ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.


ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.


ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.


ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm