ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್!!

25-10-20 04:42 pm       Headline Karnataka News Network   ಕ್ರೀಡೆ

ಹೃದಯಾಘಾತದ ಕಾರಣದಿಂದ ಆಸ್ಪತ್ರೆ ಸೇರಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ನವ ದೆಹಲಿ, ಅಕ್ಟೋಬರ್ .25 : ಹೃದಯಾಘಾತದ ಕಾರಣದಿಂದ ಆಸ್ಪತ್ರೆ ದಾಖಲಾಗಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಚೇತರಿಸಿಕೊಂಡು ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರಿಗೆ ವೈದ್ಯರು ಆಂಜಿಯೋಪ್ಲಾಸ್ಟಿ ಶಸ್ತ್ರ್ ಚಿಕಿತ್ಸೆಗೆ ಒಳಪಡಿಸಿದ್ದರು.ಸದ್ಯ ಕಪಿಲ್ ದೇವ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಕಪಿಲ್ ದೇವ್ ಶಸ್ತ್ರ ಚಿಕಿತ್ಸೆ ನಂತರ  ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಹಾಗೂ ಕೆಲ ದಿನಗಳವರೆಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದೆ  ಎಂದು ಪೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ ಸ್ಟಿಟ್ಯೂಟ್ ನ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕ ಡಾ.ಅತುಲ್ ಮಾಥುರ್ ಹೇಳಿದ್ದಾರೆ.