ಬ್ರೇಕಿಂಗ್ ನ್ಯೂಸ್
03-04-23 01:14 pm Source: news18 ಕ್ರೀಡೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಟಾಸ್ ಗೆದ್ದ ಫೀಲ್ಡಿಂಗ್ ಮಾಡಿದ RCB, ಭರ್ಜರಿ ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ 16.2 ಓವರ್ಗೆ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ ಬರೋಬ್ಬರಿ 8 ವಿಕೆಟ್ಗಳ ಜಯ ದಾಖಲಿಸಿತು.
ಇದೀಗ RCB ಪಾಲಿಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಖರೀದಿಸಿದ್ದ ಈ ಆಟಗಾರ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ವೇಗದ ಬೌಲರ್ ರೀಸ್ ಟೋಪ್ಲೆ ಗಾಯದ ಕಾರಣ ಇಡೀ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಮುಂಬರುವ ಪಂದ್ಯಗಳಲ್ಲಿ ಅವರು ಆಡೋದು ಡೌಟ್ ಅಂತ ಹೇಳಲಾಗುತ್ತಿದೆ.


ಫೀಲ್ಡಿಂಗ್ ವೇಳೆ ಟೋಪ್ಲಿ ಗಾಯಗೊಂಡಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಭುಜದ ಗಾಯದಿಂದ ಅವರು ಇನ್ನು ಮುಂದೆ ಪಂದ್ಯದ ಭಾಗವಾಗಿರಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ಈ ಪಂದ್ಯದ ದೃಷ್ಟಿಯಿಂದ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಟೋಪ್ಲಿ 2 ಓವರ್ ಬೌಲ್ ಮಾಡಿ 14 ರನ್ ನೀಡಿ 1 ವಿಕೆಟ್ ಪಡೆದಿದ್ದರು.


ಒಂದು ವೇಳೆ ಈ ಬೌಲರ್ ಏನಾದ್ರೂ ಮುಂದಿನ ಪಂದ್ಯಗಳಿಗೆ ಅಲಭ್ಯರಾದ್ರೆ, ಆರ್ಸಿಬಿ ಬೌಲಿಂಗ್ಗೆ ದೊಡ್ಡ ಹೊಡೆತ ಬೀಳುತ್ತೆ ಅಂದ ಕ್ರಿಕೆಟ್ ಅಭಿಮಾನಿಗಳು ಮಾತನಾಡುತ್ತಿದ್ದಾರೆ. ಇನ್ನೂ ಮೊದಲ ಪಂದ್ಯದಲ್ಲಿ ಆರ್ಸಿಬಿ ಅದ್ಭುತ ಪ್ರರ್ದಶನ ನೀಡಿದ್ದು, ಈ ಸಲ ಕಪ್ ಕನ್ಫರ್ಮ್ ನಮ್ದೇ ಅಂತಿದ್ದಾರೆ ಅಭಿಮಾನಿಗಳು. ಈ ಬಾರಿ ತಂಡ ಒಳ್ಳೆ ಕಮ್ಬ್ಯಾಕ್ ಮಾಡಿದ್ದಾರೆ. ಇದು ಹೀಗೆ ಮುಂದುವರೆಯಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.
IPL 2023 reece topley suffers shoulder injury out of the tournament.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm