ಕೊಹ್ಲಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಮೂರನೇ ಟೆಸ್ಟ್ ಮಾರ್ಚ್ 1 ರಿಂದ 5ರ ವರೆಗೆ ಇಂದೋರ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದಲ್ಲಿ ಭಾರತ ತಂಡ ಅಗ್ರಸ್ಥಾನದ ಜೊತೆಗೆ ಸರಣಿ ಗೆಲ್ಲಲಿದೆ.
IND vs AUS 3rd test criticism comes when you fail says Sourav Ganguly.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm