ಬ್ರೇಕಿಂಗ್ ನ್ಯೂಸ್
09-03-23 11:17 am HK News Desk ಕ್ರೀಡೆ
ಅಹಮದಾಬಾದ್, ಮಾ.9: ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರೆತಿದ್ದು, ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯಲ್ಲಿ ರೋಹಿತ್ ಬಳಗ 2-1ರಿಂದ ಮುನ್ನಡೆಯಲ್ಲಿದ್ದರೂ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಯಾರನ್ನು ಅವಲಂಬಿಸದೆ ಟೆಸ್ಟ್ ವಿಶ್ವಕಪ್ ಫೈನಲ್ ಗೇರಲು ಸಾಧ್ಯವಾಗುತ್ತದೆ. ಅತ್ತ ಆಸೀಸ್ ಇಂದೋರ್ ಟೆಸ್ಟ್ ಜಯದೊಂದಿಗೆ ವಿಶ್ವಕಪ್ಪ ಫೈನಲ್ ಸ್ಥಾನ ಖಚಿತ ಪಡಿಸಿಕೊಂಡಿದ್ದು, ಮತ್ತೊಂದು ಗೆಲುವಿನೊಂದಿಗೆ ಸರಣಿಯಲ್ಲಿ ಸಮಬಲ ಸಾಧಿಸಲು ಕಾಯುತ್ತಿದೆ.
ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದಾರೆ. ಲಕ್ಷಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಉಭಯ ರಾಷ್ಟ್ರಗಳ ಪ್ರಧಾನಮಮಂತ್ರಿಗಳು ಪಂದ್ಯ ವೀಕ್ಷಣೆ ಮಾಡಲಿದ್ದಾರೆ.
ಎರಡು ದೇಶಗಳ ಪ್ರಧಾನಿಗಳು ಹಾಗೂ ಲಕ್ಷಾಂತರ ಕ್ರೀಡಾಭಿಮಾನಿಗಳು ಸೇರುವ ಹಿನ್ನಲೆ ಕ್ರೀಡಾಂಗಣ ಸೇರಿದಂತೆ ನಗರದಾದ್ಯಂತ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸುಮಾರು 3,000 ಖಾಕಿ ಪಡೆಯನ್ನು ನಿಯೋಜನೆ ಮಾಡಲಾಗಿದೆ.
4ನೇ ಟೆಸ್ಟ್ ನಲ್ಲಿ ಭಾರತ ಗೆದ್ದಿದ್ದೇ ಆದರೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್'ಗೇರುವುದರ ಜೊತೆಗೆ ಟೆಸ್ಟ್ ರ್ಯಾಂಕಿಂಗ್ ನಲ್ಲೂ ಅಗ್ರಸ್ಥಾನಕ್ಕೇರಲಿದೆ. ಇದರೊಂದಿಗೆ ಏಕಕಾಲದಲ್ಲಿ ಮೂರು ಮಾದರಿಯಲ್ಲಿ ನ.1 ಸ್ಥಾನ ಪಡೆದ ಸಾಧನೆ ಮಾಡಲಿದೆ. ಸತತ 4ನೇ ಬಾರಿ ಬಾರ್ಡರ್-ಗವಾಸ್ತರ್ ಟ್ರೋಫಿ ಭಾರತದ ಪಾಲಾಗಲಿದೆ.
Indian prime minister Narendra Modi and his Australian counterpart Anthony Albanese were in attendance on Day 1 of the Border-Gavaskar Trophy Test in Ahmedabad on Thursday. The two prime ministers were felicitated upon their arrival at the stadium, and then proceeded to present Test caps to their respective country's cricket captains before taking a lap of honour around the stadium.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm