ಬ್ರೇಕಿಂಗ್ ನ್ಯೂಸ್
10-05-23 03:21 pm Source: news18 ಕ್ರೀಡೆ
ಐಪಿಎಲ್ 2023 2023ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ವಿರುದ್ಧ ಹೀನಾಯವಾಗಿ ಸೋಲನ್ನಪ್ಪಿತು. ಈ ಸೋಲಿಗೆ ಕೆಲ ಕಾರಣಗಳಿದ್ದು, ಫಾಫ್ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್ಸಿಬಿ 199 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 200 ರನ್ ಗಳ ಟಾರ್ಗೆಟ್ ನೀಡಿತು. ಈ ಮೊತ್ತವನ್ನು ಮುಂಬೈ ಇಂಡಿಯನ್ಸ್ ತಂಡವು 16.3 ಓವರ್ಗೆ 4 ವಿಕೆಟ್ ಚೇಸ್ ಮಾಡುವ ಮೂಲಕ ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿತು.
ಆದರೆ ಆರ್ಸಿಬಿ ತಂಡ ಸೋಲಲು ಕೆಲ ಕಾರಣಗಳಿವೆ. ಅವುಗಳಲ್ಲಿ ಪ್ರಮುಖವಾಗಿ, ಬೌಲಿಂಗ್ ಎನ್ನಬಹುದು. ಆದರೆ ಮುಂಬೈ ಪರ ಮಧ್ಯಮ ಕ್ರಮಾಂಕದ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ನಿಯಂತ್ರಿಸಲು ಆರ್ಸಿಬಿ ಬಳಿ ಸಾಧ್ಯವಾಗಲಿಲ್ಲ. ಇದು ತಂಡಕ್ಕೆ ದುಬಾರಿಯಾಯಿತು. ಜೊತೆಗೆ ಸೂರ್ಯ-ವಧೇರಾ ಜೊತೆಯಾಟ ಸಹ ಆರ್ಸಿಬಿಗೆ ದೊಡ್ಡ ಹಿನ್ನಡೆಯಾಯಿತು. ಸೂರ್ಯಕುಮಾರ್ ಯಾದವ್ ಮತ್ತು ನೇಹಲ್ ವಧೇರಾ uತ್ತಮ ಜೊತೆಯಾಟವಾಡಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಆರ್ಸಿಬಿ ಬೌಲರ್ಗಳು ಯಶಸ್ವಿಯಾಗಲಿಲ್ಲ.
ಇನ್ನು, ವಾಂಕೆಡೆ ಮೈದಾನ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಈ ಪಿಚ್ನಲ್ಲಿ ಆರ್ಸಿಬಿ ಸ್ಕೋರ್ ಸಹ ಕಡಿಮೆ ಆಯಿತು. ಅಲ್ಲದೇ ಮುಂಬೈ ಚೇಸಿಂಗ್ ಟೀಂ ಆಗಿರುವುದರಿಂದ ಇನ್ನೂ ಹೆಚ್ಚಿನ ಸ್ಕೋರ್ ಬರಬೇಕಿತ್ತು. ಆರಂಭದಲ್ಲಿ ರೋಹಿತ್ ಮತ್ತು ಇಶಾನ್ ಕಿಶನ್ ವಿಕೆಟ್ ಪಡೆದ ನಂತರ ಆರ್ಸಿಬಿ ಬೌಲರ್ಸ್ ಯಾವುದೇ ಪ್ರತಿದಾಳಿ ನೀಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು. ಒಟ್ಟಾರೆಯಾಗಿ ಮತ್ತೊಮ್ಮೆ ಆರ್ಸಿಬಿ ಬೌಲರ್ಗಳು ಎಡವಿರುವುದು ತಂಡಕ್ಕೆ ದೊಡ್ಡ ತಲೆನೋವಾಗಿದೆ. ಅಲ್ಲದೇ ಮುಂಬರಲಿರುವ 3 ಪಂದ್ಯಗಳನ್ನು ಆರ್ಸಿಬಿ ಗೆಲ್ಲಲೇಬೇಕಿದೆ.
ಇನ್ನು, ನಾಯಕ ಫಾಫ್ ಡುಪ್ಲೆಸಿಸ್ ಸಹ ಬೌಲಿಂಗ್ ವಿಭಾಗದ ಬಗ್ಗೆ ಬೇಸರಗೊಂಡಿದ್ದಾರೆ.ಅದರಲ್ಲಿಯೂ ಪ್ರಮುಖವಾಗಿ ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಬೌಲಿಂಗ್ ಬಗ್ಗೆ ಫಾಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಫಾಫ್, ನಮಗೆ ಇನ್ನು ಇರುವುದು ಕೇಲವ 3 ಪಂದ್ಯಗಳು ಈ ಪಂದ್ಯಗಳಲ್ಲಿ ಬೌಲರ್ಗಳು ಫಾರ್ಮ್ಗೆ ಮರಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಮುಂಬೈ ತಂಡದ ಸೂರ್ಯಕುಮಾರ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ipl 2023 here is the reason for rcb defeat against mumbai.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm