ಬ್ರೇಕಿಂಗ್ ನ್ಯೂಸ್
24-03-23 01:52 pm Source: news18 ಕ್ರೀಡೆ
ವರದಿಯ ಪ್ರಕಾರ, ಆರಂಭಿಕ ಬಿಕ್ಕಟ್ಟಿನ ನಂತರ, BCCI ಮತ್ತು PCB ಎರಡೂ ಮಂಡಳಿಗಳು ಈ ವಿವಾದವನ್ನು ಪರಿಹರಿಸಲು ಹತ್ತಿರವಾಗುತ್ತಿವೆ. ಪ್ರಸ್ತಾವನೆಯ ಪ್ರಕಾರ, ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪಾಕಿಸ್ತಾನದ ಹೊರಗೆ ಪರಸ್ಪರ ಪಂದ್ಯಗಳನ್ನು ಆಡಲಿದೆ. ಈ ಬಾರಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಏಷ್ಯಾ ಕಪ್ ಆತಿಥ್ಯವನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಿದೆ. ಆದರೆ, ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ನಿರಾಕರಿಸಿತ್ತು. ಅಂದಿನಿಂದ, ಪಂದ್ಯಾವಳಿಯ ಆಯೋಜನೆಗೆ ಸಂಬಂಧಿಸಿದಂತೆ ವಿವಾದದ ನಡೆಯುತ್ತಿತ್ತು.
ಏಷ್ಯಾ ಕಪ್ ಆತಿಥ್ಯದ ವಿವಾದವನ್ನು ಕೊನೆಗೊಳಿಸಲು ಭಾರತದ ಪಂದ್ಯಗಳನ್ನು ಪಾಕಿಸ್ತಾನದಿಂದ ಹೊರಗೆ ಸ್ಥಳಾಂತರಿಸುವ ಪ್ರಸ್ತಾಪಕ್ಕೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ನ ಎಲ್ಲಾ ಸದಸ್ಯರು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದೆ. ಕಳೆದ ವಾರ, ಐಸಿಸಿ ಮಂಡಳಿ ಸಭೆಯ ಹೊರತಾಗಿ, ದುಬೈನಲ್ಲಿ ನಡೆದ ಎಸಿಸಿ ಸದಸ್ಯ ರಾಷ್ಟ್ರಗಳ ಸಭೆಯಲ್ಲಿ ಇದನ್ನು ಒಪ್ಪಲಾಗಿದೆ ಎಂದು ವರದಿಯಾಗಿದೆ. ಆದರೆ, ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ಈ ಪರಿಹಾರದ ಮಾರ್ಗವನ್ನು ಸರಿಯಾಗಿ ಮಾಡಲು, ಕಾರ್ಯನಿರತ ಗುಂಪನ್ನು ರಚಿಸಲಾಗಿದೆ, ಇದು ಎಲ್ಲಾ ತಂಡಗಳ ಒಪ್ಪಿಗೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಯೋಜನೆ ಮತ್ತು ಲಾಜಿಸ್ಟಿಕ್ಸ್ ಅನ್ನು ನೋಡಿಕೊಳ್ಳುತ್ತದೆ ಎಂದು ಹೇಳಲಾಗಿದೆ.
ಭಾರತ-ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ:
6 ರಾಷ್ಟ್ರಗಳ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅರ್ಹತಾ ತಂಡದೊಂದಿಗೆ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಅದೇ ಸಮಯದಲ್ಲಿ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಎರಡನೇ ಗುಂಪಿನ ಭಾಗವಾಗಿದೆ. 13 ದಿನಗಳೊಳಗೆ ಏಷ್ಯಾಕಪ್ ನಲ್ಲಿ ಫೈನಲ್ ಸೇರಿದಂತೆ ಒಟ್ಟು 13 ಪಂದ್ಯಗಳು ನಡೆಯಲಿವೆ. 2022ರ ಏಷ್ಯಾ ಕಪ್ನ ಸ್ವರೂಪದ ಪ್ರಕಾರ, ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 4 ಗೆ ಮುನ್ನಡೆಯುತ್ತವೆ ಮತ್ತು ಅಗ್ರ ಎರಡು ತಂಡಗಳು ನಂತರ ಫೈನಲ್ನಲ್ಲಿ ಆಡುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಏಷ್ಯಾಕಪ್ನಲ್ಲಿ ಮೂರು ಬಾರಿ ಪೈಪೋಟಿ ನಡೆಸುವ ನಿರೀಕ್ಷೆಯಿದೆ.
ನಾವು ಭಾರತಕ್ಕೆ ಬರುತ್ತೇವೆ:
ಏಷ್ಯಾಕಪ್ಗೆ ಭಾರತ ಪಾಕಿಸ್ತಾನಕ್ಕೆ ಬರದಿದ್ದರೆ ನಾವೂ ಏಕದಿನ ವಿಶ್ವಕಪ್ಗೆ ಭಾರತಕ್ಕೆ ಹೋಗುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಹಿಂದೆ ಹೇಳಿತ್ತು. ಪಿಸಿಬಿಯ ಈ ವಿಷಯವನ್ನು ಪಾಕಿಸ್ತಾನದ ಹಲವು ಕ್ರಿಕೆಟಿಗರು ಸಹ ಬೆಂಬಲಿಸಿದ್ದರು. ಇದೀಗ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ ನಾವು ತಯಾರಿ ನಡೆಸುತ್ತಿದ್ದೇವೆ ಎಂದು ಜಿಯೋ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಬಾಬರ್ ಹೇಳಿದ್ದಾರೆ.
2023 asia cup is likely to be played in pakistan.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm