ಬ್ರೇಕಿಂಗ್ ನ್ಯೂಸ್
10-05-23 03:21 pm Source: news18 ಕ್ರೀಡೆ
ಐಪಿಎಲ್ 2023 2023ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ವಿರುದ್ಧ ಹೀನಾಯವಾಗಿ ಸೋಲನ್ನಪ್ಪಿತು. ಈ ಸೋಲಿಗೆ ಕೆಲ ಕಾರಣಗಳಿದ್ದು, ಫಾಫ್ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್ಸಿಬಿ 199 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 200 ರನ್ ಗಳ ಟಾರ್ಗೆಟ್ ನೀಡಿತು. ಈ ಮೊತ್ತವನ್ನು ಮುಂಬೈ ಇಂಡಿಯನ್ಸ್ ತಂಡವು 16.3 ಓವರ್ಗೆ 4 ವಿಕೆಟ್ ಚೇಸ್ ಮಾಡುವ ಮೂಲಕ ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿತು.
ಆದರೆ ಆರ್ಸಿಬಿ ತಂಡ ಸೋಲಲು ಕೆಲ ಕಾರಣಗಳಿವೆ. ಅವುಗಳಲ್ಲಿ ಪ್ರಮುಖವಾಗಿ, ಬೌಲಿಂಗ್ ಎನ್ನಬಹುದು. ಆದರೆ ಮುಂಬೈ ಪರ ಮಧ್ಯಮ ಕ್ರಮಾಂಕದ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ನಿಯಂತ್ರಿಸಲು ಆರ್ಸಿಬಿ ಬಳಿ ಸಾಧ್ಯವಾಗಲಿಲ್ಲ. ಇದು ತಂಡಕ್ಕೆ ದುಬಾರಿಯಾಯಿತು. ಜೊತೆಗೆ ಸೂರ್ಯ-ವಧೇರಾ ಜೊತೆಯಾಟ ಸಹ ಆರ್ಸಿಬಿಗೆ ದೊಡ್ಡ ಹಿನ್ನಡೆಯಾಯಿತು. ಸೂರ್ಯಕುಮಾರ್ ಯಾದವ್ ಮತ್ತು ನೇಹಲ್ ವಧೇರಾ uತ್ತಮ ಜೊತೆಯಾಟವಾಡಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಆರ್ಸಿಬಿ ಬೌಲರ್ಗಳು ಯಶಸ್ವಿಯಾಗಲಿಲ್ಲ.


ಇನ್ನು, ವಾಂಕೆಡೆ ಮೈದಾನ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಈ ಪಿಚ್ನಲ್ಲಿ ಆರ್ಸಿಬಿ ಸ್ಕೋರ್ ಸಹ ಕಡಿಮೆ ಆಯಿತು. ಅಲ್ಲದೇ ಮುಂಬೈ ಚೇಸಿಂಗ್ ಟೀಂ ಆಗಿರುವುದರಿಂದ ಇನ್ನೂ ಹೆಚ್ಚಿನ ಸ್ಕೋರ್ ಬರಬೇಕಿತ್ತು. ಆರಂಭದಲ್ಲಿ ರೋಹಿತ್ ಮತ್ತು ಇಶಾನ್ ಕಿಶನ್ ವಿಕೆಟ್ ಪಡೆದ ನಂತರ ಆರ್ಸಿಬಿ ಬೌಲರ್ಸ್ ಯಾವುದೇ ಪ್ರತಿದಾಳಿ ನೀಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು. ಒಟ್ಟಾರೆಯಾಗಿ ಮತ್ತೊಮ್ಮೆ ಆರ್ಸಿಬಿ ಬೌಲರ್ಗಳು ಎಡವಿರುವುದು ತಂಡಕ್ಕೆ ದೊಡ್ಡ ತಲೆನೋವಾಗಿದೆ. ಅಲ್ಲದೇ ಮುಂಬರಲಿರುವ 3 ಪಂದ್ಯಗಳನ್ನು ಆರ್ಸಿಬಿ ಗೆಲ್ಲಲೇಬೇಕಿದೆ.


ಇನ್ನು, ನಾಯಕ ಫಾಫ್ ಡುಪ್ಲೆಸಿಸ್ ಸಹ ಬೌಲಿಂಗ್ ವಿಭಾಗದ ಬಗ್ಗೆ ಬೇಸರಗೊಂಡಿದ್ದಾರೆ.ಅದರಲ್ಲಿಯೂ ಪ್ರಮುಖವಾಗಿ ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಬೌಲಿಂಗ್ ಬಗ್ಗೆ ಫಾಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಫಾಫ್, ನಮಗೆ ಇನ್ನು ಇರುವುದು ಕೇಲವ 3 ಪಂದ್ಯಗಳು ಈ ಪಂದ್ಯಗಳಲ್ಲಿ ಬೌಲರ್ಗಳು ಫಾರ್ಮ್ಗೆ ಮರಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಮುಂಬೈ ತಂಡದ ಸೂರ್ಯಕುಮಾರ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ipl 2023 here is the reason for rcb defeat against mumbai.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm