ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.
ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.
ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm