ಬ್ರೇಕಿಂಗ್ ನ್ಯೂಸ್
27-03-23 11:40 am Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿಲ್ಲ. ಆದರೆ ತಂಡ 2009, 2011 ಮತ್ತು 2016ರಲ್ಲಿ 3 ಬಾರಿ ಫೈನಲ್ಗೆ ತಲುಪಿದ್ದಾರೆ. ತಂಡದ ನಾಯಕತ್ವವನ್ನು ಫಾಫ್ ಡು ಪ್ಲೆಸಿಸ್ ವಹಿಸಿದ್ದಾರೆ. ಐಪಿಎಲ್ 2023ರ 16ನೇ ಸೀಸನ್ಗಾಗಿ ಆರ್ಸಿಬಿ ತಂಡ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಕಳೆದ 15 ವರ್ಷಗಳಿಂದ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಬಾರಿಯಾದರೂ ಆರ್ಸಿಬಿ ಕಪ್ ಗೆಲ್ಲುತ್ತದೆಯೇ ಎಂದು ನೋಡಬೇಕಿದೆ. ಹಾಗಿದ್ದರೆ ಬೆಂಗಳೂರು ತಂಡದ ಸ್ಟ್ರೆಂಥ್ ಮತ್ತು ವೀಕ್ನೆಸ್ ಏನು ಎಂಬುದನ್ನು ನೋಡೋಣ ಬನ್ನಿ.
RCB ತಂಡದ ಸ್ಟ್ರೆಂಥ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ಗೆ ಪ್ರಶಸ್ತಿಯನ್ನು ಗೆಲ್ಲುವ ನಿರೀಕ್ಷೆ ಹೆಚ್ಚಿದೆ. ಏಕೆಂದರೆ ICC T20 ವಿಶ್ವಕಪ್ನಿಂದ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಇದು ತಂಡಕ್ಕೆ ಪ್ರಮುಖ ಸ್ಟ್ರೆಂಥ್ ಆಗಿದೆ. ಈ ವರ್ಷ ಆರ್ಸಿಬಿಗೆ ಮತ್ತೊಂದು ದೊಡ್ಡ ಅನುಕೂಲವೆಂದರೆ ಭಾರತದಲ್ಲಿ ಸಿರಾಜ್ ಅವರು ಫಾರ್ಮ್ನಲ್ಲಿರುವುದು ಅನುಕೂಲಕರವಾಗಿದೆ. ಆರ್ಸಿಬಿ ಪರ ಉತ್ತಮ ಬೌಲಿಂಗ್ ಯ್ಯೂನಿಟ್ ಹೊಂದಿದೆ.
ಇನ್ನು, ಆರ್ಸಿಬಿ ಬ್ಯಾಟಿಂಗ್ ಲೈನ್ ಅಫ್ ಉತ್ತಮವಾಗಿದೆ. ವಿರಾಟ್ ಕೊಹ್ಲಿ, ಮ್ಯಾಕ್ಸ್ವೆಲ್, ರಜತ್ ಪಟೆದಾರ್, ವಿರಾಟ್ ಕೊಹ್ಲಿ ಸೇರಿ ಉತ್ತಮ ಬ್ಯಾಟಿಂಗ್ ಹೊಂದಿರುವುದು ತಂಡದ ಸ್ಟ್ರೆಂಥ್ ಆಗಿದೆ. ಜೊತೆಗೆ ತಂಡದಲ್ಲಿ ಆಲ್ರೌಂಡರ್ಗಳು ಹೆಚ್ಚಿರುವುದು ತಂಡಕ್ಕೆ ಅನುಕೂಲಕರವಾಗಿದೆ.
RCB ವೀಕ್ನೆಸ್: 2021 ಭರ್ಜರಿ ಬೌಲಿಂಗ್ ಮಾಡಿದ್ದ ಹರ್ಷಲ್ ಪಟೇಲ್ 2022ರಲ್ಲಿ ಔಟ್ ಆಫ್ ಫಾರ್ಮ್ನಲ್ಲಿದ್ದಾರೆ. ಈ ಅಂಶ ಬೆಂಗಳೂರು ತಮಡಕ್ಕೆ ದೊಡ್ಡ ಚಿಂತೆಯಾಗಿದೆ. ಇದರ ನಡುವೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಬಳಿಕ ಬ್ಯಾಟಿಂಗ್ನಲ್ಲಿ ಪ್ರದರ್ಶನ ಉತ್ತಮವಾಗಿಲ್ಲ. ಇನ್ನು, ಆರ್ಸಿಬಿ ತಂಡದಲ್ಲಿ ಮೊದಲ ಎಸೆತದಿಂದಲೇ ಭರ್ಜರಿಯಾಗಿ ಬ್ಯಾಟಿಂಗ್ನಲ್ಲಿ ಅಟ್ಯಾಕ್ ಮಾಡುವವರಿಲ್ಲ. ಕೊಹ್ಲಿ-ಡುಪ್ಲೆಸಿಸ್ ಸೆಟಲ್ ಆಗಲು ಟೈಂ ಬೇಕು. 5ನೇ ಕ್ರಮಾಂಕದಲ್ಲಿ ಅದ್ಭುತ ಬ್ಯಾಟ್ಸ್ಮನ್ ಇಲ್ಲ. ದಿನೇಶ್ ಕಾರ್ತಿಕ್ ಫಿನಿಶರ್ ಪಾತ್ರ ಸರಿಯಾಗಿ ನಿರ್ವಹಿಸುತ್ತಿಲ್ಲ.
ಬೆಂಗಳೂರು ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.
IPL 2023 royal challengers bangalore strength and weakness playing 11.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm