ಬ್ರೇಕಿಂಗ್ ನ್ಯೂಸ್
26-04-23 01:27 pm Source: news18 ಕ್ರೀಡೆ
ಆರ್ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ ಪಂದ್ಯವಳಿಯಲ್ಲಿ ಆರ್ಸಿಬಿ ಪಂದ್ಯಗಳಿಗೆ ಸಖತ್ ಕ್ರೇಜ್ ಇರುತ್ತದೆ. ಅದರಂತೆ, ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿದ್ದರೆ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರುವುದಿಲ್ಲ. ಅಭಿಮಾನಿಗಳ ಜೊತೆ ಕಳ್ಳರಿಗೂ ಇದು ಸುಗ್ಗಿ ಕಾಲವಾಗಿದೆ.


ಈಗಾಗಲೇ, ಆದಾಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಬಿ.ಆರ್ ರಮೇಶ್ ಅವರು ಏ.17ರಂದು ನಡೆದ ಚೆನ್ನೈ ಹಾಗೂ ಆರ್ಸಿಬಿ ಪಂದ್ಯ ವೀಕ್ಷಣೆಗೆ ಹೋಗುತ್ತಿದ್ದ ವೇಳೆ ಕಳ್ಳರು ಅವರ ಬಳಿ ಇದ್ದ 80 ಸಾವಿರ ಮೌಲ್ಯದ ಸ್ಯಾಮ್ಸಂಗ್ ಎಸ್-21 ಮೊಬೈಲ್ ಕಳ್ಳತನ ಮಾಡಿದ್ದಾರಂತೆ. ಇದಲ್ಲದೇ ವಿದ್ಯಾರ್ಥಿಯೊಬ್ಬರ 2.40 ಲಕ್ಷ ಬೆಲೆಯ KTM ಡ್ಯೂಕ್ ಬೈಕ್ ಸಹ ಕಳ್ಳತನವಾಗಿತ್ತು. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಹಾಗೂ ಬೈಕ್ ಕಳ್ಳತನದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.


ಇದಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು ಬಳಸುವ ಕ್ರಿಕೆಟ್ ಕಿಟ್ಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ನಡೆದಿತ್ತು. ಡೆಲ್ಲಿ ತಂಡದ ಆಟಗಾರರ 17 ಲಕ್ಷ ರೂ. ಬೆಲೆ ಬಾಳುವ ಕ್ರಿಕೆಟ್ ಕಿಟ್ ಕಳ್ಳತನವಾಗಿತ್ತು. ಈ ರೀತಿಯ ಹಲವು ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಈ ಸಂಬಂಧ ಪೊಲೀಸರು ನಾಗರೀಕರಲ್ಲಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.

ಅಭಿಮಾನಿಗಳು ಕ್ರಿಕೆಟ್ ಹಾಗೂ ತಮ್ಮ ಮೆಚ್ಚಿನ ಆಟಗಾರನನ್ನು ನೋಡುವ ಆತುರದಲ್ಲಿ ಇರುವುದರಿಂದ ಹಾಗೂ ಸರಿಸುಮಾರು 30 ಸಾವಿರಕ್ಕೂ ಹೆಚ್ಚು ಜನ ಒಮ್ಮೆಲೆ ಸೇರುವುದಿರಂದ ಕಳ್ಳರು ಸುಲಭವಾಗಿ ಕಳ್ಳತನ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದು, ಕ್ರಿಕೆಟ್ ನೋಡಲು ಹೋಗುವವರು ಕೊಂಚ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗಿದ್ದವು. ಆ ವೇಳೆ ಆರ್ಸಿಬಿ ತಂಡ ಸೋಲನ್ನಪ್ಪಿತು. ಹೀಗಾಗಿ ಆರ್ಸಿಬಿ ಇದೀಗ ಕೆಕೆಆರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.
RCB ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ಸಿ), ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್.
rcb vs kkr number of theft cases in-during ipl matches at chinnaswamy stadium.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm