ಬ್ರೇಕಿಂಗ್ ನ್ಯೂಸ್
19-04-23 01:33 pm Source: news18 ಕ್ರೀಡೆ
ಇತ್ತೀಚೆಗೆ ಕ್ರಿಕೆಟ್ ಪಂದ್ಯದ ವೇಳೆ ವಿಭಿನ್ನ ಪೋಸ್ಟರ್ ತೋರಿಸುವುದು ಟ್ರೆಂಡ್ ಆಗುತ್ತಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೂ ಅಂತಹ ಕ್ರೇಜ್ ಮುಂದುವರಿದಿದೆ. ಏಪ್ರಿಲ್ 17 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳೂ ಮುಖಾಮುಖಿಯಾಗಿದ್ದವು.


ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಅಮೋಘ ಬ್ಯಾಟಿಂಗ್ ಕಂಡುಬಂದಿತು. ರನ್ಫೆಸ್ಟ್ ಅಗಿದ್ದ ಈ ಪಂದ್ಯದಲ್ಲಿ ಬರೋಬ್ಬರಿ 444 ರನ್ ಸಿಡಿದಿತ್ತು. ಈ ಪಂದ್ಯದಲ್ಲಿ ಆರ್ಸಿಬಿ 8 ರನ್ಗಳ ರೋಚಕ ಸೋಲು ಕಂಡಿತ್ತು. ಪಂದ್ಯದ ವೇಳೆ ಪುಟ್ಟ ಅಭಿಮಾನಿಯೊಬ್ಬ ಸ್ಟ್ಯಾಂಡ್ನಲ್ಲಿ ಹಿಡಿದಿರುವ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಬಹಳ ಬೇಗನೆ ವೈರಲ್ ಆಗಿದೆ. ಆ ಪೋಸ್ಟರ್ನಲ್ಲಿ ಪುಟ್ಟ ಬಾಲಕ ತಾನೂ ವಿರಾಟ್ ಕೊಹ್ಲಿ ಪುತ್ರಿ ವಮಿಕಾ ಜೊತೆ ಡೇಟಿಂಗ್ ಮಾಡುವುದಾಗಿ ಕೇಳಿದ್ದಾನೆ. 'ಹಾಯ್, ವಿರಾಟ್ ಅಂಕಲ್.. ನಾನು ವಮಿಕಾಳನ್ನು ಡೇಟ್ಗೆ ಕರೆದುಕೊಂಡು ಹೋಗಬಹುದೇ.? ಎಂದು ಕೇಳುವ ಪೋಸ್ಟರ್ ಅನ್ನ ಬಾಲಕನ ಕೈಯಲ್ಲಿ ಹಿಡಿಸಲಾಗಿದೆ.


ಈ ಪೋಸ್ಟರ್ಅನ್ನು ಕೆಲವರು ತಮಾಷೆಯಾಗಿ ಪರಿಗಣಿಸಿದರೆ , ಇನ್ನೂ ಕೆಲವು ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಕನ ಕೈಯಲ್ಲಿ ಈ ಪೋಸ್ಟರ್ ನೀಡಿರುವ ಮಗುವಿನ ಪೋಷಕರ ವಿರುದ್ಧ ಕಿಡಿಕಾರಿರುವ ನೆಟ್ಟಿಗರು, ಇಂತಹ ವರ್ತನೆ ಸರಿಯಲ್ಲ ಎಂದಿದ್ದಾರೆ.

ಈ ಪೋಸ್ಟರ್ನಲ್ಲಿ ಕಾಣಿಸಿಕೊಂಡಿರುವ ಮಗುವನ್ನು ನೋಡಿದರೆ ಅದರಲ್ಲಿ ಬರೆದಿರುವ ಪದಗಳ ಸಂಪೂರ್ಣ ಅರ್ಥ ಕೂಡ ತಿಳಿಯಲ್ಲ. ಇದು ತಮಾಷೆಯ ವಿಷಯವಲ್ಲ, ಮಗುವನ್ನು ಈ ವಿಷಯಕ್ಕೆ ಬಳಸಿಕೊಂಡ ಪೋಷಕರಿಗೆ ನಾಚಿಕೆಯಾಗಬೇಕು. ಇಂತಹ ವಿಷಯಗಳಲ್ಲಿ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ಸ್ಟಾರ್ ಅನುಷ್ಕಾ ಶರ್ಮಾ ದಂಪತಿ ತಮ್ಮ ಮಗಳನ್ನು ಸಾಮಾಜಿಕ ಜಾಲತಾಣದಿಂದ ದೂರ ಉಳಿಸಿದ್ದಾರೆ. ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದರೂ ಸಹಾ ತಮ್ಮ ಮಗಳ ಮುಖ ಕಾಣುವ ಒಂದೇ ಒಂದು ಫೋಟೋವನ್ನು ಅವರು ಶೇರ್ ಮಾಡಿಲ್ಲ. ಮಗುವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರೂ ಮಗುವಿನ ವಿವರವನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಎಂದು ವಿರಾಟ್ ಕೊಹ್ಲಿ ದಂಪತಿಗಳು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದಾರೆ.
can i take vamika on date young fan placard for virat kohlis daughter gets criticized on twitter.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm