ಬ್ರೇಕಿಂಗ್ ನ್ಯೂಸ್
02-05-23 12:46 pm Source: news18 ಕ್ರೀಡೆ
ಎಲ್ಲೆಲ್ಲೂ ವಿರಾಟ್ ಕೊಹ್ಲಿ-ಗಂಭೀರ್ ಜಗಳದ್ದೇ ಮಾತು. ಆ ಮಟ್ಟಕ್ಕೆ ಗಲಾಟೆಯಾಗಿದೆ ಅಂದ್ರೆ ಯೋಚನೆ ಮಾಡಿ. ಅದು ಆರ್ಸಿಬಿ ಸೋತಾಗ ಗಂಭೀರ್ ಕುಣಿದು ಕುಪ್ಪಳಿಸಿದ್ದರು. ಶ್ ಸನ್ನೆ ಮಾಡಿ ಅಲ್ಲಿ ನೆರೆದಿದ್ದವರಿಗೆ ವಾರ್ನಿಂಗ್ ಕೊಟ್ಟಿದ್ದರು. ಆದರೆ ನಿನ್ನೆ ಆರ್ಸಿಬಿ ಗೆಲುವನ್ನು ಗಂಭೀರ್ ಸಹಿಸಿಕೊಂಡಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಮತ್ತೊಂದು ಫೋಟೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೊಂದು ಫೋಟೊ ಸಾಕು ವಿರಾಟ್ ಏನು ಅಂತ ಗೊತ್ತಾಗೋಕೆ ಅಂತಿದ್ದಾರೆ ಫ್ಯಾನ್ಸ್


ಗಲಾಟೆಗೂ ಮುನ್ನ ಗ್ರೌಂಡ್ ಒಳಗೆ ಅಭಿಮಾನಿಯೊಬ್ಬ ಬಂದು ವಿರಾಟ್ ಕೊಹ್ಲಿ ಕಾಲು ಮುಟ್ಟಿ ನಮಸ್ಕರಿಸಿದ್ದಾನೆ. ವಿರಾಟ್ ಕೂಡ ಅವರನ್ನು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಇಷ್ಟೇ ಆಗಿದ್ದರೆ ಈ ಫೋಟೋ ವೈರಲ್ ಆಗುತ್ತಿರಲಿಲ್ಲ. ಆ ಅಭಿಮಾನಿ ಗೌತಮ್ ಗಂಭೀರ್ ಮುಂದೆಯೇ ವಿರಾಟ್ ಕಾಲಿಗೆ ಬಿದ್ದಿದ್ದಾರೆ. ಆಂಜನೇಯ ಶ್ರೀರಾಮನ ಮುಂದೆ ಮಂಡಿಯೂರುವಂತೆ ಫೋಟೋ ಕಾಣಿಸುತ್ತಿದ್ದು, ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಾರೆ.


ವಿರಾಟ್ ಕೊಹ್ಲಿ ಗತ್ತು ಎಲ್ಲರಿಗೂ ಗೊತ್ತು. ಈ ಫೋಟೋ ನೋಡಿದ್ರೆ ಸಾಕು. ಗಂಭೀರ್ ಮಾಡಿದ್ದೇ ತಪ್ಪು. ಗೆದ್ದಾಗ ಆ ರೀತಿ ಮಾಡಿ, ಸೋತಾಗ ಗಲಾಟೆ ಮಾಡೋದು ಎಷ್ಟು ಸರಿ ಅಂತ ಅಭಿಮಾನಿಗಳು ಕೇಳುತ್ತಿದ್ದಾರೆ.ಆರ್ಸಿಬಿ ತಂಡದ ಆಟಗಾರ ಕಿಂಗ್ ಕೊಹ್ಲಿ, ಎಲ್ಎಸ್ಜಿ ತಂಡದ ಮೆಂಟರ್ ಗಂಭೀರ್ ನಡುವೆ ದೊಡ್ಡ ಗಲಾಟೆಯಾಗಿತ್ತು. ಇಬ್ಬರು ಆಟಗಾರರು ಮೈದಾನದಲ್ಲೇ ಬಡಿದಾಡಿಕೊಳ್ಳುವಂತಹ ಪರಿಸ್ಥಿತಿಗೆ ಹೋಗಿತ್ತು.


ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಮತ್ತು ನವೀನ್-ಉಲ್-ಹಕ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಬಿಸಿಸಿಐ ನಿಯಮ ಲೆವಲ್ 2 ಅಪರಾಧ ಮಾಡಿದ್ದಾರೆ ಅಂತ ಕೊಹ್ಲಿ-ಗಂಭೀರ್ ಪಂದ್ಯದ ಶುಲ್ಕದ ಮೇಲೆ 100% ದಂಡವನ್ನು ವಿಧಿಸಲಾಗಿದೆ. ನವೀನ್-ಉಲ್-ಹಕ್ ಅವರ ಲೆವೆಲ್ 1 ಅಪರಾಧಕ್ಕಾಗಿ ತಮ್ಮ ಪಂದ್ಯದ ಶುಲ್ಕದ 50% ನಷ್ಟು ದಂಡ ಕಟ್ಟಬೇಕು.ಗಂಭೀರ್, ಕೊಹ್ಲಿ ಮತ್ತು ನವೀನ್ ತಮ್ಮ ತಪ್ಪನ್ನು ಒಪ್ಪಿಕೊಂಡು ದಂಡ ಕಟ್ಟುವುದಾಗಿ ಹೇಳಿದ್ದಾರೆ.
ipl 2023 fan touches virat kohlis feet infront of gautam gambhir video viral.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm