ಬ್ರೇಕಿಂಗ್ ನ್ಯೂಸ್
15-05-23 12:57 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡ ಭರ್ಜರಿ ಜಯ ದಾಖಲಿಸಿತು. ರಾಜಸ್ಥಾನ್ ವಿರುದ್ಧ ಆರ್ಸಿಬಿ 112 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಕನಸು ಇನ್ನೂ ಜೀವಂತವಾಗಿದೆ. ರಾಜಸ್ಥಾನ್ ತಂಡ 59 ರನ್ಗಳಿಗೆ ಆಲೌಟ್ ಮಾಡಿರುವ ಆರ್ಸಿಬಿ ಇದೀಗ +0.166 ನೆಟ್ ರನ್ರೇಟ್ ಹೊಂದುವ ಮೂಲಕ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿದೆ.

ಆರ್ಸಿಬಿ 12 ಪಂದ್ಯಗಳಲ್ಲಿ 6ರಲ್ಲಿ ಸೋತು 6ರಲ್ಲಿ ಗೆದ್ದು 12 ಅಂಕ ಗಳಿಸಿದೆ. ಈ ವೇಳೆ +0.116 ನೆಟ್ ರನ್ರೇಟ್ ಮೂಲಕ 5ನೇ ಸ್ಥಾನಕ್ಕೇರಿದೆ. ಈ ಮೂಲಕ ರಾಜಸ್ಥಾನ್ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ. ರಾಜಸ್ಥಾನ್ +0.140 ನೆಟ್ ರನ್ರೇಟ್ ಹೊಂದಿದೆ. ರಾಜಸ್ಥಾನ್ ಗೆಲುವಿನ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಆಸೆ ಉಳಿದಿದ್ದರೂ ಸಹ ಆರ್ಸಿಬಿ ತಂಡಕ್ಕೆ ಇನ್ನು ಕೇವಲ 2 ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಉಳಿದಿರುವ ಪಂದ್ಯಗಳಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಲೇಬೇಕಿದೆ.

ಈ ರೀತಿ ಆದ್ದಲ್ಲಿ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಕೇವಲ ಆರ್ಸಿಬಿ ತಂಡ ತಾನು ಮಾತ್ರ ಗೆದ್ದರೆ ಸಾಕಾಗುವುದಿಲ್ಲ. ಹೌದು, ಆರ್ಸಿಬಿ ಗೆಲುವಿನ ಜೊತೆ ಲಕ್ನೋ ಸೂಪರ್ ಜೈಂಟ್ಸ್ ಕನಿಷ್ಠ ಒಂದು ಪಂದ್ಯವನ್ನಾದರೂ ಸೋಲಲೇಬೇಕಿದೆ. ಇನ್ನು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ 14 ಅಂಕ ಇರುವುದರಿಂದ ಮುಂದಿನ 2 ಪಂದ್ಯ ಗೆದ್ದು 18 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ಆದರೆ ಆರ್ಸಿಬಿ 4ನೇ ಸ್ಥಾನದ ಮೂಲಕ 16 ಅಂಕ ಗಳಿಸಿ ಪ್ಲೇಆಫ್ಗೆ ಬರಲಿದೆ. ಅತ್ತ ಲಕ್ನೋ ತಂಡಕ್ಕೆ 2 ಪಂದ್ಯವಿದ್ದು, ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೂ ಸಹ 15 ಅಂಕ ಆಗಲಿದೆ. ಆಗ 3 ಪಂದ್ಯಗಳನ್ನು ಆರ್ಸಿಬಿ ಗೆದ್ದರೆ 16 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಉಳಿಯಲಿದೆ. ಈ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ipl 2023 rcb playoff scenario chances after won rr.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm