ಬ್ರೇಕಿಂಗ್ ನ್ಯೂಸ್
31-03-23 01:18 pm Source: news18 ಕ್ರೀಡೆ
ಈ ವರ್ಷ 52 ದಿನಗಳ ಅವಧಿಯಲ್ಲಿ 12 ಸ್ಥಳಗಳಲ್ಲಿ ಒಟ್ಟು 70 ಲೀಗ್ ಹಂತದ ಪಂದ್ಯಗಳು ನಡೆಯಲಿದೆ. ಐಪಿಎಲ್ 2023 ರ ವೇಳಾಪಟ್ಟಿಯಂತೆ ಎಲ್ಲಾ ತಂಡಗಳು ಲೀಗ್ ಹಂತದಲ್ಲಿ ಕ್ರಮವಾಗಿ 7 ಹೋಮ್ ಪಂದ್ಯಗಳನ್ನು ಮತ್ತು 7 ಬೇರೆಡೆ ಪಂದ್ಯಗಳನ್ನು ಆಡುತ್ತವೆ.
ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವು ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ಆಗಲಿದೆ. ಈ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮತ್ತು ಜಿಯೋ ಸಿನಿಮಾದಲ್ಲಿ ಡಿಜಿಟಲ್ನಲ್ಲಿ ನೇರ ಪ್ರಸಾರ ಆಗಲಿದೆ.
ಪಿಚ್ ರಿಪೋರ್ಟ್:
ನರೇಂದ್ರ ಮೋದಿ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ಗೆ ಉತ್ತಮವಾಗಿದೆ. ಚೆಂಡು ಚೆನ್ನಾಗಿ ಬ್ಯಾಟ್ಗೆ ಬರುತ್ತದೆ. ಬ್ಯಾಟರ್ಗಳು ತಮ್ಮ ಇನ್ನಿಂಗ್ಸ್ನ ಆರಂಭದಿಂದಲೇ ತಮ್ಮ ಸಾಮರ್ಥ್ಯ ತೋರಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಇಂದು ಅಹಮದಾಬಾದ್ನಲ್ಲಿ ತಾಪಮಾನವು 22 ಮತ್ತು 33 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇಲ್ಲ.

CSK vs GT ಹೆಡ್ ಟು ಹೆಡ್:
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಎರಡನೇ ಯಶಸ್ವಿ ಫ್ರಾಂಚೈಸಿ ಆಗಿದೆ. ಗುಜರಾತ್ ಟೈಟಾನ್ಸ್ ಕಳೆದ ವರ್ಷ ಪಾದಾರ್ಪಣೆ ಮಾಡಿದರೂ ಚೊಚ್ಚಲ ಆವೃತ್ತಿಯಲ್ಲಿಯೇ ಪ್ರಶಸ್ತಿ ಜಯಸಿತು. ಕಳೆದ ಋತುವಿನಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಈ ಎರಡೂ ಬಾರಿಯೂ ಚೆನ್ನೈ ತಂಡವನ್ನು ಗುಜರಾತ್ ವಿರುದ್ಧ ಸೋತಿತ್ತು. ಜಿಟಿ ಮೊದಲ ಪಂದ್ಯವನ್ನು ಮೂರು ವಿಕೆಟ್ಗಳಿಂದ ಮತ್ತು ಎರಡನೇ ಪಂದ್ಯವನ್ನು ಏಳು ವಿಕೆಟ್ಗಳಿಂದ ಗೆದ್ದುಕೊಂಡಿತು. ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ 14 ಪಂದ್ಯ ಆಡಿದ್ದು, 10ರಲ್ಲಿ ಗೆಲುವು ಸಾಧಿಸಿತ್ತು. CSK 14ರಲ್ಲಿ 4 ಪಂದ್ಯ ಗೆದ್ದಿತ್ತು.
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11: ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಮೊಯಿನ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ದೀಪಕ್ ಚಾಹರ್, ಡ್ವೇನ್ ಪ್ರಿಟೋರಿಯಸ್, ಸಿಮ್ರಾನ್ ಜೀತ್
ಗುಜರಾತ್ ಟೈಟಾನ್ಸ್ ಸಂಭಾವ್ಯ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಸಹಾ, ಕೇನ್ ವಿಲಿಯಮ್ಸನ್, ವೇಡ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಯಶ್ ದಯಾಳ್, ಜೋಸೆಫ್, ಶಮಿ.
csk vs gt ipl 2023 playing 11 pitch report and weather forecast.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm