ಬ್ರೇಕಿಂಗ್ ನ್ಯೂಸ್
16-03-23 12:58 pm Source: news18 ಕ್ರೀಡೆ
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ RCB ತಂಡದ ಪಾಲಿಗೆ ಮರೀಚಿಕೆಯಾಗಿದ್ದ ಗೆಲುವು ಇಂದು ಅಂತಿಮವಾಗಿ ದೊರಕಿದೆ. WPL 2023ರ ಮೊದಲ ಗೆಲುವನ್ನು ಆರ್ಸಿಬಿ ದಕ್ಕಿಸಿಕೊಂಡಿದೆ. ಆಡಿರುವ 6 ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಪಡೆ 1 ಗೆಲುವನ್ನು ದಾಖಲಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ತಂಡವು 19.3 ಓವರ್ಗಳಲ್ಲಿ 135 ರನ್ಗಳಿಗೆ ತನ್ನೆಲ್ಲಾ 10 ವಿಕೆಟ್ ಕಳೆದುಕೊಂಡಿತು. ಯುಪಿ ಪರ ಗ್ರ್ಯಾಸಿ ಹಾರೀಸ್ 46 ರನ್ ಗಳಿಸಿದ್ದರು. ಬೆಂಗಳೂರು ಪರ ಸೋಫಿ ಡಿವೈನ್ ಮತ್ತು ಆಶಾ ಶೋಬನಾ ತಲಾ 2 ವಿಕೆಟ್, ಮೇಗನ್ ಶುಟ್ ಮತ್ತು ಶ್ರೇಯಾಂಕಾ ಪಾಟೀಲ್ 1 ವಿಕೆಟ್ ಪಡೆದರೆ ಎಲ್ಲಿಸ್ ಪೆರ್ರಿ 3 ವಿಕೆಟ್ ಪಡೆಯುವ ಮೂಲಕ ಯುಪಿ ಬ್ಯಾಟರ್ಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು.



ಯುಪಿ ವಿರುದ್ಧ ಅಂತಿಮವಾಗಿ ಆರ್ಸಿಬಿ ಚೊಚ್ಚಲ ಗೆಲುವನ್ನು ದಾಖಲಿಸಿದೆ. ಆರ್ಸಿಬಿ ತಂಡ 18 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಆರ್ಸಿಬಿ ಪರ ಕನ್ನಿಕಾ 46 ರನ್ ಮತ್ತು ರಿಚಾ ಘೋಷ್ 31 ರನ್ ಗಳಿಸುವ ಮೂಲಕ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ನಡುವೆ ಇಂದಿನ ಗೆಲುವಿನ ಜೊತೆ ಆರ್ಸಿಬಿ ತಂಡ ಉಳಿದಿರುವ 2 ಪಂದ್ಯಗಳಲ್ಲಿ ಗೆದ್ದರೆ ಎಲಿಮಿನೇಟರ್ ಹಂತಕ್ಕೇರಬಹುದು. ಇದು ಉಳಿದ ತಂಡಗಳ ಫಲಿತಾಂಶಗಳ ಮೇಲೆ ಅವಲಂಭಿತವಾಗಿದೆ. ಅಲ್ಲದೇ ಯುಪಿ ವಾರಿಯರ್ಸ್ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನೂ ಸೋಲಬೇಕು.

![,[object Object], ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.](https://images.news18.com/kannada/uploads/2023/03/8-149-16788978893x2.jpg?im=Resize,width=904,aspect=fit,type=normal)
ಜೊತೆಗೆ ಗುಜರಾತ್ ಜೈಂಟ್ಸ್ ಸಹ ಕನಿಷ್ಠ 2 ಪಂದ್ಯ ಸೋಲಬೇಕಿದೆ. ಆಗ ಮಾತ್ರ ಆರ್ಸಿಬಿಗೆ ನೆಟ್ ರನ್ ರೇಟ್ ಮೂಲಕ ಎಲಿಮಿನೇಟರ್ ಹಂತಕ್ಕೆ ತಲುಪಲಿದೆ. ಪಾಯಿಂಟ್ ಟೇಬಲ್ನಲ್ಲಿ 2ನೇ ಹಾಗೂ 3ನೇ ಸ್ಥಾನದ ತಂಡ ಎಲಿಮಿನೇಟರ್ ಪಂದ್ಯ ಆಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.
wpl 2023 up warriorz vs royal challengers bangaluru match rcb won by 5 wickets.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm