ಬ್ರೇಕಿಂಗ್ ನ್ಯೂಸ್
09-03-23 01:31 pm Source: news18 ಕ್ರೀಡೆ
ಇನ್ನು ಸತತ 3 ಪಂದ್ಯವಾಡಿದ್ದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಿ, ಬದಲಿಗೆ ಮೊಹಮ್ಮದ್ ಶಮಿ ಅವಕಾಶ ನೀಡಲಾಗಿದೆ. ಭಾರತ ಈ ಪಂದ್ಯದಲ್ಲೂ 3 ಸ್ಪಿನ್ನರ್ಗಳೊಂದಿಗೆ ಕಣಕ್ಕಿಳಿಯುತ್ತಿದೆ. ಅಶ್ವಿನ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ, ವೇಗಿಗಳ ವಿಭಾಗದಲ್ಲಿ ಶಮಿ ಜೊತೆಗೆ ಉಮೇಶ್ ಯಾದವ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ತಲುಪಿರುವ ಆಸೀಸ್
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ 2-0 ಮುನ್ನಡೆ ಪಡೆದುಕೊಂಡಿದ್ದ ಭಾರತ ತಂಡಕ್ಕೆ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 9 ವಿಕೆಟ್ಗಳಿಂದ ಗೆಲುವು ಸಾಧಿಸಿ ತಿರುಗೇಟು ನೀಡಿತ್ತು. ಆ ಮೂಲಕ ಪ್ರವಾಸಿ ತಂಡ ಅಧಿಕೃತವಾಗಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದರು.
ಇದೀಗ ಭಾರತ ತಂಡದ ಈ ಪಂದ್ಯವನ್ನು ಗೆದ್ದರೆ 2023ರ ವಿಶ್ವಟೆಸ್ಟ್ ಚಾಂಪಿಯನ್ಶಿಪ್ಗೆ ನೇರ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಪಂದ್ಯ ಸೋತರೆ ನ್ಯೂಜಿಲ್ಯಾಂಡ್ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಫಲಿತಾಂಶದ ಮೇಲೆ ಭಾರತದ ಅರ್ಹತೆ ನಿರ್ಧಾರವಾಗಲಿದೆ.
ಪ್ರಧಾನ ಮಂತ್ರಿಗಳಿಂದ ಪಂದ್ಯ ವೀಕ್ಷಣೆ
75 ವರ್ಷದ ಇಂಡೋ-ಆಸ್ಟ್ರೇಲಿಯಾ ಬಾಂಧವ್ಯವನ್ನು ಗುರುತಿಸಲು ಭಾರತ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬೇನೀಸ್ ಪಂದ್ಯದ ಮೊದಲ ದಿನದಾಟ ವೀಕ್ಷಣೆ ಮಾಡಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಂಧವ್ಯಕ್ಕೆ ಈ ವರ್ಷ 75 ವರ್ಷ ತುಂಬಲಿದೆ. ಅದರ ಸವಿನೆನಪಿಗಾಗಿ ಎರಡೂ ದೇಶಗಳ ಪ್ರಧಾನಿಗಳು ವಿಶ್ವದ ಅತಿದೊಡ್ಡ ಕ್ರೀಡಾಂಗಣದ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ. ಇಬ್ಬರೂ ಪ್ರಧಾನ ಮಂತ್ರಿಗಳು ಟಾಸ್ ಮಾಡುವ ಮೊದಲು ಉಭಯ ತಂಡಗಳ ನಾಯಕರಿಗೆ ಕ್ಯಾಪ್ ನೀಡಿದರು. ನಂತರ ವಿಶೇಷವಾಗಿ ಸಂಯೋಜಿಸಿದ್ದ ವಾಹನದಲ್ಲಿ ಮೈದಾನದ ಸುತ್ತಾ ಸುತ್ತು ಹಾಕಿ ಅಭಿಮಾನಿಗಳನ್ನು ಸ್ವಾಗತಿಸಿದರು.
ತಂಡಗಳ ವಿವರ
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್, ನಾಥನ್ ಲಿಯಾನ್
India vs Australia 4th test australia won the toss elected to bat first shami replaces sira.
26-11-25 05:53 pm
HK News Desk
ಭೀಕರ ಕಾರು ಅಪಘಾತ ; ಹಿರಿಯ ಐಎಎಸ್ ಅಧಿಕಾರಿ, ಬೆಸ್ಕಾ...
25-11-25 09:49 pm
DK Shivakumar: ಮುಖ್ಯಮಂತ್ರಿ ಬದಲಾವಣೆ ನಾಲ್ಕು ಜನರ...
25-11-25 07:58 pm
ವಿಂಜೋ ಗೇಮಿಂಗ್ ಸಂಸ್ಥೆ ಮೇಲೆ ಇಡಿ ದಾಳಿ ; 527 ಕೋಟಿ...
25-11-25 06:58 pm
ಮಂಗಳೂರಿನ ಧನಲಕ್ಷ್ಮಿ ಪೂಜಾರಿ ಪ್ರತಿನಿಧಿಸಿದ ಮಹಿಳಾ...
25-11-25 02:18 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
26-11-25 06:26 pm
Mangalore Correspondent
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm
ಆನ್ಲೈನ್ನಲ್ಲಿ ಅಧಿಕ ಲಾಭದ ಆಸೆಗೆ ಬಿದ್ದ ಹೊನ್ನಾವರ...
24-11-25 08:37 pm