ಬ್ರೇಕಿಂಗ್ ನ್ಯೂಸ್
13-04-23 01:00 pm Source: news18 ಕ್ರೀಡೆ
ಐಪಿಎಲ್ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ ರಾಯಲ್ಸ್ ತಂಡವನ್ನು (CSK vs RR)ಎದುರಿಸಿತು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ಗಳಲ್ಲಿ 8 ವಿಕೆಟ್ಗೆ 175 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ 3 ರನ್ಗಳಿಂದ ಸೋಲನ್ನಪ್ಪಿತು.


ಆದರೆ ಈ ಪಂದ್ಯವು ಐಪಿಎಲ್ನಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಈ ವರ್ಷದಲ್ಲಿ ಒಂದು ಪಂದ್ಯದ ಲೈವ್ ವೀಕ್ಷಣೆಯ ದಾಖಲೆಯನ್ನು ನಿರ್ಮಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಹೌದು, 2ನೇ ಬ್ಯಾಟಿಂಗ್ ಮಾಡಿದ ಚೆನ್ನೈ ತಂಡದ ಪರ ಧೋನಿ ಬ್ಯಾಟಿಂಗ್ಗೆ ಆಗಮಿಸುವಾಗ ಐಪಿಎಲ್ 2023ರ ಲೈವ್ ಸ್ಟ್ರೀಮಿಂಗ್ನ್ನು ಜಿಯೋ ಸಿನಿಮಾದಲ್ಲಿ 1.5 ಕೋಟಿ ವೀಕ್ಷಣೆ ಪಡೆಯುತ್ತಿತ್ತು.

ಆದರೆ ಧೋನಿ ಕ್ರೀಸ್ಗೆ ಬಂದ ನಂತರ ಅದೆಲ್ಲಿಯೂ ಕೊನೆಯ 20 ಓವರ್ ವೇಳೆಗೆ ಈ ವೀಕ್ಷಣೆ ಬರೋಬ್ಬರಿ 2.2 ಕೋಟಿಗೆ ತಲುಪುವ ಮೂಲಕ ಈ ಸೀಸನ್ನಲ್ಇ ಅತಿ ಹೆಚ್ಚು ವೀಕ್ಷಣೆ ಪಡೆದ ಪಂದ್ಯ ಎಂಬ ದಾಖಲೆ ನಿರ್ಮಿಸಿದೆ.

ಇದಕ್ಕೂ ಮುನ್ನ ಲಕ್ನೋ ವಿರುದ್ಧ ಆರ್ಸಿಬಿ ಪಂದ್ಯದಲ್ಲಿ ಫಾಫ್ ಡುಪ್ಲೇಸಿಸ್ ಮತ್ತು ಗ್ಲೇನ್ ಮ್ಯಾಕ್ಸ್ವೆಲ್ ಬ್ಯಾಟಿಂಗ್ ಮಾಡುವಾಗ ಬರೋಬ್ಬರಿ 1.8 ಕೋಟಿ ವೀಕ್ಷಣೆ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿತ್ತು. ಇದೀಗ ಈ ದಾಖಲೆಯನ್ನು ಚೆನ್ನೈ ಪಂದ್ಯ ಮುರಿದಿದೆ.

ಇನ್ನು, ವಿರಾಟ್ ಕೊಹ್ಲಿ ಸಹ ಬ್ಯಾಟಿಂಗ್ ಮಾಡುವ ವೇಳೆ 1.5 ಕೋಟಿ ವೀಕ್ಷಣೆ ಪಡೆಯುವ ಮೂಲಕ 4ನೇ ಅತಿ ಹೆಚ್ಚು ವೀಕ್ಷಣೆ ಪಡೆದ ಪಮದ್ಯ ಎಂಬ ಖ್ಯಾತಿಗೆ ಪಾತ್ರವಾಗಿದೆ. ಒಟ್ಟಾರೆಯಾಗಿ ಧೋನಿ ಆಗಮನದ ವೇಳೆ ಜಿಯೋ ಸಿನಿಮಾದಲ್ಲಿ ವೀಕ್ಷಣೆ ಹೆಚ್ಚುತ್ತಿದೆ.

ಧೋನಿ ಆಗಮನದ ವೇಳೆ ಈ ಬಾರಿ ಜಿಯೋ ಸಿನಿಮಾ ವೀಕ್ಷಣೆ ದಾಖಲೆಯ ಮೇಲೆ ದಾಖಲೆ ಸೃಷ್ಟಿಸುತ್ತಿದೆ. ಕಳೆದ ಕೋಲ್ಕತ್ತಾ ಪಂದ್ಯದ ವೇಳೆ ಧೋನಿ ಅಬ್ಬರದ 2 ಸಿಕ್ಸ್ ಸಿಡಿಸುವ ವೇಳೆ 1.7 ಕೋಟಿ ಹಾಗೂ ಮೊದಲ ಪಂದ್ಯದ ವೇಳೆ 1.7 ಕೋಟಿ ವೀಕ್ಷಣೆ ಪಡೆದಿತ್ತು.
highest viewership on jiocinema for ipl 2023 csk vs rr match.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am