ಬ್ರೇಕಿಂಗ್ ನ್ಯೂಸ್
08-03-23 02:57 pm Source: news18 ಕ್ರೀಡೆ
ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ (wpl 2023) ಈಗಾಗಲೇ ಮಾರ್ಚ್ 4 ರಿಂದ ಆರಂಭವಾಗಿದೆ. ಈಗಾಗಲೇ 5 ಪಂದ್ಯಗಳ ಯಶಸ್ವಿಯಾಗಿ ಮುಗಿದಿವೆ. ವುಮೆನ್ಸ್ ಪ್ರೀಮಿಯರ್ ಲೀಗ್ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಇಂದು ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೇಂಟ್ಸ್ ನಡುವಿನ ಪಂದ್ಯಕ್ಕೆ ಬಿಸಿಸಿಐ ಪ್ರತಿಯೊಬ್ಬರಿಗೂ ಉಚಿತ ಟಿಕೆಟ್ ಘೋಷಣೆ ಮಾಡಿದೆ.
ಮಹಿಳಾ ದಿನಾಚರಣೆಯನ್ನ ವಿಶೇಷವಾಗಿ ಆಚರಿಸಲು ಬಿಸಿಸಿಐ ನಿರ್ಧರಿಸಿದ್ದು ಇಂದಿನ ಪಂದ್ಯಕ್ಕೆ ಉಚಿತ ಪ್ರವೇಶ ಕಲ್ಪಿಸಿದೆ. ಇದು ವಿಶೇಷ ದಿನವನ್ನು ಮತ್ತಷ್ಟು ವಿಶೇಷವಾಗಿ ಮಾಡುವ ಮಾರ್ಗ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದೆ. ಮಹಿಳೆಯರ ಕ್ರಿಕೆಟ್ ಉತ್ತೇಜನಗೊಳಿಸಲು ಈಗಾಗಲೆ ಟೂರ್ನಿಯಲ್ಲಿ ಮಹಿಳೆಯರಿಗೆ ಉಚಿತ ಟಿಕೆಟ್ಗಳನ್ನು ನೀಡಲಾಗುತ್ತಿದೆ. ಪುರುಷರಿಗೆ ಮಾತ್ರ 100 ರಿಂದ 400 ರೂಗಳಿಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.


ಇದೀಗ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಪುರುಷರಿಗೂ ಕೂಡ ಉಚಿತ ಟಿಕೆಟ್ ಸಿಗಲಿದೆ. ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಇಂದು ಸಂಜೆ 8ಗಂಟೆಗ ಗುಜರಾತ್ ಮತ್ತು ಬೆಂಗಳೂರು ನಡುವೆ ಪಂದ್ಯ ನಡೆಯಲಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದು ತಿಳಿಸಲಾಗಿದೆ. ಹೀಗಾಗಿ ಸ್ಟೇಡಿಯಂ ತುಂಬಿದ ಬಳಿಕ ಬಂದವರಿಗೆ ಗ್ಯಾಲರಿಯಲ್ಲಿ ಕೂತು ಪಂದ್ಯವನ್ನು ವೀಕ್ಷಿಸಲು ಅವಕಾಶ ಇರುವುದಿಲ್ಲ. ಇನ್ನು ಟೂರ್ನಿಗೆ ಬರುವುದಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡು ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್ಗಳ ಸೋಲು ಕಂಡರೆ, 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್ಗಳ ಸೋಲು ಕಂಡಿತ್ತು.


ಇದೀಗ ಸೆಮಿಫೈನಲ್ ಪ್ರವೇಶಿಸಲು ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಗುಜರಾತ್ ಜೇಂಟ್ಸ್ ಕೂಡ ಆಡಿರುವ 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಎರಡೂ ತಂಡಗಳೂ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.
WPL 2023 BCCI announces free tickets for GG vs RCB on international womens day.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am