ಬ್ರೇಕಿಂಗ್ ನ್ಯೂಸ್
16-03-23 12:58 pm Source: news18 ಕ್ರೀಡೆ
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ RCB ತಂಡದ ಪಾಲಿಗೆ ಮರೀಚಿಕೆಯಾಗಿದ್ದ ಗೆಲುವು ಇಂದು ಅಂತಿಮವಾಗಿ ದೊರಕಿದೆ. WPL 2023ರ ಮೊದಲ ಗೆಲುವನ್ನು ಆರ್ಸಿಬಿ ದಕ್ಕಿಸಿಕೊಂಡಿದೆ. ಆಡಿರುವ 6 ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಪಡೆ 1 ಗೆಲುವನ್ನು ದಾಖಲಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ತಂಡವು 19.3 ಓವರ್ಗಳಲ್ಲಿ 135 ರನ್ಗಳಿಗೆ ತನ್ನೆಲ್ಲಾ 10 ವಿಕೆಟ್ ಕಳೆದುಕೊಂಡಿತು. ಯುಪಿ ಪರ ಗ್ರ್ಯಾಸಿ ಹಾರೀಸ್ 46 ರನ್ ಗಳಿಸಿದ್ದರು. ಬೆಂಗಳೂರು ಪರ ಸೋಫಿ ಡಿವೈನ್ ಮತ್ತು ಆಶಾ ಶೋಬನಾ ತಲಾ 2 ವಿಕೆಟ್, ಮೇಗನ್ ಶುಟ್ ಮತ್ತು ಶ್ರೇಯಾಂಕಾ ಪಾಟೀಲ್ 1 ವಿಕೆಟ್ ಪಡೆದರೆ ಎಲ್ಲಿಸ್ ಪೆರ್ರಿ 3 ವಿಕೆಟ್ ಪಡೆಯುವ ಮೂಲಕ ಯುಪಿ ಬ್ಯಾಟರ್ಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು.
ಯುಪಿ ವಿರುದ್ಧ ಅಂತಿಮವಾಗಿ ಆರ್ಸಿಬಿ ಚೊಚ್ಚಲ ಗೆಲುವನ್ನು ದಾಖಲಿಸಿದೆ. ಆರ್ಸಿಬಿ ತಂಡ 18 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಆರ್ಸಿಬಿ ಪರ ಕನ್ನಿಕಾ 46 ರನ್ ಮತ್ತು ರಿಚಾ ಘೋಷ್ 31 ರನ್ ಗಳಿಸುವ ಮೂಲಕ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ನಡುವೆ ಇಂದಿನ ಗೆಲುವಿನ ಜೊತೆ ಆರ್ಸಿಬಿ ತಂಡ ಉಳಿದಿರುವ 2 ಪಂದ್ಯಗಳಲ್ಲಿ ಗೆದ್ದರೆ ಎಲಿಮಿನೇಟರ್ ಹಂತಕ್ಕೇರಬಹುದು. ಇದು ಉಳಿದ ತಂಡಗಳ ಫಲಿತಾಂಶಗಳ ಮೇಲೆ ಅವಲಂಭಿತವಾಗಿದೆ. ಅಲ್ಲದೇ ಯುಪಿ ವಾರಿಯರ್ಸ್ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನೂ ಸೋಲಬೇಕು.
ಜೊತೆಗೆ ಗುಜರಾತ್ ಜೈಂಟ್ಸ್ ಸಹ ಕನಿಷ್ಠ 2 ಪಂದ್ಯ ಸೋಲಬೇಕಿದೆ. ಆಗ ಮಾತ್ರ ಆರ್ಸಿಬಿಗೆ ನೆಟ್ ರನ್ ರೇಟ್ ಮೂಲಕ ಎಲಿಮಿನೇಟರ್ ಹಂತಕ್ಕೆ ತಲುಪಲಿದೆ. ಪಾಯಿಂಟ್ ಟೇಬಲ್ನಲ್ಲಿ 2ನೇ ಹಾಗೂ 3ನೇ ಸ್ಥಾನದ ತಂಡ ಎಲಿಮಿನೇಟರ್ ಪಂದ್ಯ ಆಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.
wpl 2023 up warriorz vs royal challengers bangaluru match rcb won by 5 wickets.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 09:31 pm
HK News Desk
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
ವಿದ್ಯುತ್ ನಿಗಮದ ಕಚೇರಿಯಲ್ಲಿ ಉಗ್ರ ಲಾಡೆನ್ ಫೋಟೊ ;...
22-03-23 11:38 am
23-03-23 10:00 pm
Mangalore Correspondent
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
ಆಧಾರ್ - ಪಾನ್ ಲಿಂಕ್ ನೆಪದಲ್ಲಿ ಕೇಂದ್ರ ಸರ್ಕಾರದಿಂದ...
22-03-23 08:12 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm