ಬ್ರೇಕಿಂಗ್ ನ್ಯೂಸ್
12-05-23 02:32 pm Source: news18 ಕ್ರೀಡೆ
ಐಪಿಎಲ್ 2023 ರಲ್ಲಿ ಮೇ 11 (ಗುರುವಾರ) ವರೆಗೆ, ಲೀಗ್ ಹಂತದ 70 ಪಂದ್ಯಗಳಲ್ಲಿ 56 ಪೂರ್ಣಗೊಂಡಿವೆ. ಆದರೆ, ಪ್ಲೇಆಫ್ಗಳ ಚಿತ್ರಣ ಇನ್ನೂ ಸಂಪೂರ್ಣವಾಗಿ ಸ್ಪಷ್ಟವಾಗಿಲ್ಲ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಬಳಿಕ ರಾಜಸ್ಥಾನ್ ರಾಯಲ್ಸ್ ಕೂಡ ಟಾಪ್-3ಗೆ ಪ್ರವೇಶಿಸಿದೆ. ಈ ಗೆಲುವಿನಿಂದಾಗಿ ರಾಯಲ್ಸ್ ತಂಡದ ನೆಟ್ ರನ್ರೇಟ್ ಕೂಡ ಸಾಕಷ್ಟು ಸುಧಾರಿಸಿದೆ.



ಹೀಗಾಗಿ ರಾಜಸ್ಥಾನ್ ತಂಡ ಐದನೇ ಸ್ಥಾನದಿಂದ ನೇರವಾಗಿ ಮೂರನೇ ಸ್ಥಾನಕ್ಕೆ ಏರಿದೆ. ಇದರಿಂದಾಗಿ ಮುಂಬೈ ಇಂಡಿಯನ್ಸ್ 12 ಅಂಕದಿಂದ ನಾಲ್ಕನೇ ಹಾಗೂ ಲಕ್ನೋ ಸೂಪರ್ ಜೈಂಟ್ಸ್ 11 ಅಂಕದಿಂದ ಐದನೇ ಸ್ಥಾನ ಕುಸಿದಿದೆ. ಇನ್ನು, ರಾಜಸ್ಥಾನ 12 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಪಡೆದಿದೆ. ಆರ್ಆರ್ ನಿವ್ವಳ ರನ್ರೇಟ್ (0.633) ಆಗಿದೆ, ಇದು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (0.493) ಗಿಂತ ಉತ್ತಮವಾಗಿದೆ.



ಜೊತೆಗೆ, ಮುಂಬೈ ಇಂಡಿಯನ್ಸ್ ಕೂಡ 11 ಪಂದ್ಯಗಳಿಂದ ರಾಜಸ್ಥಾನಕ್ಕೆ ಸಮನಾದ 12 ಅಂಕಗಳನ್ನು ಹೊಂದಿದೆ. ಆದರೆ ನೆಟ್ ರನ್ ರೇಟ್ (-0.255)ದಿಂದಾಗಿ ಮುಂಬೈ ನಾಲ್ಕನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ 6ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿದಿದೆ. ಕೆಕೆಆರ್ ಸೋಲಿನ ಲಾಭ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು 1 ಸ್ಥಾನ ಮೇಲೇರಿದೆ.
ಸದ್ಯ ಆರ್ಸಿಬಿ 6ನೇ ಸ್ಥಾನದಲ್ಲಿದೆ. ಬೆಂಗಳೂರು, ಕೋಲ್ಕತ್ತಾ ಮತ್ತು ಪಂಜಾಬ್ 3 ತಂಡಗಳು ತಲಾ 10 ಅಂಕಗಳನ್ನು ಹೊಂದಿವೆ. ಇದರ ನಡುವೆ ಆರ್ಸಿಬಿ ತನ್ನ ಮುಂದಿನ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದು, ಅದೂ ಸಹ ಉತ್ತಮ ರನ್ರೇಟ್ ಮೂಲಕ ಗೆಲ್ಲಬೇಕಿದೆ.
ipl 2023 updated points table rr entered top 3 and kkr loss rcb benefitted.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm