ಬ್ರೇಕಿಂಗ್ ನ್ಯೂಸ್
11-05-23 03:20 pm Source: news18 ಕ್ರೀಡೆ
2011ರ ವಿಶ್ವಕಪ್ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಇದ್ದಕ್ಕಿದ್ದಂತೆ 'ಮೆಡಿಯಾಸ್ಟೈನಲ್ ಸೆಮಿನೋಮಾ' ಎಂಬ ಅಪರೂಪದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಯುವರಾಜ್ ಸಿಂಗ್ ಕ್ಯಾನ್ಸರ್ ಅನ್ನು ಸೋಲಿಸಿದ ನಂತರ ಕ್ರಿಕೆಟ್ಗೆ ಮರಳಿದ್ದರು. ಇದೀಗ ಯುವರಾಜ್ ಸಿಂಗ್ ಅವರಂತೆಯೇ ಮತ್ತೊಬ್ಬ ಆಟಗಾರನಿಗೆ ಕ್ಯಾನ್ಸರ್ ಉಂಟಾಗಿದೆ. ಈ ಆಟಗಾರ ಇತ್ತೀಚೆಗೆ ತಮ್ಮ ಅನಾರೋಗ್ಯದ ಬಗ್ಗೆ ತಿಳಿಸಿದ್ದಾರೆ. ಸದ್ಯ ಈ ಆಟಗಾರನಿಗೆ ಕೇವಲ 31 ವರ್ಷ. ಇಂಗ್ಲೆಂಡ್ನ ವಿಕೆಟ್ಕೀಪರ್-ಬ್ಯಾಟರ್ ಸ್ಯಾಮ್ ಬಿಲ್ಲಿಂಗ್ಸ್ ಅವರು ಚರ್ಮದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ.
ಈ ವಿಚಾರವನ್ನು ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ. ದೀರ್ಘಾವಧಿಯ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ತನ್ನ ತಂಡದ ಸಹ ಆಟಗಾರರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಕಳೆದ ವರ್ಷ 2 ಬಾರಿ ಎದೆಯ ಭಾಗದ ಚರ್ಮದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಗಿ ಹೇಳಿಕೊಂಡಿದ್ದಾರೆ. ಈ ವೇಳೆ ಬಿಸಿಲಿನಲ್ಲಿ ತುಂಬಾ ಸಮಯ ಕಳೆಯುವುದು ಅಪಾಯಕಾರಿ. ನನ್ನ ಸ್ಥಿತಿ ನೋಡಿಯಾದರೂ ಇದನ್ನು ಅರ್ಥ ಮಾಡಿಕೊಳ್ಳಿ ಎಂದು ಅವರು ಸಹ ಆಟಗಾರರಲ್ಲಿ ವಿನಂತಿಸಿದ್ದಾರೆ.
ಇನ್ನು, ನಾನು ಇದನ್ನು ಮೊದಲಿಗೆ ಚರ್ಮದ ಮೇಲಿನ ಕಲೆಗಳು ಎಂದುಕೊಂಡಿದ್ದೆ. ಅದು 0.6 ಮಿಲಿಮೀಟರ್ನಷ್ಟು ಆಳವಾಗಿತ್ತು. ಅದು 0.7 ಮಿಲಿಮೀಟರ್ ಆಳಕ್ಕೆ ಇಳಿದಾಗ ಇದರ ಬಗ್ಗೆ ನಾನು ವೈದ್ಯರ ಬಳಿ ಹೋದಾಗ ಚರ್ಮದ ಕ್ಯಾನ್ಸರ್ ಇದೆ ಎಂದು ತಿಳಿಯಿತು ಎಂದಿದ್ದಾರೆ. ಬಿಲ್ಲಿಂಗ್ಸ್ ಇಂಗ್ಲೆಂಡ್ ಪರ 3 ಟೆಸ್ಟ್, 28 ODI ಮತ್ತು 37 T20 ಪಂದ್ಯಗಳನ್ನು ಆಡಿದ್ದಾರೆ. ಪ್ರಸ್ತುತ ಅವರು ಕೌಂಟಿ ಕ್ರಿಕೆಟ್ ಆಡುತ್ತಿದ್ದಾರೆ. ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವ ಅಪಾಯದ ಬಗ್ಗೆ ಅವರು ಸಹ ಆಟಗಾರರು ಮತ್ತು ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಾನು ವೃತ್ತಿಪರ ಪಂದ್ಯಗಳ ಬಗ್ಗೆ ಮಾತನಾಡುತ್ತಿಲ್ಲ. ಕ್ಲಬ್ ಕ್ರಿಕೆಟಿಗರು ಮತ್ತು ಪ್ರೇಕ್ಷಕರು ಕೂಡ ಇದರಿಂದ ಎಚ್ಚರವಾಗಿರಬೇಕು. 18 ಡಿಗ್ರಿಗಳಲ್ಲಿಯೂ ಸಹ ನೀವು ಬಿಸಿಲಿನಿಂದ ತೊಂದರೆಗೆ ಒಳಗಾಗಬಹುದು ಎಂದು ಹೇಳಿದ್ದಾರೆ. ಸದ್ಯ ಈ ವಿಚಾರ ತಿಳಿದ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಬನ್ನಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅಲ್ಲದೇ ಅನೇಕ ಕ್ರಿಕೆಟಿಗರು ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾಗಿ ತಿಳಿದುಬಂದಿದೆ.
england star cricketer sam billings cancer affected like to yuvraj singh.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm