ಬ್ರೇಕಿಂಗ್ ನ್ಯೂಸ್
22-04-23 01:40 pm Source: news18 ಕ್ರೀಡೆ
ಐಪಿಎಲ್ 2023ರ 29ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ (CSK vs SRH) ತಂಡಗಳು ಮುಖಾಮುಖಿ ಆದವು. ಈ ಪಂದ್ಯದಲ್ಲಿ ಹೈದರಾಬಾದ್ ಮೊದಲು ಬ್ಯಾಟ್ ಮಾಡಿ ಚೆನ್ನೈ ತಂಡಕ್ಕೆ 135 ರನ್ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 138 ರನ್ ಗಳಿಸುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು. ಆದರೆ, ಹೈದರಾಬಾದ್ ಪಂದ್ಯದಲ್ಲಿ ಚೆನ್ನೈ ಪ್ಲೇಯರ್ ರವೀಂದ್ರ ಜಡೇಜಾ ಹಾಗೂ SRH ಬ್ಯಾಟರ್ ಕ್ಲಾಸೆನ್ ಪರಸ್ಪರ ವಾಗ್ವಾದ ನಡೆಸಿದ ಘಟನೆ ನಡೆದಿದೆ. ಇಬ್ಬರು ಆಟಗಾರರ ಜಗಳವನ್ನು ಬಿಡಿಸಲು ಅಂತಿಮವಾಗಿ ಕೂಲ್ ಕ್ಯಾಪ್ಟನ್ ಧೋನಿ ಬರಬೇಕಾಯಿತು.


ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಷ್ಟಕ್ಕೂ, 13ನೇ ಓವರ್ ಬೌಲ್ ಮಾಡಿದ ಜಡೇಜಾಗೆ ವಿಕೆಟ್ ಪಡೆಯುವ ಅವಕಾಶವಿತ್ತು. ಓವರ್ನ ಮೊದಲ ಎಸೆತವನ್ನು ಮಯಾಂಕ್ ಅಗರ್ವಾಲ್ ನೆರ ಶಾಟ್ ಹೊಡೆದರು. ಬಾಲ್ ನೇರವಾಗಿ ಜಡೇಜಾ ಕೈಸರುವುದರಲ್ಲಿತ್ತು. ಆದರೆ ನಾನ್-ಸ್ಟ್ರೈಕರ್ನಲ್ಲಿ ನಿಂತಿದ್ದ ಹೈದರಾಬಾದ್ ಆಟಗಾರ ಹೆನ್ರಿಚ್ ಕ್ಲಾಸೆನ್ ಇದಕ್ಕೆ ಅಡ್ಡಿಯಾದರು. ಇಲ್ಲಿ ಬಾಲ್ ನಾನ್-ಸ್ಟ್ರೈಕರ್ ತುದಿಯೇ ನೇರವಾಗಿ ಬಂದಿತ್ತು.ಇದನ್ನು ಜಡೇಜಾ ಕ್ಯಾಚ್ ಪಡೆಯಲು ಯತ್ನಿಸಿದರು. ಆದರೆ, ಕ್ಲಾಸೆನ್ಗೆ ಡಿಕ್ಕಿ ಹೊಡೆದು ಜಡ್ಡು ಕ್ಯಾಚ್ ಮಿಸ್ ಮಾಡಿಕೊಂಡರು.

ಇದರಿಂದ ಕ್ಲಾನಿಸ್ ಮೇಲೆ ಸಿಟ್ಟಾದ ಜಡ್ಡು, ಮೊದಲಿಗೆ ಕೈ ಸನ್ನೆಯ ಮೂಲಕ ಸಿಟ್ಟನ್ನು ವ್ಯಕ್ತಪಡಿಸಿದರು. ಅಲ್ಲದೇ ಆ ಓವರ್ನ 4ನೇ ಎಸತದವರೆಗೂ ಜಡೇಜಾ ಕ್ಲಾಸಿನ್ ಅವರನ್ನು ಗುರಾಯಿಸಿದ ಘಟನೆ ನಡೆಯಿತು. ಆದರೆ, ಈ ಓವರ್ನ 5ನೇ ಎಸೆತದಲ್ಲಿ ಮಾಯಾಂಕ್ ಅರ್ಗವಾಲ್ ಅವರನ್ನು ಧೋನಿ ಸ್ಟಂಪ್ ಔಟ್ ಮಾಡಿದರು. ಈ ವೇಳೆ ಜಡ್ಡು ವಿಕೆಟ್ ಪಡೆದ ಬಳಿಕ ಜಡೇಜಾ ಅವರು ಕ್ಲಾಸಿನ್ ಬಳಿ ತಿರುಗಿ ಮತ್ತೊಮ್ಮೆ ಗುರಾಯಿಸುತ್ತಾ ತಮ್ಮ ಕೋಪವನ್ನು ವ್ಯಕ್ತಪಡಿಸಿದರು.


ಆದರೆ, ಅಷ್ಟರಲ್ಲಿ ಜಡ್ಡು ಬಳಿ ಬಂದ ನಾಯಕ ಧೋನಿ ಇಬ್ಬರ ನಡುವಿನ ದೃಷ್ಟಿ ಯುದ್ದಕ್ಕೆ ಅಂತ್ಯ ಹಾಡಿದರು. ಅಲ್ಲದೇ ರವೀಂದ್ರ ಜಡೇಜಾ ತಮ್ಮ 4 ಓವರ್ಗಳಲ್ಲಿ ಕೇವಲ 22 ರನ್ ನೀಡಿ 3 ವಿಕೆಟ್ ಪಡೆಯುವ ಮೂಲಕ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದಾರೆ. ಐಪಿಎಲ್ 2023ರ ಅಂಕಪಟ್ಟಿ ನೋಡುವುದಾರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 6 ಪಂದ್ಯದಲ್ಲಿ 4ರಲ್ಲಿ ಗೆದ್ದು 2ರಲ್ಲಿ ಸೋತಿದ್ದು, 8 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ ಸನ್ರೈಸರ್ಸ್ ಹೈದರಾಬಾದ್ 6 ಪಂದ್ಯದಲ್ಲಿ 2ರಲ್ಲಿ ಗೆದ್ದು, 4ರಲ್ಲಿ ಸೋತಿದ್ದು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ.
ipl 2023 jadeja clashes with srh batsman henrich klaasen.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm