ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.


ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.


ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.


ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am